ಅರುಣ್ ಜೇಟ್ಲಿ 
ವಾಣಿಜ್ಯ

ಸರ್ಕಾರ ಬಂಡವಾಳದಾರರ ಸಾಲ ಮನ್ನ ಮಾಡಿಲ್ಲ: ಅರುಣ್ ಜೆಟ್ಲಿ

ಸರ್ಕಾರ ಬಂಡವಾಳದಾರರ ಸಾಲ ಮನ್ನಾ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.

ನವದೆಹಲಿ: ಸರ್ಕಾರ ಬಂಡವಾಳದಾರರ ಸಾಲ ಮನ್ನಾ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ. 
ಬಂಡವಾಳದಾರರ ಸಾಲವನ್ನು ಮನ್ನಾ ಮಾಡಲಾಗಿದೆ ಎಂಬ ವದಂತಿಗಳ ಬಗ್ಗೆ ಅರುಣ್ ಜೇಟ್ಲಿ ತಮ್ಮ ಬ್ಲಾಗ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಈಗ ಎನ್ ಪಿಎ ಆಗಿರುವ ಲೋನ್ ಗಳನ್ನು 2008-2014 ರ ಅವಧಿಯಲ್ಲಿ ಯಾರ ಆದೇಶದಂತೆ ಮಂಜೂರು ಮಾಡಲಾಗಿತ್ತು ಎಂದು ಅರುಣ್ ಜೇಟ್ಲಿ ಪ್ರಶ್ನಿಸಿದ್ದಾರೆ. 
ಯಾರ ಆಣತಿ, ಒತ್ತಡಕ್ಕೆ ಮಣಿದು 2008-2014 ರ ಅವಧಿಯಲ್ಲಿ ಬಂಡವಾಳದಾರರಿಗೆ ಬೃಹತ್ ಪ್ರಮಾಣದಲ್ಲಿ ಸಾಲ ಮಂಜೂರು ಮಾಡಲಾಗಿದೆ ಎಂಬುದನ್ನು ಈಗ ವದಂತಿ ಹಬ್ಬಿಸುತ್ತಿರುವವರನ್ನು ಸಾರ್ವಜನಿಕರು ಪ್ರಶ್ನಿಸಬೇಕಿದೆ ಎಂದು ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಸಾಲ ಪಡೆದವರು ವಾಪಸ್ ನೀಡುವುದು ತಡವಾದಾಗ ಹಿಂದಿನ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂಬುದನ್ನೂ ಸಾರ್ವಜನಿಕರು ಪ್ರಶ್ನಿಸಬೇಕಿದೆ ಎಂದು ಜೇಟ್ಲಿ ಹ್ಜೇಳಿದ್ದು,  ಎನ್ ಡಿಎ ಸರ್ಕಾರ ಬಂಡವಾಳದಾರರ ಸಾಲ ಮನ್ನಾ ಮಾಡಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT