ಸಬ್ಸಿಡಿ ಅಡುಗೆ ಅನಿಲ 
ವಾಣಿಜ್ಯ

ಪ್ರತಿ ತಿಂಗಳು ಸಬ್ಸಿಡಿ ಎಲ್ ಪಿಜಿ ದರ 4 ರೂ. ಏರಿಕೆಗೆ ಕೇಂದ್ರ ಸರ್ಕಾರದ ಆದೇಶ

2018 ರ ಮಾರ್ಚ್ ವೇಳೆಗೆ ಎಲ್ ಪಿಜಿ ಸಿಲಿಂಡರ್ ಗಳ ಸಬ್ಸಿಡಿಯನ್ನು ತೆಗೆದುಹಾಕುವ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರ ಪ್ರತಿ ತಿಂಗಳು ಸಬ್ಸಿಡಿ ಎಲ್ ಪಿಜಿ ದರವನ್ನು 4 ರೂ. ಏರಿಕೆ ಮಾಡಲು ಸರ್ಕಾರಿ ಸ್ವಾಮ್ಯದ

ನವದೆಹಲಿ: 2018 ರ ಮಾರ್ಚ್ ವೇಳೆಗೆ ಎಲ್ ಪಿಜಿ ಸಿಲಿಂಡರ್ ಗಳ ಸಬ್ಸಿಡಿಯನ್ನು ತೆಗೆದುಹಾಕುವ ಉದ್ದೇಶ ಹೊಂದಿರುವ ಕೇಂದ್ರ ಸರ್ಕಾರ ಪ್ರತಿ ತಿಂಗಳು ಸಬ್ಸಿಡಿ ಎಲ್ ಪಿಜಿ ದರವನ್ನು 4 ರೂ. ಏರಿಕೆ ಮಾಡಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಆದೇಶ ನೀಡಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. 
ಸಬ್ಸಿಡಿಯನ್ನು ಸ್ಥಗಿತಗೊಳಿಸುವ ನಿಟ್ಟಿನಲ್ಲಿ 14.2 ಕೆಜಿ ಸಬ್ಸಿಡಿ ಎಲ್ ಪಿಜಿ ಸಿಲಿಂಡರ್ ದರವನ್ನು 2.ರೂ ಏರಿಕೆ ( ವ್ಯಾಟ್ ಹೊರತುಪಡಿಸಿ) ಮಾಡುವಂತೆ ಕೇಂದ್ರ ಸರ್ಕಾರ ಈ ಹಿಂದೆಯೂ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಿಗೆ ಆದೇಶ ನೀಡಿತ್ತು. ಈಗ ದರ ಏರಿಕೆಯನ್ನು ದುಪ್ಪಟ್ಟುಗೊಳಿಸಲಾಗಿದ್ದು, 2018 ರ ಮಾರ್ಚ್ ವರೆಗೆ ಅಥವಾ ಸಬ್ಸಿಡಿಯನ್ನು ತೆಗೆದುಹಾಕುವವರೆಗೆ ಪ್ರತಿ ತಿಂಗಳು ಎಲ್ ಪಿಜಿ ದರ 4 ರೂ. ಗಳಿಗೆ ಏರಿಕೆ ಮಾಡಲು ಆದೇಶ ನೀಡಲಾಗಿದೆ ಎಂದು ಲೋಕಸಭೆಗೆ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. 
ಪ್ರಸ್ತುತ ಸಬ್ಸಿಡಿ ದರದಲ್ಲಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಸಿಲಿಂಡರ್ ನೀಡಲಾಗುತ್ತಿದ್ದು, ಅದಕ್ಕಿಂತ ಹೆಚ್ಚಿನದ್ದನ್ನು ಮಾರುಕಟ್ಟೆ ದರದಲ್ಲಿ ಖರೀದಿಸಬೇಕಾಗಿದೆ. 2016 ರ ಜು.1 ರಿಂದ 14.2 ಕೆಜಿಯ ಎಲ್ ಪಿಜಿ ಸಿಲಿಂಡರ್ ದರವನ್ನು ಪ್ರತಿ ತಿಂಗಳಿಗೆ 2 ರೂಪಾಯಿ ಏರಿಕೆ ಮಾಡಲು ಅವಕಾಶ ಇತ್ತು. ಈ ಆದೇಶ ಬಂದ ನಂತರ ಈ ವರೆಗೂ 10 ಸಂದರ್ಭಗಳಲ್ಲಿ ತೈಲ ಕಂಪನಿಗಳು ದರ ಏರಿಕೆ ಮಾಡಿವೆ. 
ಈಗ ಮೇ.30 ರಂದು ಆದೇಶ ಪರಿಷ್ಕರಣೆ ಮಾಡಿರುವ ಕೇಂದ್ರ ಸರ್ಕಾರ ಜೂ.1 ರಿಂದ ಜಾರಿಗೆ ಬರುವಂತೆ  14.2 ಕೆಜಿಯ ಎಲ್ ಪಿಜಿ ಸಿಲಿಂಡರ್ ದರವನ್ನು (ವ್ಯಾಟ್ ಹೊರತುಪಡಿಸಿ) ಪ್ರತಿ ತಿಂಗಳು 4 ರೂ ಏರಿಕೆ ಮಾಡಲು ಆದೇಶ ನೀಡಿದೆ. ಪರಿಷ್ಕೃತ ಆದೇಶದ ಬಳಿಕ ತೈಲ ಕಂಪನಿಗಳು ಎರಡು ಬಾರಿ ದರ ಏರಿಕೆ ಮಾಡಿದ್ದು, ದೆಹಲಿಯಲ್ಲಿ ಪ್ರತಿ 14.2 ಕೆಜಿ ಸಬ್ಸಿಡಿ ಸಿಲಿಂಡರ್ ದರ 477.46 ರೂಗಳಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT