ಎಟಿಎಂ 
ವಾಣಿಜ್ಯ

ಹಲವು ರಾಜ್ಯಗಳಲ್ಲಿ ಎಟಿಎಂ ಸೇವೆ ಅಲಭ್ಯ: ನಗದು ಮುಗ್ಗಟ್ಟು ಎದುರಿಸುತ್ತಿರುವ ಜನತೆ

ಹಲವು ರಾಜ್ಯಗಳಲ್ಲಿ ಎಟಿಎಂ ಸೇವೆ ಅಲಭ್ಯವಾಗಿದ್ದು, ಜನರು ತೀವ್ರವಾಗಿ ನಗದು ಮುಗ್ಗಟ್ಟು ಎದುರಿಸುತ್ತಿದ್ದಾರೆ.

ಹಲವು ರಾಜ್ಯಗಳಲ್ಲಿ ಎಟಿಎಂ ಸೇವೆ ಅಲಭ್ಯವಾಗಿದ್ದು, ಜನರು ತೀವ್ರವಾಗಿ ನಗದು ಮುಗ್ಗಟ್ಟು ಎದುರಿಸುತ್ತಿದ್ದಾರೆ. 
ವಿವಿಧ ಮೂಲಗಳ ಪ್ರಕಾರ ಗುಜರಾತ್ ನ ವಡೋದರದ ಹಲವು ಎಟಿಎಂ ಗಳಲ್ಲಿ ನಗದು ಮುಗ್ಗಟ್ಟು ಎದುರಾಗಿದ್ದು, ಕಾರ್ಯನಿರ್ವಹಿಸುತ್ತಿದ್ದ ಒಂದು ದಿನದಲ್ಲಿಯೂ ಸಹ ಎಟಿಎಂ ನಿಂದ ಕೇವಲ 10 ಸಾವಿರ ರೂಗಳನ್ನು ಮಾತ್ರ ಹೊರತೆಗೆಯಲು ಸಾಧ್ಯವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. 
ಗುಜರಾತ್ ನಲ್ಲಿ ಅಷ್ಟೇ ಅಲ್ಲದೇ ಮಧ್ಯಪ್ರದೇಶ, ದೆಹಲಿ, ಬಿಹಾರ, ತೆಲಂಗಾಣದಲ್ಲಿಯೂ ಇದೇ ಸ್ಥಿತಿ ಎದುರಾಗಿದ್ದು, ನಗದು ಮುಗ್ಗಟ್ಟು ಎದುರಿಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದಲೂ ಎಟಿಎಂ ಸೇವೆ ಲಭ್ಯವಾಗದೇ ನಗದು ಮುಗ್ಗಟ್ಟು ಎದುರಾಗಿದೆ. 
ಎಟಿಎಂ ಸೇವೆ ಅಲಭ್ಯವಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, 2016 ರ ನವೆಂಬರ್ ನಲ್ಲಿ ಎಟಿಎಂ ಗಳು ಖಾಲಿಯಾಗಿದ್ದವು, ಈಗಲೂ ಎಟಿಎಂ ಗಳು ಖಾಲಿಯಾಗಿವೆ. ಬಿಜೆಪಿ ಮಾತ್ರ ತನಗೆಷ್ಟು ಬೇಕೋ ಅಷ್ಟು ನಗದು ಹೊಂದಿದ್ದು, ಉಳಿದ ಜನರು ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?