ಏರ್ ಟೆಲ್ ನೊಂದಿಗೆ ಟಾಟಾ ಟೆಲಿ ಸರ್ವೀಸ್ ವಿಲೀನ 
ವಾಣಿಜ್ಯ

ಜಿಯೋ ಗೆ ಸೆಡ್ಡು, ಏರ್ ಟೆಲ್ ಜೊತೆ ಟಾಟಾ ಟೆಲಿ ಸರ್ವೀಸ್ ವಿಲೀನ

ಟಾಟಾ ಸಮೂಹದ ಟಾಟಾ ಟೆಲೆಸರ್ವಿಸಸ್ ಮೊಬೈಲ್ ಸೇವಾ ಸಂಸ್ಥೆ ದೇಶದ ಅತಿದೊಡ್ಡ ಟೆಲಿಕಾಂ ಸಂಸ್ಥೆಯಾದ ಭಾರ್ತಿ ಏರ್ಟೆಲ್ ಲಿಮಿಟೆಡ್ ನಲ್ಲಿ ವಿಲೀನವಾಗಿದೆ.

ಮುಂಬಯಿ: ಟಾಟಾ ಸಮೂಹದ ಟಾಟಾ ಟೆಲೆಸರ್ವಿಸಸ್ ಮೊಬೈಲ್ ಸೇವಾ ಸಂಸ್ಥೆ ದೇಶದ ಅತಿದೊಡ್ಡ ಟೆಲಿಕಾಂ ಸಂಸ್ಥೆಯಾದ ಭಾರ್ತಿ ಏರ್ಟೆಲ್ ಲಿಮಿಟೆಡ್ ನಲ್ಲಿ ವಿಲೀನವಾಗಿದೆ.  ಈ ಮೂಲಕ ಭಾರತ ಮಾರುಕಟ್ಟೆಯಲ್ಲಿ ವ್ಯಾಪಿಸುತ್ತಿರುವ ಜಿಯೋ ಪ್ರಭಾವವನ್ನು ಎದುರಿಸಲು ಏರ್ ಟೆಲ್ ಮುಂದಾಗಿದೆ.
ಲೆಸರ್ವಿಸಸ್ ಲಿಮಿಟೆಡ್‌ (ಟಿಟಿಎಂಎಲ್‌) ಮತ್ತು ಟಾಟಾ ಟೆಲಿಸರ್ವಿಸಸ್‌ ಮಹಾರಾಷ್ಟ್ರ ಲಿಮಿಟೆಡ್‌ನ (ಟಿಟಿಎಂಎಲ್‌) ಗಳನ್ನು ಏರ್ ಟೆಲ್ ನೊಂದಿಗೆ ವಿಲೀನಗೊಳಿಸಲಾಗಿದೆ. 
ಆದರೆ ಈ ವಿಲೀನ ಪ್ರಕ್ರಿಯೆಯಲ್ಲಿ ಏರ್‌ ಟೆಲ್‌, ಟಾಟಾ ಟೆಲಿ ಸರ್ವೀಸ್ ನ 40 ಸಾವಿರ ಕೋಟಿ ರೂ. ಸಾಲ ತೀರಿಸುವ ಅಥವಾ ಖರೀದಿಗೆ ನಗದು ಪಾವತಿಸುವ ಪ್ರಸ್ತಾವ ಇರುವುದಿಲ್ಲ.. ಹೀಗಾಗಿ ಏರ್‌ ಟೆಲ್‌ ಪಾಲಿಗೆ ಈ ಸ್ವಾಧೀನ ಪ್ರಕ್ರಿಯೆ ಅತ್ಯಂತ ಸುಲಭವಾಗಿದೆ. ತರಂಗಾಂತರಗಳ  ಖರೀದಿಗಾಗಿ  ಪಾವತಿಸಬೇಕಾದ 10 ಸಾವಿರ ಕೋಟಿ ರೂ. ನ್ನು ಸಹ ಟಾಟಾ ಸಂಸ್ಥೆಯೇ ಭರಿಸಲಿದೆ.
ವಿಲೀನದಿಂದಾಗಿ ಟಾಟಾ ಸಂಸ್ಥೆಯ 4 ಕೋಟಿ ಮೊಬೈಲ್‌ ಗ್ರಾಹಕರು ಏರ್‌ ಟೆಲ್‌ ನ ನೆಟ್ ವರ್ಕ್ ಅಡಿ ಬರಲಿದ್ದಾರೆ.
ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್‌ ಜಿಯೊ, ಭಾರತದಲ್ಲಿ ತನ್ನ ಮಾರುಕಟ್ಟೆಯನ್ನು ಅತ್ಯಂತ ವೇಗದಲ್ಲಿ ವಿಸ್ತರಿಸಿಕೊಳ್ಳುತ್ತಿದೆ. ಬೆಲೆ ಸಮರದ ಮೂಲಕ ಎದುರಾಳಿ ಸಂಸ್ಥೆಗಳಿಗೆ ತೀವ್ರ ಪೈಪೋಟಿ ನಿಡಿದೆ. ಇದಕ್ಕೆ ಪ್ರತಿಯಾಗಿ ಏರ್ ಟೆಲ್ ಮತ್ತು ಟಾಟಾ ಟೆಲಿ ಸರ್ವೀಸ್ ವಿಲೀನವು ಭಾರತ ದೂರ ಸಂಪರ್ಕ ಮಾರುಕಟ್ಟೆಯಲ್ಲಿ ಒಂದು ಮಹತ್ವದ ವಿದ್ಯಮಾನವಾಗಲಿದೆ.
‘ಈ ವಿಲೀನ ಪ್ರಕ್ರಿಯೆಯಿಂದ ಮಾರುಕಟ್ಟೆಯಲ್ಲಿನ ನಮ್ಮ ಪಾಲು ಹೆಚ್ಚಲಿದೆ’ ಎಂದು ಭಾರ್ತಿ ಏರ್‌ ಟೆಲ್‌ ನ ಅಧ್ಯಕ್ಷ ಸುನೀಲ್‌ ಭಾರ್ತಿ ಪ್ರತಿಕ್ರಿಯಿಸಿದ್ದಾರೆ. ‘ಭಾರ್ತಿ ಏರ್‌ಟೆಲ್‌ ಜತೆಗಿನ ಈ ಒಪ್ಪಂದವು ಟಾಟಾ ಸಮೂಹ ಮತ್ತು ಅದರ ಪಾಲುದಾರರ ಪಾಲಿಗೆ ಉತ್ತಮ ಪರಿಹಾರವಾಗಿದೆ’ ಎಂದು ಟಾಟಾ ಸನ್ಸ್‌ ಅಧ್ಯಕ್ಷ ಎನ್‌. ಚಂದ್ರಶೇಖರನ್‌  ಹೇಳಿದ್ದಾರೆ.  
ಏರ್‌ ಟೆಲ್‌ ನ ಪ್ರತಿಸ್ಪರ್ಧಿ ವೊಡಾಫೋನ್‌ ಮತ್ತು ಐಡಿಯಾ ಸೆಲ್ಯುಲರ್‌ ಸಹ ವಿಲೀನಗೊಳ್ಳುವುದಾಗಿ ಇದಾಗಲೇ ಘೋಷಣೆ ಮಾಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

SCROLL FOR NEXT