ಅಕ್ರಮ ಹಣ ವರ್ಗಾವಣೆ 
ವಾಣಿಜ್ಯ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಶಂಕೆ; ಎರಡು ಸಂಸ್ಥೆಗಳ ಮೇಲೆ ಐಟಿ ದಾಳಿ

ಹೂಡಿಕೆ ಮೇಲೆ ಹೆಚ್ಚು ಪ್ರಮಾಣದ ಆದಾಯ ನೀಡುವ ಭರವಸೆ ನೀಡುತ್ತಿದ್ದ ಎರಡು ಸಂಸ್ಥೆಗಳ ವಿರುದ್ಧ ಅಕ್ರಮ ಹಣವರ್ಗಾವಣೆ ಶಂಕೆಯಡಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರು: ಹೂಡಿಕೆ ಮೇಲೆ ಹೆಚ್ಚು ಪ್ರಮಾಣದ ಆದಾಯ ನೀಡುವ ಭರವಸೆ ನೀಡುತ್ತಿದ್ದ ಎರಡು ಸಂಸ್ಥೆಗಳ ವಿರುದ್ಧ ಅಕ್ರಮ ಹಣವರ್ಗಾವಣೆ ಶಂಕೆಯಡಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 
ಅಂಬಿಡಂಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಮತ್ತು ಇಜಾಜ್ ಬಿಲ್ಡರ್ ಗಳು ಮತ್ತು ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಮೇಲೆ ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಜೂ.20 ರಂದು ನಡೆದಿರುವ ದಾಳಿ ಇನ್ನೂ ಎರಡು ದಿನ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 
ಸಯೀದ್ ಅಹ್ಮದ್ ಫರೀದ್ ಹಾಗೂ ಸಯೀದ್ ಅಹ್ಮದ್ ಅಫಕ್ ಎಂಬ ತಂದೆ-ಮಗ ನಡೆಸುತ್ತಿದ್ದ ಅಂಬಿಡಂಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಬಗ್ಗೆ ಈಗಾಗಲೇ ಪೊಲೀಸರು ಎಫ್ಐ ಆರ್ ದಾಖಲಿಸಿದ್ದು, ಡಿ.2016 ರಲ್ಲಿ 
ಹೂಡಿಕೆ ಮೇಲೆ ಹೆಚ್ಚು ಪ್ರಮಾಣದ ಆದಾಯ ನೀಡುವ  ಬೋಗಸ್ ಯೋಜನೆಯನ್ನು ಪ್ರಾರಂಭಿಸಿ ಈ ವರೆಗೂ 200 ಕೋಟಿ ರೂಪಾಯಿ ಮೊತ್ತವನ್ನು ಸಂಗ್ರಹಿಸಿದ್ದರು ಎಂದು ತಿಳಿದುಬಂದಿದೆ. 
ಹೂಡಿಕೆ ಮೇಲೆ ಪ್ರತಿ ತಿಂಗಳು ಶೇ.45 ರಷ್ಟು ರಿಟನ್ಸ್ ನೀಡುವುದಾಗಿ ಅಂಬಿಡಂಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಭರವಸೆ ನೀಡಿತ್ತು. ಇಷ್ಟೇ ಅಲ್ಲದೇ ಚೈನ್ ಲಿಂಕ್ ಮೂಲಕ ಶೇ.5 ರಷ್ಟು ಕಮಿಷನ್ ನೀಡುವುದಾಗಿಯೂ ಹೇಳಿತ್ತು. ಈ ಯೋಜನೆಯಡಿ 500 ಕ್ಕೂ ಹೆಚ್ಚು ಜನರು ಹೂಡಿಕೆ ಮಾಡಿದ್ದಾರೆಂದು ಅಂದಾಜಿಸಲಾಗಿದೆ. ಐಟಿ ಅಧಿಕಾರಿಗಳು ದಾಳಿ ನಡೆಸುವ ವೇಳೆಯಲ್ಲಿ 300 ಜನರು ಹೂಡಿಕೆ ಮಾಡಲು ಸಿದ್ಧರಾಗಿ ಬಂದಿದ್ದರು ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT