ಎಂ ಡಿ ರಂಗನಾಥ್ 
ವಾಣಿಜ್ಯ

ಇನ್ಫೋಸಿಸ್ ಸಿಎಫ್ಓ ಎಂ ಡಿ ರಂಗನಾಥ್ ರಾಜೀನಾಮೆ

ಐಟಿ ದಿಗ್ಗಜ ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಕ ಎಂ.ಡಿ ರಂಗನಾಥ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು: ಐಟಿ ದಿಗ್ಗಜ ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಕ ಎಂ.ಡಿ ರಂಗನಾಥ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಸುಮಾರು 18 ವರ್ಷಗಳಿಂದ ಇನ್ಫೋಸಿಸ್ ಜೊತೆ ಕೆಲಸ ಮಾಡಿದ್ದ ರಂಗನಾಥ್ ತಾವು ಹೊಸ ಕ್ಷೇತ್ರಗಳಲ್ಲಿ ವೃತ್ತಿಪರ ಅವಕಾಶಗಳನ್ನು ಹುಡುಕುತ್ತೇನೆ ಎಂದಿದ್ದಾರೆ. 
ಅವರು ಪ್ರಸ್ತುತ ನವೆಂಬರ್ 16, 2018 ರವರೆಗೆ ಈ ಹುದ್ದೆಯಲ್ಲಿ ಮುಂದುವರಿಯಲಿದ್ದು ಅಷ್ಟರಲ್ಲಿ ಸಂಸ್ಥೆಯು ನೂತನ ಸಿಎಫ್ ಓ ಅವರನ್ನು ನೇಮಕ ಮಾಡಿಕೊಳ್ಳಲಿದೆ.
"ಕಳೆದ ಮೂರು ವರ್ಷಗಳಿಂದ ಇನ್ಫೋಸಿಸ್ ಸಿಎಫ್ಓ  ಆಗಿರುವ ರಂಗನಾಥ್ 18 ವರ್ಷಗಳಲ್ಲಿ ಸಂಸ್ಥೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದೇನೆ. ನಾನು ಈಗ ಹೊಸ ಕ್ಷೇತ್ರಗಳಲ್ಲಿ ವೃತ್ತಿಪರ ಅವಕಾಶಗಳನ್ನು ಶೋಧಿಸಲು ಬಯಸಿದ್ದೇನೆ"  ರಂಗನಾಥ್ ಹೇಳಿದರು.
"ಕಳೆದ ಮೂರು ವರ್ಷಗಳಲ್ಲಿ ದಂಸ್ಥೆಯ ನಿರ್ಣಾಯಕ ಹಂತದಲ್ಲಿ ನಾನು ಬಲವಾದ ಮತ್ತು ಸ್ಥಿರವಾದ ಫಲಿತಾಂಶ ನೀಡಿದ್ದೇನೆ. ಹಣಕಾಸು ವರದಿಗಳಲ್ಲಿ ಉನ್ನತ ಗುಣಮಟ್ಟವಿರುವುದು ಸಾಬೀತಾಗುತ್ತಿದೆ. ವಿಶ್ವ ದರ್ಜೆಯಲ್ಲಿ ಕಂಪನಿಯ ಸ್ಪರ್ಧಾತ್ಮಕತೆಯನ್ನು ಮತ್ತಷ್ಟು ಬಲಪಡಿಸಿದ ತೃಪ್ತಿ ನನ್ನದಾಗಿದೆ"ಅವರು ಹೇಳಿದರು.
ರಂಗನಾಥ್ ಅವರು 2015ರಲ್ಲಿ ರಾಜೀವ್ ಬನ್ಸಾಲ್ ನಿವೃತ್ತಿಯ ಬಳಿಕ ಸಿಎಫ್ಓ ಆಗಿ ಅಧಿಕಾರ ವಹಿಸಿಕೊಂಡಿದ್ದರು.
"ಕಳೆದ 18 ವರ್ಷಗಳಲ್ಲಿ ಇನ್ಫೋಸಿಸ್ ನ ಬೆಳವಣಿಗೆ ಮತ್ತು ಯಶಸ್ಸಿಗೆ ರಂಗ ಪ್ರಮುಖ ಪಾತ್ರ ವಹಿಸಿದ್ದಾರೆ.ತಂಡದಲ್ಲಿ ಅವರ ದೀರ್ಘಕಾಲದ  ಅನುಭವದಲ್ಲಿ ನಾನವರಲ್ಲಿ ನಾಯಕತ್ವದ ಗುಣ ಕಂಡಿದ್ದೇನೆ".ಎಂದು ಇನ್ಫೋಸಿಸ್ ಮಂಡಳಿ ಅಧ್ಯಕ್ಷ ನಂದನ್ ನಿಲೇಕಣಿ ಹೇಳಿದ್ದಾರೆ.
ರಂಗನಾಥ್ ಅವರು ಇನ್ಫೋಸಿಸ್ ಲೀಡರ್ ಶಿಪ್ ಭಾಗವಾಗಿದ್ದಾರೆ.ಮತ್ತು ಕನ್ಸಲ್ಟಿಂಗ್, ಫೈನಾನ್ಸ್, ಸ್ಟ್ರಾಟಜಿ, ರಿಸ್ಕ್ ಮ್ಯಾನೇಜ್ಮೆಂಟ್ ಮತ್ತು ಎಮ್ & ಎ ಕ್ಷೇತ್ರಗಳಲ್ಲಿ ಹಲವಾರು ಮಹತ್ವದ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT