ಜಿಎಸ್ ಟಿ 
ವಾಣಿಜ್ಯ

ಸಣ್ಣ ಉದ್ಯಮ, ರೆಸ್ಟೋರೆಂಟ್ ಗಳಿಗೆ ಜಿಎಸ್ ಟಿ ಕಡಿಮೆ ಮಾಡಿ: ಹಣಕಾಸು ಸಚಿವರ ಸಮಿತಿ

ಸಣ್ಣ ಉದ್ಯಮ ಹಾಗೂ ರೆಸ್ಟೋರೆಂಟ್ ಗಳಿಗೆ ವಿಧಿಸಲಾಗುತ್ತಿರುವ ಜಿಎಸ್ ಟಿ ಯನ್ನು ಕಡಿಮೆ ಮಾಡಬೇಕೆಂದು ಹಣಕಾಸು ಸಚಿವರ ಸಮಿತಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

ನವದೆಹಲಿ: ಸಣ್ಣ ಉದ್ಯಮ ಹಾಗೂ ರೆಸ್ಟೋರೆಂಟ್ ಗಳಿಗೆ ವಿಧಿಸಲಾಗುತ್ತಿರುವ ಜಿಎಸ್ ಟಿ ಯನ್ನು ಕಡಿಮೆ ಮಾಡಬೇಕೆಂದು ಹಣಕಾಸು ಸಚಿವರ ಸಮಿತಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ. 
ರಾಜ್ಯಗಳ ಹಣಕಾಸು ಸಚಿವರಿರುವ ಸಮಿತಿ ಅ.29 ರಂದು ಈ ಸಲಹೆ ನೀಡಿದ್ದು, ರೆಸ್ಟೋರೆಂಟ್ ಗಳಿಗೆ ವಿಧಿಸಲಾಗುತ್ತಿರುವ ಜಿಎಸ್ ಟಿಯನ್ನು ಕಡಿಮೆ ಮಾಡಬೇಕು ಹಾಗೂ ಕಡಿಮೆ ಸಣ್ಣ ಉದ್ಯಮಿಗಳು, ವ್ಯಾಪಾರಿಗಳು, ಉತ್ಪಾದಕರಿಗೆ ಶೇ.1 ರಷ್ಟು ತೆರಿಗೆಯನ್ನು ವಿಧಿಸಬೇಕು ಎಂದು ಸಲಹೆ ನೀಡಿದೆ. 
ಈಗ ವಾರ್ಷಿಕವಾಗಿ 1 ಕೋಟಿ ರೂಪಾಯಿ ವಹಿವಾಟು ನಡೆಸುವ ರೆಸ್ಟೋರೆಂಟ್ ಹಾಗೂ ಉತ್ಪಾದಕರು ಅನುಕ್ರಮವಾಗಿ ಶೇ.2 ಹಾಗೂ 5 ರಷ್ಟು ತೆರಿಗೆಯನ್ನು ಪಾವತಿಸಬೇಕು, ಹಾಗೂ ವ್ಯಾಪಾರಿಗಳು ಶೇ.1 ರಷ್ಟು ಜಿಎಸ್ ಟಿ ಪಾವತಿ ಮಾಡಬೇಕೆಂಬ ನಿಯಮವಿದೆ. 
ಜಿಎಸ್ ಟಿ ಸಂಯೋಜನೆಯನ್ನು ಮತ್ತಷ್ಟು ಆಕರ್ಷಕವಾಗಿರುವಂತೆ ಮಾಡಲು ಈಗ ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮಾ ನೇತೃತ್ವದ ರಾಜ್ಯ ಹಣಕಾಸು ಸಚಿವರ ಸಮಿತಿ ಕೆಲವು ಸಲಹೆಗಳನ್ನು ನೀಡಿದ್ದು,  ಜಿಎಸ್ ಟಿ ಕಾಂಪೋಸಿಷನ್ ಯೋಜನೆಯಡಿ ಬಾರದ ಎಸಿ ಹಾಗೂ ನಾನ್ ಎಸಿ ರೆಸ್ಟೋರೆಂತ್ ಗಳ ನಡುವಿನ ವರ್ಗೀಕರಣವನ್ನು ತೆಗೆದುಹಾಕಿ, ಎಸಿ ಹಾಗೂ ನಾನ್ ಎಸಿ ರೆಸ್ಟೋರೆಂಟ್ ಗಳಿಗೆ ಇನ್ ಪುಟ್ ಕ್ರೆಡಿಟ್ ಸಹಿತ ಶೇ.12 ರಷ್ಟು ತೆರಿಗೆ ವಿಧಿಸಬೇಕು ಎಂದು ಹೇಳಿದೆ.   
ಇದೇ ವೇಳೆ 5 ಸ್ಟಾರ್ ಹೋಟೆಲ್ ನ ವರ್ಗೀಕರಣವನ್ನು ತೆಗೆದುಹಾಕಿ 7,500 ಕ್ಕಿಂತ ಹೆಚ್ಚು ರೂಂ ಟಾರಿಫ್ ಇರುವ ಯಾವುದೇ ಹೋಟೆಲ್ ಗಳಿಗೆ ಶೇ.18 ರಷ್ಟು ತೆರಿಗೆ ವಿಧಿಸುವುದು ಸೂಕ್ತ ಎಂದು ಸಚಿವರ ಸಮಿತಿ ಅಭಿಪ್ರಾಯಪಟ್ಟಿದೆ. 
ನ.10 ರಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಸಲಹೆಗಳನ್ನು ಪರಿಗಣಿಸಲಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT