ಸಾಂದರ್ಭಿಕ ಚಿತ್ರ 
ವಾಣಿಜ್ಯ

ಜಿಎಸ್ ಟಿಯ ಆರಂಭಿಕ ಸಮಸ್ಯೆಗಳನ್ನು 2 ತಿಂಗಳಲ್ಲಿ ಬಗೆಹರಿಸಲಾಗುವುದು: ಮುಖ್ಯ ಆರ್ಥಿಕ ಸಲಹೆಗಾರ

ಸರಕು ಮತ್ತು ಸೇವಾ ತೆರಿಗೆ ಜಾರಿಯ ಆರಂಭಿಕ ಸಮಸ್ಯೆಗಳನ್ನು ಇನ್ನೆರಡು ತಿಂಗಳಲ್ಲಿ ಬಗೆಹರಿಸುವ...

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ ಜಾರಿಯ ಆರಂಭಿಕ ಸಮಸ್ಯೆಗಳನ್ನು ಇನ್ನೆರಡು ತಿಂಗಳಲ್ಲಿ ಬಗೆಹರಿಸುವ ವಿಶ್ವಾಸವನ್ನು ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣ್ಯನ್ ವ್ಯಕ್ತಪಡಿಸಿದ್ದಾರೆ.
ಆರಂಭದಲ್ಲಿ ಕೆಲವು ಅಡೆತಡೆಗಳು, ತೊಂದರೆಗಳು ಬರುವುದು ಸಹಜ. ಆದರೆ ಅವುಗಳನ್ನು ಎರಡು ತಿಂಗಳಲ್ಲಿ ಬಗೆಹರಿಸುವ ಸಾಧ್ಯತೆಯಿದೆ ಎಂದು ಸುಬ್ರಹ್ಮಣ್ಯನ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಜಿಎಸ್ ಟಿಯನ್ನು ವಿಚ್ಛಿದ್ರಕಾರಕ ಬದಲಾವಣೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ ಭಾಷಣದಲ್ಲಿ ವ್ಯಾಖ್ಯಾನಿಸಿದ್ದನ್ನು ಪ್ರಸ್ತಾಪಿಸಿದ ಅರವಿಂದ ಸುಬ್ರಹ್ಮಣ್ಯನ್,ಆರ್ಥಿಕತೆಯ ಬೆಳವಣಿಗೆಯ ಕ್ಷಣಗಳಿಗೆ ಯಾವುದೇ ಪರಿಣಾಮ ಬೀರದಂತೆ ಆರಂಭಿಕ ಹಂತದ ಕೆಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.
ಆರಂಭಿಕ ಹಂತದಲ್ಲಿರುವ ಕೆಲವು ಸಮಸ್ಯೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಬಗೆಹರಿಸಲು ನಿಶ್ಚಯಿಸಿವೆ ಎಂದು ಕೇಂದ್ರ ಜಾಗೃತ ಆಯುಕ್ತ ಕೆ.ವಿ. ಚೌಧರಿ ತಿಳಿಸಿದ್ದಾರೆ.ಜಿಎಸ್ ಟಿ ಒಂದು ಮುಖ್ಯವಾದ ನಡೆಯಾಗಿದ್ದು, ಇದು ಕಪ್ಪು ಮಾರುಕಟ್ಟೆಯನ್ನು ತಡೆಗಟ್ಟಿ ವ್ಯಾಪಾರ ವಹಿವಾಟು ಸುಗಮವಾಗಲು ಸಹಾಯ ಮಾಡುತ್ತದೆ ಎಂದರು.
ಆದಾಯ ತಟಸ್ಥ ಜಿಎಸ್ ಟಿ ಎಂದು ಕೇಂದ್ರ ಸರ್ಕಾರ ಹೇಳಿಕೊಂಡು ಬಂದಿದ್ದು, ಇದರಿಂದ ಸರ್ಕಾರಕ್ಕೆ ಯಾವುದೇ ಹೆಚ್ಚುವರಿ ಆದಾಯವಿಲ್ಲ ಎಂದರು.
ದೇಶದ ಆರ್ಥಿಕ ಬೆಳವಣಿಗೆಗೆ ಜಿಎಸ್ ಟಿ ಸಹಾಯವಾಗುತ್ತದೆಯೇ ಎಂದು ಕೇಳಿದ್ದಕ್ಕೆ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ, ಕಾದು ನೋಡೋಣ. ಈ ಸಮಯದಲ್ಲಿ ಊಹಿಸುವುದು ಕಷ್ಟ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT