ಸಂಗ್ರಹ ಚಿತ್ರ 
ವಾಣಿಜ್ಯ

2 ಸಾವಿರ ರು. ವರೆಗಿನ ನಗದುರಹಿತ ವಹಿವಾಟಿಗೆ ಶುಲ್ಕವಿಲ್ಲ: ಅರುಣ್ ಜೇಟ್ಲಿ

ಡೆಬಿಟ್ ಕಾರ್ಡ್ ಬಳಸಿ 2 ಸಾವಿರದ ತನಕ ಮೊತ್ತ ಪಾವತಿ ಮಾಡುವವರು ಎಂಡಿಆರ್ ಶುಲ್ಕವನ್ನು ಪಾವತಿ ಮಾಡುವಂತಿಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಡೆಬಿಟ್ ಕಾರ್ಡ್ ಬಳಸಿ 2 ಸಾವಿರದ ತನಕ ಮೊತ್ತ ಪಾವತಿ ಮಾಡುವವರು ಎಂಡಿಆರ್ ಶುಲ್ಕವನ್ನು ಪಾವತಿ ಮಾಡುವಂತಿಲ್ಲ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಕೇವಲ ಡೆಬಿಟ್ ಕಾರ್ಡ್ ಮಾತ್ರವಲ್ಲದೇ ಭೀಮ್ ಆ್ಯಪ್ ಮತ್ತು ಇತರೆ ನಗದು ರಹಿತ ಸೇವೆಗಳಿಗೂ ಇದು ಅನ್ವಯವಾಗಲಿದ್ದು, 2 ಸಾವಿರ ವರೆಗಿನ ಮೊತ್ತ ಪಾವತಿಗೆ ಯಾವುದೇ ರೀತಿಯ ಶುಲ್ಕವಿಲ್ಲ ಎಂದು ಜೇಟ್ವಿ ಅವರು  ಹೇಳಿದ್ದಾರೆ.  ಈ ಹಿಂದೆಯೇ ಡಿಜಿಟಲ್ ವಹಿವಾಟನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಈ ಶುಲ್ಕ ಕಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿತ್ತು. ಅದರಂತೆ ಕಳೆದ ವರ್ಷಾಂತ್ಯದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ  ಕೇಂದ್ರ ಸರ್ಕಾರ ಎಂಡಿಆರ್ ಶುಲ್ಕವನ್ನು ರದ್ದುಗೊಳಿಸುವ ಸಂಬಂಧ ನಿರ್ಧಾರ ಕೈಗೊಂಡಿತ್ತು. ಇದೀಗ ಈ ನಿಯಮವನ್ನು ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ.
ಇನ್ನು ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ವಿತ್ತ ಇಲಾಖೆಯ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ರಾಜೀವ್ ಕುಮಾರ್ ಅವರು, 2017ರಲ್ಲಿ ಭೀಮ್ ಆ್ಯಪ್ ನ ಬಳಕೆಯಲ್ಲಿ ಗಣನೀಯ ಪ್ರಮಾಣದ ಏರಿಕೆಯಾಗಿದ್ದು, ವಹಿವಾಟಿನ  ಪ್ರಮಾಣದಲ್ಲಿ ಶೇ,86ರಷ್ಚು ಏರಿಕೆಯಾಗಿದೆ.  ಒಟ್ಟು ಸುಮಾರು 145.6 ಮಿಲಿಯನ್ ಬಳಕೆದಾರರು ಈ ಆ್ಯಪ್ ಅನ್ನು ಬಳಕೆ ಮಾಡಿದ್ದು, ಒಟ್ಟು 13, 174 ಕೋಟಿ ವಹಿವಾಟು ನಡೆದಿದೆ. ಪ್ರಸ್ತುತ ಸರ್ಕಾರ ಎಂಡಿಆರ್ ಶುಲ್ಕ ತೆರವು  ಮಾಡಿರುವುದರಿಂದ ಈ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಈ ನೂತನ ನಿಯಮ ಜನವರಿ 1ರಿಂದಲೇ ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT