ಸಾಂದರ್ಭಿಕ ಚಿತ್ರ 
ವಾಣಿಜ್ಯ

ನೀರವ್ ಮೋದಿ ವಂಚನೆ ಪ್ರಕರಣ: ಪಿಎನ್ಬಿ ಮತ್ತು ಇತರ ಬ್ಯಾಂಕುಗಳಿಗೆ ಆದ ನಷ್ಟದ ಪ್ರಮಾಣ ಬಗ್ಗೆ ನಿಖರತೆಯಿಲ್ಲ

ವಜ್ರೋದ್ಯಮಿ ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 11,400 ಕೋಟಿ ರೂಪಾಯಿ ....

ಮುಂಬೈ: ವಜ್ರೋದ್ಯಮಿ ನೀರವ್ ಮೋದಿ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 11,400 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ವರದಿ ಹೊರಬಂದು ಎರಡು ದಿನಗಳು ಕಳೆದಿದ್ದು, ಪಿಎನ್ ಬಿ ಮತ್ತು ಇತರ ಬ್ಯಾಂಕುಗಳಿಗೆ ಆಗಿರುವ ನಷ್ಟ ಒಗಟಾಗಿಯೇ ಉಳಿದಿದೆ.
2011ರಿಂದ ನೀರವ್ ಮೋದಿ ಮತ್ತು ಅವರ ಸಂಸ್ಥೆಗಳು 1.77 ಶತಕೋಟಿ ಡಾಲರ್ ಹಣವನ್ನು ಬ್ಯಾಂಕುಗಳಿಂದ ಸಾಲ ಪಡೆದಿವೆ. ಆದರೆ ಅಸ್ಪಷ್ಟವಾಗಿರುವ ಸಂಗತಿಯೆಂದರೆ, ನೀರವ್ ಮೋದಿಯವರಿಂದ ಬ್ಯಾಂಕಿಗೆ ಬರಲಿರುವ ಮೊತ್ತ ಮತ್ತು ಅವರು ಇದುವರೆಗೆ ಬ್ಯಾಂಕಿಗೆ ಎಷ್ಟು ಹಣ ಪಾವತಿಸಿದ್ದಾರೆ ಎಂಬುದು.
11,400 ಕೋಟಿ ರೂ ವಂಚನೆಯಲ್ಲಿ ಪ್ರತಿವರ್ಷದಂತೆ ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಹಣ ಪಾವತಿ ಮಾಡಲಾಗಿದೆಯೇ ಎಂಬ ಬಗ್ಗೆ ವಿಚಾರಣೆ ನಡೆಯಬೇಕಿದೆ. ಕಳೆದ ತಿಂಗಳು ಸಿಬಿಐಗೆ ಸಲ್ಲಿಸಿರುವ ಹೇಳಿಕೆಯಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕು, 281 ಕೋಟಿ ರೂಪಾಯಿಗಳಷ್ಟು ಸಾರ್ವಜನಿಕ ಹಣವನ್ನು ಬ್ಯಾಂಕಿಗೆ ವಂಚನೆ ಮಾಡಲಾಗಿದೆ. ಅಮಾನತುಗೊಂಡ ಬ್ಯಾಂಕಿನ ಅಧಿಕಾರಿಗಳು ಹಣವನ್ನು ಬೇರೆಡೆಗೆ ವರ್ಗಾಯಿಸಿರುವ ಸಾಧ್ಯತೆ ಬಗ್ಗೆ ಸಂಶಯವಿದೆ.
ಇಲ್ಲಿ ಅನೇಕ ಪ್ರಶ್ನೆಗಳು ಎದುರಾಗುತ್ತವೆ.ಅವುಗಳಲ್ಲಿ ಮುಖ್ಯವಾದದ್ದು ಬ್ಯಾಂಕಿಗೆ ಬರಬೇಕಾಗಿರುವ ಹಣ. ಡೈಮಂಡ್ ಆರ್ ಯುಎಸ್, ಸೋಲಾರ್ ಎಕ್ಸ್ ಪರ್ಟ್ ಅಂಡ್ ಸ್ಟೆಲ್ಲರ್ ಡೈಮಂಡ್ ಅನಧಿಕೃತ ಎಲ್ ಒಯು ಪತ್ರದ ಮೂಲಕ ಪಂಜಾಬ್ ನ್ಯಾಷನಲ್ ಬ್ಯಾಂಕು ಉದ್ಯೋಗಿಗಳು ಹಣ ಬಿಡುಗಡೆ ಮಾಡಿದ್ದಾರೆ.
2017ರಲ್ಲಿ, ಅಲಹಾಬಾದ್ ಬ್ಯಾಂಕು ಮತ್ತು ಆಕ್ಸಿಸ್ ಬ್ಯಾಂಕುಗಳ ಹಾಂಕಾಂಗ್ ನಲ್ಲಿರುವ ಶಾಖೆಗಳ ಮೂಲಕ 281 ಕೋಟಿ ರೂಪಾಯಿಗಳನ್ನು ಬಿಡುಗಡೆಮಾಡಲು 8 ನಕಲಿ ಎಲ್ ಒಯುಗಳನ್ನು ಬಳಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT