ಪಂಜಾಬ್ ಬ್ಯಾಂಕ್ 
ವಾಣಿಜ್ಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ 2011ರಿಂದಲೂ ನಡೆಯುತ್ತಿತ್ತು: ಸಿಇಒ

11 ಸಾವಿರ ಕೋಟಿ ರೂಪಾಯಿ ವಂಚನೆ 2011 ರಿಂದಲೂ ನಡೆಯುತ್ತಿತ್ತು ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಎಂಡಿ, ಸಿಇಒ ಸುನಿಲ್ ಮೆಹ್ತಾ ಹೇಳಿದ್ದಾರೆ.

ನವದೆಹಲಿ: 11 ಸಾವಿರ ಕೋಟಿ ರೂಪಾಯಿ ವಂಚನೆ 2011 ರಿಂದಲೂ ನಡೆಯುತ್ತಿತ್ತು ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ ನ ಎಂಡಿ, ಸಿಇಒ ಸುನಿಲ್ ಮೆಹ್ತಾ ಹೇಳಿದ್ದಾರೆ. 
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಸುನಿಲ್ ಮೆಹ್ತಾ, 2011 ರಲ್ಲೇ ಪಿಎನ್ ಬಿ ಅಧಿಕಾರಿಗಳು ಹಗರಣವನ್ನು ಗುರುತಿಸಿದ್ದರು. ಅಷ್ಟೇ ಅಲ್ಲದೇ ಹಗರಣದ ಬಗ್ಗೆ ಸಂಬಂಧಿಸಿದ ತನಿಖಾ ಸಂಸ್ಥೆಗಳಿಗೂ ಮಾಹಿತಿ ನೀಡಿದ್ದರು. ನಾವು ಹಣವನ್ನು ವಾಪಸ್ ಪಡೆಯಲು ಕ್ರಮ ಕೈಗೊಂಡಿದ್ದೇವೆ ಎಂದು ಸುನಿಲ್ ಮೆಹ್ತಾ ಹೇಳಿದ್ದಾರೆ. 
ಬ್ಯಾಂಕ್ ನ ಇಬ್ಬರು ನೌಕರರು ಅಕ್ರಮ ಹಣ ವರ್ಗಾವಣೆಯನ್ನು ನಡೆಸಿದ್ದರು, ಈ ಸಂಬಂಧ ಜ.29 ರಂದು ಸಿಬಿಐಗೆ ಪಿಎನ್ ಬಿ ದೂರು ನೀಡಿತ್ತು ಜ.31 ರಂದು ದೂರು ದಾಖಲಾಗಿದೆ ಎಂದು ಸುನಿಲ್ ಮೆಹ್ತಾ ಮಾಹಿತಿ ನೀಡಿದ್ದಾರೆ. ವಂಚನೆ ಪ್ರಕರಣದ ರೂವಾರಿಯಾಗಿರುವ ನಿರಾವ್ ಮೋದಿ ಜ.1 ರಂದೇ ವಿದೇಶಕ್ಕೆ ತೆರಳಿದ್ದಾರೆ, ನಿರಾವ್ ಮೋದಿಗಾಗಿ ಲುಕ್ ಔಟ್ ನೊಟೀಸ್ ಜಾರಿ ಮಾಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT