ಸಣ್ಣ ಹೂಡಿಕೆದಾರರು 
ವಾಣಿಜ್ಯ

ಸಣ್ಣ ಹೂಡಿಕೆದಾರರಿಗೆ ಹೊಡೆತ: ಉಳಿತಾಯ ಯೋಜನೆಗಳ ಬಡ್ಡಿದರ ಕಡಿತಗೊಳಿಸಿದ ಸರ್ಕಾರ

ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಕಿಸಾನ್ ವಿಕಾಸ್ ಪತ್ರ ಹಾಗೂ ಸುಕನ್ಯ ಸಂವೃದ್ಧಿಯಂತಹ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಕೇಂದ್ರ ಸರ್ಕಾರ ಶೇ.0.1 ರಷ್ಟು ಕಡಿತಗೊಳಿಸಿದ್ದು...

ನವದೆಹಲಿ: ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್), ಕಿಸಾನ್ ವಿಕಾಸ್ ಪತ್ರ ಹಾಗೂ ಸುಕನ್ಯ ಸಂವೃದ್ಧಿಯಂತಹ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಕೇಂದ್ರ ಸರ್ಕಾರ ಶೇ.0.1 ರಷ್ಟು ಕಡಿತಗೊಳಿಸಿದ್ದು, ಸಣ್ಣ ಹೂಡಿಕೆದಾರರಿಗೆ ಹೊಡೆತ ಬಿದ್ದಂತಾಗಿದೆ. 
ಶೇ.4 ರಷ್ಟಿದ್ದ ಉಳಿತಾಯ ಠೇವಣಿಗಳ ಮೇಲಿನ ವಾರ್ಷಿಕ ಬಡ್ಡಿದರವನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗಿದೆ. ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಕಳೆದ ವರ್ಷದ ಏಪ್ರಿಲ್ ನಿಂದ ತ್ರೈಮಾಸಿಕ ಆಧಾರದ ಮೇಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಅದರಂತೆಯೇ ಈಗಲೂ ಬಡ್ಡಿದರವನ್ನು ಪರಿಷ್ಕರಣೆ ಮಾಡಲಾಗಿದ್ದು, ಪಿಪಿಎಫ್ ಉಳಿತಾಯ ಯೋಜನೆಯಡಿಯಲ್ಲಿ ವಾರ್ಷಿಕ ಬಡ್ಡಿ ದರ ಶೇ.7.8 ರಷ್ಟಾಗಲಿದೆ ಎಂದು ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯ ಹೇಳಿದೆ. 
ಕಿಸಾನ್ ವಿಕಾಸ್ ಪತ್ರ ಯೋಜನೆಯಲ್ಲಿನ ಹೂಡಿಕೆ ಶೇ.7.5 ರಷ್ಟು ಬಡ್ಡಿ ನೀಡಲಿದ್ದು, 115 ತಿಂಗಳಲ್ಲಿ ಮೆಚ್ಯೂರ್ ಆಗಲಿದೆ. ಪ್ರಸ್ತುತ ಶೇ.8.4 ರಷ್ಟು ಬಡ್ಡಿ ದರ ಹೊಂದಿರುವ ಸುಕನ್ಯ ಸಂವೃದ್ಧಿ ಯೋಜನೆಯ ಬಡ್ಡಿ ದರ ಶೇ.8.3 ರಷ್ಟಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT