ದೂರಸಂಪರ್ಕ ಇಲಾಖೆ ನಿರ್ದೇಶಕಿ ಅರುಣಾ ಸುಂದರರಾಜನ್ 
ವಾಣಿಜ್ಯ

ಮಾರ್ಚ್ 2019ರೊಳಗೆ ಎಲ್ಲಾ ಗ್ರಾಮ ಪಂಚಾಯತ್ ಗಳಿಗೆ ಹೈ ಸ್ಪೀಡ್ ಬ್ರಾಡ್ ಬಾಂಡ್ ಸೇವೆ: ಅರುಣಾ ಸುಂದರರಾಜನ್

ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ....

ನವದೆಹಲಿ: ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಈ ಯೋಜನೆಯಡಿ ಮಾರ್ಚ್ 2019ರ ವೇಳೆಗೆ ಎಲ್ಲಾ ಪಂಚಾಯತ್ ಗಳಲ್ಲಿ ಅತಿ ವೇಗದ ಬ್ರಾಡ್ ಬ್ಯಾಂಡ್ ಸೇವೆಯನ್ನು ನೀಡಲಾಗುತ್ತದೆ. ರಿಲಯನ್ಸ್ ಜಿಯೊ, ಭಾರ್ತಿ ಏರ್ ಟೆಲ್, ಐಡಿಯಾ ಸೆಲ್ಯುಲರ್ ಮತ್ತು ವೊಡಫೋನ್ ಕಂಪೆನಿಗಳು ಭಾರತ್ ನೆಟ್ ಯೋಜನೆಯಡಿ ಜನತೆಗೆ ಸೇವೆಗಳನ್ನು ಒದಗಿಸಲು ಆಸಕ್ತಿ ತಳೆದಿವೆ ಎಂದು ದೂರಸಂಪರ್ಕ ಇಲಾಖೆ ಕಾರ್ಯದರ್ಶಿ ಅರುಣಾ ಸುಂದರರಾಜನ್ ತಿಳಿಸಿದ್ದಾರೆ. ಭಾರತ್ ನೆಟ್ ಯೋಜನೆಗೆ ಒಟ್ಟು ವೆಚ್ಚ 45,000 ಕೋಟಿ ರೂಪಾಯಿ ವೆಚ್ಚ ತಗುಲಲಿದ್ದು, ಅದರಲ್ಲಿ 11,200 ಕೋಟಿ ರೂಪಾಯಿ ಮೊದಲ ಹಂತಕ್ಕೆ ವೆಚ್ಚವಾಗಿದೆ.
ಯೋಜನೆಯ ಮೊದಲನೇ ಹಂತದಲ್ಲಿ 1 ಲಕ್ಷ ಗ್ರಾಮ ಪಂಚಾಯತ್ ಗಳನ್ನು ಸಂಪರ್ಕಿಸಲಾಗಿದ್ದು, ಈ ವರ್ಷಾಂತ್ಯದೊಳಗೆ ಪೂರ್ಣಗೊಳಿಸಲಾಗುತ್ತದೆ. ದೂರ ಸಂಪರ್ಕ ನಿರ್ವಾಹಕರು ಗ್ರಾಮಾಂತರ ಪ್ರದೇಶದ ಮನೆಗಳಿಗೆ ಕನಿಷ್ಠ 2 ಮೆಗಾಬೈಟ್ ಪ್ರತಿ ಸೆಕೆಂಡ್ ಗೆ ಇಂಟರ್ ನೆಟ್ ಸೇವೆಯನ್ನು ಒದಗಿಸಲಿದ್ದಾರೆ ಎಂದು ಸುಂದರರಾಜನ್ ಹೇಳಿದರು.
 ಅಸ್ಸಾಂ, ಹರ್ಯಾಣ, ಮಧ್ಯ ಪ್ರದೇಶ, ರಾಜಸ್ತಾನ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಮ್ಮು-ಕಾಶ್ಮೀರ ಮತ್ತು ಸಿಕ್ಕಿಂ ರಾಜ್ಯಗಳು  ಬಿಎಸ್ಎನ್ಎಲ್ ನ ಆಪ್ಟಿಕಲ್ ಫೈಬರ್ ನಡಿ ಸೇರ್ಪಡೆಯಾಗಲಿವೆ. ಮೊದಲ ಹಂತದಲ್ಲಿ ಈ ರಾಜ್ಯಗಳು ಸೇರ್ಪಡೆಯಾಗಿರಲಿಲ್ಲ.  ಈ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಬ್ರಾಡ್ ಬ್ಯಾಂಡ್ ಸೇವೆ ದರ ಬಹಳಷ್ಟು ಕಡಿಮೆಯಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!