ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ 
ವಾಣಿಜ್ಯ

ಆರ್ ಬಿಐ ಕೇಂದ್ರೀಯ ಮಂಡಳಿ ನಿರ್ದೇಶಕರಾಗಿ ಗುರುಮೂರ್ತಿ, ಸತೀಶ್ ಮರಾಠೆ ನೇಮಕ

ಭಾರತೀಯ ರಿಸರ್ವ್ ಬ್ಯಾಂಕ್ ನ ಕೇಂದ್ರೀಯ ಮಂಡಳಿ ಅರೆಕಾಲಿಕ ನಿರ್ದೇಶಕರಾಗಿ ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ ಅವರುಗಳ ನೇಮಕಕ್ಕೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಕೇಂದ್ರೀಯ ಮಂಡಳಿ ಅರೆಕಾಲಿಕ ನಿರ್ದೇಶಕರಾಗಿ ಎಸ್. ಗುರುಮೂರ್ತಿ ಹಾಗೂ ಸತೀಶ್ ಮರಾಠೆ ಅವರುಗಳ ನೇಮಕಕ್ಕೆ ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ.
ಗುರುಮೂರ್ತಿ ತಮಿಳು ನಿಯತಕಾಲಿಕೆ ’ತುಗಲಕ್’ ನ ಸಂಪಾದಕರು ಮಾತ್ರವಲ್ಲದೆ ಚಾರ್ಟರ್ಡ್ ಅಕೌಂಟೆಂಟ್, ಆರ್ಥಿಕ ಮತ್ತು ರಾಜಕೀಯ ಅಂಕಣಕಾರರೂ ಆಗಿದ್ದಾರೆ. 
ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯಿಂದ ಈ ನೇಮಕಾತಿಗಳ ಪ್ರಸ್ತಾವನೆ ಬಂದಿತ್ತು ಎಂದು ನೋಟೀಸಿನಲ್ಲಿ ಹೇಳಲಾಗಿದೆ.
15 ಸದಸ್ಯರನ್ನು ಒಳಗೊಂಡಿರುವ  ಕೇಂದ್ರ ಬ್ಯಾಂಕ್ ನ ಉನ್ನತ ನಿರ್ದೇಶಕರ ಮಂಡಳಿಗೆ ಇದೀಗ ಇಬ್ಬರು ಹೊಸ ನಿರ್ದೇಶಕರು ನೇಮಕವಾಗಿದ್ದು ನೇಮಕಾತಿ ಆದೇಶದ ದಿನಾಂಕದಿಂದ ನಾಲ್ಕು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT