ನೀರವ್ ಮೋದಿ 
ವಾಣಿಜ್ಯ

ಭದ್ರತಾ ಭೀತಿಯಿಂದ ಭಾರತಕ್ಕೆ ಬರುಲು ಸಾಧ್ಯವಾಗುತ್ತಿಲ್ಲ: ಇಡಿ, ಸಿಬಿಐಗೆ ನೀರವ್ ಮೋದಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ರು ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿಗೆ ಭಾರತದಲ್ಲಿ ಅಭದ್ರತೆಯ ಭೀತಿ ಕಾಡುತ್ತಿದೆಯಂತೆ.

ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13 ಸಾವಿರ ಕೋಟಿ ರು ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿಗೆ ಭಾರತದಲ್ಲಿ ಅಭದ್ರತೆಯ ಭೀತಿ ಕಾಡುತ್ತಿದೆಯಂತೆ. 
ಭಾರತಕ್ಕೆ ಬಂದರೆ ನನ್ನ ಮೇಲೆ ದಾಳಿ ನಡೆಯಬಹುದು. ಅಭದ್ರತೆಯ ಭೀತಿ ನನ್ನನ್ನು ಕಾಡುತ್ತಿದೆ. ಹೀಗಾಗಿ ಭಾರತಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂದು ನೀರವ್ ಮೋದಿ ತನ್ನ ವಕೀಲರ ಮೂಲಕ ಜಾರಿ ನಿರ್ದೇಶನಾಲಯಕ್ಕೆ ತಿಳಿಸಿದ್ದಾರೆ.
ಒಂದು ವೇಳೆ ನಾನು ಭಾರತಕ್ಕೆ ಬಂದರೆ ನನ್ನ ಜೀವಕ್ಕೆ ಅಪಾಯವಿದೆ. ಕೊಲೆ ಬೆದರಿಕೆ ಕೇಳಿಬಂದಿದೆ. ನನ್ನ ಪ್ರತಿಕೃತಿ ದಹನ ಮಾಡಿದ ಹಲವಾರು ಘಟನೆಗಳು ನಡೆದಿವೆ. ಭದ್ರತಾ ದೃಷ್ಟಿಯಿಂದ ಸದ್ಯದ ಮಟ್ಟಿಗೆ ನಾನು ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದು ನೀರವ್ ಮೋದಿ ಹೇಳಿದ್ದಾರೆ. 
ಇಡಿ ಅಧಿಕಾರಿಗಳು ನೀರವ್ ಕಂಪನಿ, ಆಸ್ತಿಯನ್ನು ವಶಕ್ಕೆ ಪಡೆದಿದ್ದರಿಂದ ಸಿಬ್ಬಂದಿಗೆ ವೇತನ ನೀಡಿಲ್ಲ. ಅಷ್ಟೇ ಅಲ್ಲದೇ ನೀರವ್ ಬಾಡಿಗೆ ಪಡೆದಿದ್ದ ಜಾಗದ ಮಾಲೀಕರಿಗೆ ಹಣ ಪಾವತಿಸಿಲ್ಲ, ವಜ್ರಾಭರಣಕ್ಕಾಗಿ ಮುಂಗಡ ಹಣ ನೀಡಿದ್ದವರು ತಮ್ಮ ಹಣವನ್ನು ಮರಳಿಸುವಂತೆ ಬೆದರಿಕೆ ಹಾಕಿದ್ದಾರೆ. ಇದರಿಂದಾಗಿ ಪ್ರಾಣ ಬೆದರಿಕೆ ಇರುವ ಕಾರಣ ನೀರವ್ ಮೋದಿ ಭಾರತಕ್ಕೆ ಬರಲು ಸಾಧ್ಯವಿಲ್ಲ ಎಂದು ನೀರವ್ ಮೋದಿ ಪರ ವಕೀಲ ವಿಜಯ್ ಅಗರವಾಲ್ ಅವರು ತಿಳಿಸಿದ್ದಾರೆ.
ರವ್ ಮೋದಿ ಉದ್ದೇಶಪೂರ್ವಕ ಸುಸ್ತಿದಾರನೋ, ಅಲ್ಲವೋ ಎನ್ನುವುದು ಇನ್ನೂ ವಿಚಾರಣೆಯ ಹಂತದಲ್ಲಿದೆ. ಆದರೆ, ಇದಕ್ಕೆ ಮೊದಲೇ ಸಿಬಿಐ, ನನ್ನ ಕಕ್ಷಿದಾರನನ್ನು ಉದ್ದೇಶಪೂರ್ವಕ ಸುಸ್ತಿದಾರ ಎಂದು ನಿರ್ಧರಿಸಿಬಿಟ್ಟಿದೆ ಎಂದು ನೀರವ್ ಪರ ವಕೀಲರು ಬೇಸರ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಂಗಳೂರು ಕುಕ್ಕರ್‌ ಬಾಂಬ್ ಬ್ಲಾಸ್ಟ್ ಪ್ರಕರಣ: ಉಗ್ರ ಶಾರಿಕ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್; Video

AAP ಮುಖವಾಡ ಕಳಚಿದೆ: ಹಣ ಪಡೆದು ರಾಜ್ಯಸಭೆಗೆ ಜನರನ್ನು ಕಳುಹಿಸಿದರೆ ಹೀಗೆ ಆಗೋದು: ಕಾಂಗ್ರೆಸ್ ಟೀಕೆ!

‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು': ಹೈಕೋರ್ಟ್ ಛೀಮಾರಿ!

Target Killings: ಪಾಕ್‌ನಲ್ಲಿ ಹಫೀಜ್ ಸಯೀದ್ ನ ಆಪ್ತ ಸಹಚರ ಅಫ್ರಿದಿಯನ್ನು ಹತ್ಯೆಗೈದ ಅಪರಿಚಿತ ಬಂದೂಕುಧಾರಿಗಳು!

53 ಜನ ಸಾವನ್ನಪ್ಪಿದ್ದ ದೆಹಲಿ ಗಲಭೆ ಪ್ರಮುಖ ಆರೋಪಿ ಉಮರ್ ಖಾಲಿದ್ ಬೆಂಬಲಿಸಿ ನಗರದಲ್ಲಿ ಕಾರ್ಯಕ್ರಮ: ಬಿಜೆಪಿಯಿಂದ ಆಯುಕ್ತರಿಗೆ ದೂರು

SCROLL FOR NEXT