ಅರುಣ್ ಜೇಟ್ಲಿ 
ವಾಣಿಜ್ಯ

ಕೃಷಿಗೆ ಹೆಚ್ಚಿನ ಆದ್ಯತೆ, ರೈತರಿಗೆ ತಲುಪಿದರಷ್ಟೇ ಜಿಡಿಪಿ ಬೆಳವಣಿಗೆ ಪ್ರಯೋಜನಕಾರಿ: ಜೆಟ್ಲಿ

ಕೃಷಿಯೇ ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ರೈತರಿಗೆ ತಲುಪಿದರಷ್ಟೇ ಜಿಡಿಪಿ ಬೆಳವಣಿಗೆ ಪ್ರಯೋಜನಕಾರಿಯಾಗಿರಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಕೃಷಿಯೇ ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ರೈತರಿಗೆ ತಲುಪಿದರಷ್ಟೇ ಜಿಡಿಪಿ ಬೆಳವಣಿಗೆ ಪ್ರಯೋಜನಕಾರಿಯಾಗಿರಲಿದೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕೃಷಿ ಕ್ಷೇತ್ರದ ಬೆಳವಣಿಗೆ ಕಡಿಮೆ ಇರಲಿದೆ ಎಂದು ಅಂದಾಜು ಮಾಡಲಾಗಿದ್ದು, ಫೆ.1 ರಂದು ಕೇಂದ್ರ ಸರ್ಕಾರದ ಪೂರ್ಣ ಪ್ರಮಾಣದ ಬಜೆಟ್ ಮಂಡನೆಯಾಗಲಿದೆ, ಈ ಹಿನ್ನೆಲೆಯಲ್ಲಿ ಅರುಣ್ ಜೇಟ್ಲಿ ಹೇಳಿಕೆ ಮಹತ್ವ ಪಡೆದುಕೊಂಡಿದೆ. 
ಇನ್ನು ಮಾರುಕಟ್ಟೆ ವಿಶ್ಲೇಷಕರೂ ಸಹ ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಿದೆ ಎಂದು ವಿಶ್ಲೇಷಿಸುತ್ತಿದ್ದಾರೆ. ಭಾರತ ಅತ್ಯಂತ ಹೆಚ್ಚು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ.  ದೇಶದ ಹೆಚ್ಚಿನ ಜನಸಂಖ್ಯೆ ಕೃಷಿ ಆಧಾರಿತವಾಗಿದೆ. ರೈತರನ್ನು ತಲುಪದ ಆರ್ಥಿಕ ಬೆಳವಣಿಗೆ ನಿಷ್ಪ್ರಯೋಜನಕಾರಿಯಾಗಲಿದೆ ಎಂದು ಹೇಳುವ ಮೂಲಕ ತಮ್ಮ ಮುಂದಿನ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಸುಳಿವು ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!