ಮುಂಬೈಯ ಬ್ರಾಡಿ ರಸ್ತೆಯಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶಾಖೆ 
ವಾಣಿಜ್ಯ

ಭಾರೀ ವಂಚನೆ ನಡೆದ ಪಿಎನ್ ಬಿ ಮುಂಬೈ ಶಾಖೆಗೆ ಬೀಗ ಹಾಕಿದ ಸಿಬಿಐ

ಜ್ಯುವೆಲ್ಲರಿ ಮಾಲೀಕ ನೀರವ್ ಮೋದಿ 11,300 ಕೋಟಿ ರೂಪಾಯಿ ಹಣ ವಂಚಿಸಿದ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮುಂಬೈ....

ನವದೆಹಲಿ: ಜ್ಯುವೆಲ್ಲರಿ ಮಾಲೀಕ ನೀರವ್ ಮೋದಿ 11,300 ಕೋಟಿ ರೂಪಾಯಿ ಹಣ ವಂಚಿಸಿದ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಮುಂಬೈಯ ಬ್ರಾಡಿ ರಸ್ತೆಯಲ್ಲಿರುವ ಶಾಖೆಗೆ ಸಿಬಿಐ ಸೋಮವಾರ ಬೀಗ ಹಾಕಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕಿನ ಇಬ್ಬರು ನೌಕರರು ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಇದು ದೇಶದ ಬ್ಯಾಂಕಿಂಗ್ ವಲಯದಲ್ಲಿ ಆದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣವಾಗಿದೆ.
ನೀರವ್ ಮೋದಿಯವರ ಫೈರ್ ಸ್ಟಾರ್ ಡೈಮಂಡ್ ಕಂಪೆನಿಯ ಮುಖ್ಯ ಹಣಕಾಸು ಅಧಿಕಾರಿ ವಿಪುಲ್ ಅಂಬಾನಿಯವರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ.
ನೀರವ್ ಮೋದಿ ಮತ್ತು ಅವರ ಸಂಬಂಧಿ ವ್ಯಾಪಾರದ ಸಹಭಾಗಿ ಮೆಹುಲ್ ಚೊಕ್ಸಿ ಅವರು ಒಳಗೊಂಡಿರುವ ಪಿಎನ್ ಬಿ ಹಗರಣ ನಡೆದ ಬ್ರಾಡಿ ರಸ್ತೆ ಶಾಖೆಯಲ್ಲಿ ಸಿಬಿಐ ತೀವ್ರ ವಿಚಾರಣೆಯನ್ನು ಆರಂಭಿಸಿದೆ.
ಸಿಬಿಐ, ಇಬ್ಬರು ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕಾರಿಗಳನ್ನು ಮತ್ತು ನೀರವ್ ಮೋದಿ ಕಂಪೆನಿಯ ಅಧಿಕೃತ ಸಹಿ ಅಧಿಕಾರಿಯನ್ನು ತೀವ್ರ ವಿಚಾರಣೆಗೊಳಪಡಿಸಿದೆ. ಪ್ರಧಾನ ವ್ಯವಸ್ಥಾಪಕ ಮಟ್ಟದ ಅಧಿಕಾರಿಗಳು ಸೇರಿದಂತೆ ಮತ್ತೆ ಐವರು ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿರುವ ಸಿಬಿಐ ಈ ಮೂಲಕ ಒಟ್ಟು 11 ಮಂದಿಯನ್ನು ವಿಚಾರಣೆ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT