ಸಬ್ಸಿಡಿ ಅಡುಗೆ ಅನಿಲ 
ವಾಣಿಜ್ಯ

ಪ್ರತಿ ತಿಂಗಳು ಸಬ್ಸಿಡಿ ಎಲ್ ಪಿಜಿ ದರ 4 ರೂ. ಏರಿಕೆಗೆ ಕೇಂದ್ರ ಸರ್ಕಾರದ ಆದೇಶ

2018 ರ ಮಾರ್ಚ್ ವೇಳೆಗೆ ಎಲ್ ಪಿಜಿ ಸಿಲಿಂಡರ್ ಗಳ ಸಬ್ಸಿಡಿಯನ್ನು ತೆಗೆದುಹಾಕುವ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರ ಪ್ರತಿ ತಿಂಗಳು ಸಬ್ಸಿಡಿ ಎಲ್ ಪಿಜಿ ದರವನ್ನು 4 ರೂ. ಏರಿಕೆ ಮಾಡಲು ಸರ್ಕಾರಿ ಸ್ವಾಮ್ಯದ

ನವದೆಹಲಿ: 2018 ರ ಮಾರ್ಚ್ ವೇಳೆಗೆ ಎಲ್ ಪಿಜಿ ಸಿಲಿಂಡರ್ ಗಳ ಸಬ್ಸಿಡಿಯನ್ನು ತೆಗೆದುಹಾಕುವ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರ ಪ್ರತಿ ತಿಂಗಳು ಸಬ್ಸಿಡಿ ಎಲ್ ಪಿಜಿ ದರವನ್ನು 4 ರೂ. ಏರಿಕೆ ಮಾಡಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಆದೇಶ ನೀಡಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. 
ಸಬ್ಸಿಡಿಯನ್ನು ಸ್ಥಗಿತಗೊಳಿಸುವ ನಿಟ್ಟಿನಲ್ಲಿ 14.2 ಕೆಜಿ ಸಬ್ಸಿಡಿ ಎಲ್ ಪಿಜಿ ಸಿಲಿಂಡರ್ ದರವನ್ನು 2.ರೂ ಏರಿಕೆ ( ವ್ಯಾಟ್ ಹೊರತುಪಡಿಸಿ) ಮಾಡುವಂತೆ ಕೇಂದ್ರ ಸರ್ಕಾರ ಈ ಹಿಂದೆಯೂ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಆದೇಶ ನೀಡಿತ್ತು. ಈಗ ದರ ಏರಿಕೆಯನ್ನು ದುಪ್ಪಟ್ಟುಗೊಳಿಸಲಾಗಿದ್ದು, 2018 ರ ಮಾರ್ಚ್ ವರೆಗೆ ಅಥವಾ ಸಬ್ಸಿಡಿಯನ್ನು ತೆಗೆದುಹಾಕುವವರೆಗೆ ಪ್ರತಿ ತಿಂಗಳು ಎಲ್ ಪಿಜಿ ದರ 4 ರೂ. ಗಳಿಗೆ ಏರಿಕೆ ಮಾಡಲು ಆದೇಶ ನೀಡಲಾಗಿದೆ ಎಂದು ಲೋಕಸಭೆಗೆ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. 
ಪ್ರಸ್ತುತ ಸಬ್ಸಿಡಿ ದರದಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಸಿಲಿಂಡರ್ ನೀಡಲಾಗುತ್ತಿದ್ದು, ಅದಕ್ಕಿಂತ ಹೆಚ್ಚಿನದ್ದನ್ನು ಮಾರುಕಟ್ಟೆ ದರದಲ್ಲಿ ಖರೀದಿಸಬೇಕಾಗಿದೆ. 2016 ರ ಜು.1 ರಿಂದ 14.2 ಕೆಜಿಯ ಎಲ್ ಪಿಜಿ ಸಿಲಿಂಡರ್ ದರವನ್ನು ಪ್ರತಿ ತಿಂಗಳಿಗೆ 2 ರೂಪಾಯಿ ಏರಿಕೆ ಮಾಡಲು ಅವಕಾಶ ಇತ್ತು. ಈ ಆದೇಶ ಬಂದ ನಂತರ ಈ ವರೆಗೂ 10 ಸಂದರ್ಭಗಳಲ್ಲಿ ತೈಲ ಕಂಪನಿಗಳು ದರ ಏರಿಕೆ ಮಾಡಿವೆ. 
ಈಗ ಮೇ.30 ರಂದು ಆದೇಶ ಪರಿಷ್ಕರಣೆ ಮಾಡಿರುವ ಕೇಂದ್ರ ಸರ್ಕಾರ ಜೂ.1 ರಿಂದ ಜಾರಿಗೆ ಬರುವಂತೆ  14.2 ಕೆಜಿಯ ಎಲ್ ಪಿಜಿ ಸಿಲಿಂಡರ್ ದರವನ್ನು (ವ್ಯಾಟ್ ಹೊರತುಪಡಿಸಿ) ಪ್ರತಿ ತಿಂಗಳು 4 ರೂ ಏರಿಕೆ ಮಾಡಲು ಆದೇಶ ನೀಡಿದೆ. ಪರಿಷ್ಕೃತ ಆದೇಶದ ಬಳಿಕ ತೈಲ ಕಂಪನಿಗಳು ಎರಡು ಬಾರಿ ದರ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಪ್ರತಿ 14.2 ಕೆಜಿ ಸಬ್ಸಿಡಿ ಸಿಲಿಂಡರ್ ದರ 477.46 ರೂಗಳಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT