ಎಸ್‌ಬಿಐ 
ವಾಣಿಜ್ಯ

ಎಸ್‌ಬಿಐ ಉಳಿತಾಯ ಖಾತೆಯಲ್ಲಿ ಕನಿಷ್ಟ ಬ್ಯಾಲೆನ್ಸ್ ಹಣವಿಲ್ಲದಿದ್ದರೆ ಏಪ್ರಿಲ್ 1ರಿಂದ ದಂಡ!

ನೋಟು ನಿಷೇಧದ ಬಳಿಕ ರಾಷ್ಟ್ರೀಕೃತ ಬ್ಯಾಂಕ್ ಎಸ್‌ಬಿಐ ಹೊಸದೊಂದು ನೀತಿಯನ್ನು ಪ್ರಕಟಿಸಿದ್ದು, ಎಸ್ಬಿಐ ಉಳಿತಾಯ ಖಾತೆ ಹೊಂದಿರುವವರು ನೀವು ಮೆಟ್ರೋ...

ಮುಂಬೈ: ನೋಟು ನಿಷೇಧದ ಬಳಿಕ ರಾಷ್ಟ್ರೀಕೃತ ಬ್ಯಾಂಕ್ ಎಸ್‌ಬಿಐ ಹೊಸದೊಂದು ನೀತಿಯನ್ನು ಪ್ರಕಟಿಸಿದ್ದು, ಎಸ್‌ಬಿಐ ಉಳಿತಾಯ ಖಾತೆ ಹೊಂದಿರುವವರು ನೀವು ಮೆಟ್ರೋ ನಗರದಲ್ಲೇ ವಾಸಿಸುತ್ತಿದ್ದಲ್ಲಿ ಕನಿಷ್ಠ 5 ಸಾವಿರ ರು ಠೇವಣಿ ಇಟ್ಟಿರಬೇಕು ಇಲ್ಲದಿದ್ದರೆ ದಂಡ ಹಾಕಲಿದೆ. 
ಏಪ್ರಿಲ್ 1 ರಿಂದ ನೀತಿ ಜಾರಿಗೆ ಬರಲಿದ್ದು ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ, ಮೆಟ್ರೋಪಾಲಿಟನ್ ನಗರಗಳಲ್ಲಿ ಈ ದಂಡದ ಮೊತ್ತ ಹೆಚ್ಚಿರಲಿದೆ. ಮೆಟ್ರೋಪಾಲಿಟನ್ ನಗರಗಳಲ್ಲಿ ಮಾಸಿಕ ಸರಾಸರಿ 5 ಸಾವಿರ, ನಗರಗಳಲ್ಲಿ 3 ಸಾವಿರ, ಅರೆನಗರಗಳಲ್ಲಿ 2 ಸಾವಿರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 1000 ರುಪಾಯಿ ಠೇವಣಿ ಹೊಂದಿರಬೇಕು. 
ಮೆಟ್ರೋ ಸಿಟಿಯ ಗ್ರಾಹಕರು ಖಾತೆಯಲ್ಲಿ 5 ಸಾವಿರ ಮೊತ್ತ ಇರಲೇಬೇಕು. ಅದು ಶೇ.50ರಷ್ಟು ಕಡಿಮೆ ಆಯಿತೆಂದರೆ 50 ರುಪಾಯಿ ತಂಡದ ಜತೆಗೆ ಸೇವಾ ತೆರಿಗೆಯನ್ನು ಕಟ್ಟಬೇಕು. ಇನ್ನು ಶೇ. 70ರಷ್ಟು ಕಡಿಮೆ ಆದರೆ 75 ರುಪಾಯಿ ಮತ್ತು ಸೇವಾ ತೆರಿಗೆ ಕಟ್ಟಬೇಕು. ಒಂದು ವೇಳೆ ಶೇ.75ಕ್ಕಿಂತ ಹೆಚ್ಚು ಹಣ ತೆಗೆದರೆ 100 ರುಪಾಯಿ ಜತೆಗೆ ಸೇವಾ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. 
ಎಸ್‌ಬಿಐ 2012ರಲ್ಲಿ ಹೊಸ ಗ್ರಾಹಕರನ್ನು ಸೆಳೆಯಲು ದಂಡನೀತಿಯನ್ನು ಕೈಬಿಟ್ಟಿತ್ತು. ಇದೀಗ ಗ್ರಾಹಕರ ಹಣವನ್ನು ಆದಷ್ಟು ಬ್ಯಾಂಕ್ ನಲ್ಲೇ ಇರುವಂತೆ ನೋಡಿಕೊಳ್ಳಲು ಬ್ಯಾಂಕ್ ಈ ನಿರ್ಧಾರಕ್ಕೆ ಬಂದಿದೆ. ಖಾತೆಯಲ್ಲಿ ಮೊತ್ತ ಇದ್ದಷ್ಟು ಬ್ಯಾಂಕಿಗೆ ಲಾಭವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT