ಎಂ ಡಿ ರಂಗನಾಥ್ 
ವಾಣಿಜ್ಯ

ಇನ್ಫೋಸಿಸ್ ಸಿಎಫ್ಓ ಎಂ ಡಿ ರಂಗನಾಥ್ ರಾಜೀನಾಮೆ

ಐಟಿ ದಿಗ್ಗಜ ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಕ ಎಂ.ಡಿ ರಂಗನಾಥ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು: ಐಟಿ ದಿಗ್ಗಜ ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಕ ಎಂ.ಡಿ ರಂಗನಾಥ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಸುಮಾರು 18 ವರ್ಷಗಳಿಂದ ಇನ್ಫೋಸಿಸ್ ಜೊತೆ ಕೆಲಸ ಮಾಡಿದ್ದ ರಂಗನಾಥ್ ತಾವು ಹೊಸ ಕ್ಷೇತ್ರಗಳಲ್ಲಿ ವೃತ್ತಿಪರ ಅವಕಾಶಗಳನ್ನು ಹುಡುಕುತ್ತೇನೆ ಎಂದಿದ್ದಾರೆ. 
ಅವರು ಪ್ರಸ್ತುತ ನವೆಂಬರ್ 16, 2018 ರವರೆಗೆ ಈ ಹುದ್ದೆಯಲ್ಲಿ ಮುಂದುವರಿಯಲಿದ್ದು ಅಷ್ಟರಲ್ಲಿ ಸಂಸ್ಥೆಯು ನೂತನ ಸಿಎಫ್ ಓ ಅವರನ್ನು ನೇಮಕ ಮಾಡಿಕೊಳ್ಳಲಿದೆ.
"ಕಳೆದ ಮೂರು ವರ್ಷಗಳಿಂದ ಇನ್ಫೋಸಿಸ್ ಸಿಎಫ್ಓ  ಆಗಿರುವ ರಂಗನಾಥ್ 18 ವರ್ಷಗಳಲ್ಲಿ ಸಂಸ್ಥೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ನಾನು ಈಗ ಹೊಸ ಕ್ಷೇತ್ರಗಳಲ್ಲಿ ವೃತ್ತಿಪರ ಅವಕಾಶಗಳನ್ನು ಶೋಧಿಸಲು ಬಯಸಿದ್ದೇನೆ"  ರಂಗನಾಥ್ ಹೇಳಿದರು.
"ಕಳೆದ ಮೂರು ವರ್ಷಗಳಲ್ಲಿ ದಂಸ್ಥೆಯ ನಿರ್ಣಾಯಕ ಹಂತದಲ್ಲಿ ನಾನು ಬಲವಾದ ಮತ್ತು ಸ್ಥಿರವಾದ ಫಲಿತಾಂಶ ನೀಡಿದ್ದೇನೆ. ಹಣಕಾಸು ವರದಿಗಳಲ್ಲಿ ಉನ್ನತ ಗುಣಮಟ್ಟವಿರುವುದು ಸಾಬೀತಾಗುತ್ತಿದೆ. ವಿಶ್ವ ದರ್ಜೆಯಲ್ಲಿ ಕಂಪನಿಯ ಸ್ಪರ್ಧಾತ್ಮಕತೆಯನ್ನು ಮತ್ತಷ್ಟು ಬಲಪಡಿಸಿದ ತೃಪ್ತಿ ನನ್ನದಾಗಿದೆ"ಅವರು ಹೇಳಿದರು.
ರಂಗನಾಥ್ ಅವರು 2015ರಲ್ಲಿ ರಾಜೀವ್ ಬನ್ಸಾಲ್ ನಿವೃತ್ತಿಯ ಬಳಿಕ ಸಿಎಫ್ಓ ಆಗಿ ಅಧಿಕಾರ ವಹಿಸಿಕೊಂಡಿದ್ದರು.
"ಕಳೆದ 18 ವರ್ಷಗಳಲ್ಲಿ ಇನ್ಫೋಸಿಸ್ ನ ಬೆಳವಣಿಗೆ ಮತ್ತು ಯಶಸ್ಸಿಗೆ ರಂಗ ಪ್ರಮುಖ ಪಾತ್ರ ವಹಿಸಿದ್ದಾರೆ.ತಂಡದಲ್ಲಿ ಅವರ ದೀರ್ಘಕಾಲದ  ಅನುಭವದಲ್ಲಿ ನಾನವರಲ್ಲಿ ನಾಯಕತ್ವದ ಗುಣ ಕಂಡಿದ್ದೇನೆ".ಎಂದು ಇನ್ಫೋಸಿಸ್ ಮಂಡಳಿ ಅಧ್ಯಕ್ಷ ನಂದನ್ ನಿಲೇಕಣಿ ಹೇಳಿದ್ದಾರೆ.
ರಂಗನಾಥ್ ಅವರು ಇನ್ಫೋಸಿಸ್ ಲೀಡರ್ ಶಿಪ್ ಭಾಗವಾಗಿದ್ದಾರೆ.ಮತ್ತು ಕನ್ಸಲ್ಟಿಂಗ್, ಫೈನಾನ್ಸ್, ಸ್ಟ್ರಾಟಜಿ, ರಿಸ್ಕ್ ಮ್ಯಾನೇಜ್ಮೆಂಟ್ ಮತ್ತು ಎಮ್ & ಎ ಕ್ಷೇತ್ರಗಳಲ್ಲಿ ಹಲವಾರು ಮಹತ್ವದ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT