ಸಂಗ್ರಹ ಚಿತ್ರ 
ವಾಣಿಜ್ಯ

ಕನಿಷ್ಠ ಠೇವಣಿ ಮೇಲಿನ ದಂಡವಾಗಿ 2 ಸಾವಿರ ಕೋಟಿ ರು. ಸಂಗ್ರಹಿಸುವ ಗುರಿ ಇದೆ: ಎಸ್ ಬಿಐ

ಉಳಿತಾಯ ಠೇವಣಿ ಖಾತೆಗಳ ಮೇಲೆನ ಕನಿಷ್ಠ ಠೇವಣಿ ದಂಡದ ರೂಪವಾಗಿ 2 ಸಾವಿರ ಕೋಟಿ ರು.ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.

ಮುಂಬೈ: ಉಳಿತಾಯ ಠೇವಣಿ ಖಾತೆಗಳ ಮೇಲೆನ ಕನಿಷ್ಠ ಠೇವಣಿ ದಂಡದ ರೂಪವಾಗಿ 2 ಸಾವಿರ ಕೋಟಿ ರು.ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.

ಇತ್ತೀಚೆಗೆ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವ ಸಂಬಂಧ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಈ ಪ್ರಕ್ರಿಯೆಗಾಗಿ ಸಾಕಷ್ಟು ಹಣ ವ್ಯಯವಾಗುತ್ತಿದೆ. ಹೀಗಾಗಿ ದಂಡದ ರೂಪದಲ್ಲಿ ಸಂಗ್ರಹಿಸಲಾಗುವ ಹಣವನ್ನು ಈ  ಪ್ರಕ್ರಿಯೆಗೆ ಬಳಸಲಾಗುತ್ತದೆ ಎಂದು ಎಸ್ ಬಿಐ ನಿರ್ವಾಹಕ ನಿರ್ದೇಶಕ ರಜನೀಶ್ ಕುಮಾರ್ ಅವರು ಹೇಳಿದ್ದಾರೆ.

"ಡಿಸೆಂಬರ್ 31ರ ಒಳಗೆ ಎಲ್ಲ ಉಳಿತಾಯ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಪ್ರಕ್ರಿಯೆ ದುಬಾರಿ ಪ್ರಕ್ರಿಯೆಯಾಗಿದ್ದು, ಈ  ಪ್ರಕ್ರಿಯೆಯಿಂದ ಬ್ಯಾಂಕ್ ಹೆಚ್ಚುವರಿ ಹೊರೆ ಬೀಳುತ್ತಿದೆ. ಹೀಗಾಗಿ ಪ್ರಸ್ತುತ ಉಳಿತಾಯ ಖಾತೆಗಳಲ್ಲಿನ ಕನಿಷ್ಠ ಠೇವಣಿ ಮೇಲಿನ ದಂಡದ ರೂಪದ ಹಣವನ್ನು ಈ ಪ್ರಕ್ರಿಯೆಗೂ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.

ಉಳಿತಾಯ ಖಾತೆಗಳ ಮೇಲಿನ ದಂಡದ ಹಣ, ಎಟಿಎಂ ನಿರ್ವಹಣೆ ವೆಚ್ಚ ಸೇರಿದಂತೆ ಗ್ರಾಹಕರಿಗೆ ವಿಧಿಸಲಾಗುವ ಇತರೆ ಶುಲ್ಕಗಳ ಸಂಗ್ರಹದ ಹಣವನ್ನು ಕೂಡ ಎಟಿಎಂ ನಿರ್ವಹಣೆ, ಸಿಬ್ಬಂದಿಗಳ ನಿರ್ವಹಣೆ ಸೇರಿದಂತೆ ವಿವಿಧ  ಉದ್ದೇಶಗಳಿಗೆ ಬಳಸಲಾಗುತ್ತಿದೆ. ಇನ್ನು ಪ್ರತೀ ಖಾತೆಗೆ ಆಧಾರ್ ಲಿಂಕ್ ಮಾಡುವ ಪ್ರಕ್ರಿಯೆ ಸಾಮಾನ್ಯ ಪ್ರಕ್ರಿಯೆ ಏನೂ ಅಲ್ಲ. ಬ್ಯಾಂಕ್ ಸುಮಾರು 40 ಲಕ್ಷ ಖಾತೆಗಳನ್ನು ಕೂಲಂಕುಷವಾಗಿ ಪರಿಶೀಲಿಸಬೇಕಿರುತ್ತದೆ. ನಿಜಕ್ಕೂ  ಇದೊಂದು ದುಬಾರಿ ಪ್ರಕ್ರಿಯೆ. ಪ್ರಸ್ತುತ ಎಸ್ ಬಿಐ 400 ಕೋಟಿ ಹೆಚ್ಚುವರಿ ಹೊರೆಯನ್ನು ಎದುರಿಸುತ್ತಿದ್ದು, ದಂಡದ ಮೂಲಕ ಸಂಗ್ರಹಿಸುವ ಹಣವನ್ನು ಇಂತಹ ಹೆಚ್ಚುವರಿ ಹೊರೆ ತಗ್ಗಿಸಲು ಬಳಕೆ ಮಾಡಲಾಗುತ್ತದೆ ಎಂದು ಅವರು  ಸ್ಪಷ್ಟಪಡಿಸಿದರು.

ಇನ್ನು ಈ ಹಿಂದೆ ಆರ್ ಟಿಐ ಅರ್ಜಿ ಮೂಲಕ ಬಂದ ಮಾಹಿತಿಯಂತೆ ಭಾರತದ ಪ್ರಮುಖ ಬ್ಯಾಂಕಿಂಗ್ ಸೇವಾ ಸಂಸ್ಥೆ ಎಸ್ ಬಿಐನ ಮೊದಲ ತ್ತೈಮಾಸಿಕ ವರದಿಯಲ್ಲಿ ದಂಡದ ರೂಪದಲ್ಲೇ ಸುಮಾರು 235.06 ಕೋಟಿ ರೂ.ಗಳನ್ನು   ಸಂಗ್ರಹಿಸಿದೆ ಎಂದು ತಿಳಿದುಬಂದಿದೆ. ಜೂನ್ ತಿಂಗಳಲ್ಲಿ ಪ್ರಕಟವಾದ ಬ್ಯಾಂಕ್ ನ ತ್ರೈಮಾಸಿಕ ವರದಿಯಲ್ಲಿ ಎಸ್ ಬಿಐ ಗ್ರಾಹಕರಿಂದ ಒಟ್ಟು 388.74 ಲಕ್ಷ ಖಾತೆದಾರರಿಂದ ಕನಿಷ್ಠ ಠೇವಣೆ ಇಡದ ಕಾರಣ 235.06 ಕೋಟಿ ರೂ.ಗಳನ್ನು   ದಂಡವಾಗಿ ಸಂಗ್ರಹಿಸಿದೆ ಎಂದು ತಿಳಿದುಬಂದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT