ಸಂಗ್ರಹ ಚಿತ್ರ 
ವಾಣಿಜ್ಯ

ಹೊಸ 100 ರೂನ ನೋಟುಗಳನ್ನು ಎಟಿಎಂಗೆ ಹೊಂದಿಸಲು ರೂ.100 ಕೋಟಿ ವೆಚ್ಚ!

100ರೂ. ಮುಖಬೆಲೆಯ ನೋಟುಗಳು ಎಟಿಎಂಗಳಲ್ಲಿ ಸಿಗುವಂತೆ ಮಾಡಬೇಕಾದರೆ ಇದಕ್ಕಾಗಿ 100 ಕೋಟಿ ವೆಚ್ಚ ಮಾಡಬೇಕು ಎಂದು ವಿತ್ತ ಸಚಿವಾಲಯ ಹೇಳಿದೆ.

ಮುಂಬೈ: 100ರೂ. ಮುಖಬೆಲೆಯ ನೋಟುಗಳು ಎಟಿಎಂಗಳಲ್ಲಿ ಸಿಗುವಂತೆ ಮಾಡಬೇಕಾದರೆ ಇದಕ್ಕಾಗಿ 100 ಕೋಟಿ ವೆಚ್ಚ ಮಾಡಬೇಕು ಎಂದು ವಿತ್ತ ಸಚಿವಾಲಯ ಹೇಳಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಾನ್ಫಿಡೆರೇಷನ್ ಆಫ್ ಎಟಿಎಂ ಇಂಡಸ್ಟ್ರಿ  (ಕ್ಯಾಟಿ) ನಿರ್ದೇಶಕ ವಿ.ಬಾಲಸುಬ್ರಮಣಿಯನ್‌ ಅವರು, ಪ್ರಸ್ತುತ ಇರುವ ಎಟಿಎಂ ಯಂತ್ರಗಳಿಗೆ 100 ರೂ.ಮುಖಬೆಲೆಯ ನೋಟುಗಳನ್ನು ತುಂಬಲು ವೆಚ್ಚವಾಗುತ್ತದೆ. ಇದಕ್ಕಾಗಿ ಸುಮಾರು 100 ಕೋಟಿ ರೂ.ಹಣವನ್ನು ಹೂಡಬೇಕಾಗುತ್ತದೆ ಎಂದು ಹೇಳಿದರು.
ದೇಶದಲ್ಲಿ ಒಟ್ಟು ಸುಮಾರು 2.4 ಲಕ್ಷ ಎಟಿಎಂಗಳಿದ್ದು, ಇವುಗಳಲ್ಲಿ 100 ರೂ.ಗಳ ಹೊಸ ನೋಟು ಸಿಗುವಂತೆ ಮಾಡಬೇಕಾದರೆ ಅವುಗಳನ್ನು ಮೇಲ್ದರ್ಜೆ (ರಿಕ್ಯಾಲಿಬರೇಟ್‌)ಗೆ ಏರಿಸಬೇಕು. ಅದಕ್ಕಾಗಿ 100 ಕೋಟಿ ರೂ. ಹೂಡಿಕೆ ಮಾಡಬೇಕಾಗಿದೆ ಎಂದು ಅವರು ಮಾಹಿತಿ ನೀಡಿದರು. ಇತ್ತೀಚೆಗೆ ಹೊಸದಾಗಿ ಜಾರಿ ಮಾಡಲಾಗಿರುವ 200 ರೂ. ನೋಟುಗಳನ್ನು ವಿತರಿಸುವ ದೃಷ್ಟಿಯಿಂದ ಈಗಷ್ಟೇ ಎಲ್ಲಾ ಎಟಿಎಂಗಳನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯ ಮುಕ್ತಾಯವಾಗಿದೆ. ಈಗ ಮತ್ತೆ 100 ರೂಯ ಮುಖಬೆಲೆಯ ನೋಟುಗಳು ಎಟಿಎಂನಲ್ಲಿ ಲಭ್ಯವಾಗುವಂತೆ ಮಾಡಬೇಕಾದರೆ ಇದಕ್ಕಾಗಿ ಮತ್ತೆ ಹೆಚ್ಚುವರಿ ಹಣ ವ್ಯಯವಾಗುತ್ತದೆ ಎಂದು ಕ್ಯಾಟಿಯ ನಿರ್ದೇಶಕ ವಿ.ಬಾಲಸುಬ್ರಮಣಿಯನ್‌ ತಿಳಿಸಿದ್ದಾರೆ.
'ನೂರರ ಮುಖಬೆಲೆಯ ಹಳೆಯ ಮತ್ತು ಹೊಸ ಎರಡೂ ಬಗೆಯ ನೋಟುಗಳು ಲಭ್ಯವಾಗಲಿವೆ. ಇವೆರಡನ್ನೂ ಎಟಿಎಂನಲ್ಲಿ ಲಭಿಸುವಂತೆ ಮಾಡುವುದು ದೊಡ್ಡ ಸವಾಲು. ಎಟಿಎಂಗಳಲ್ಲಿ ಹಳೆಯ ನೋಟುಗಳ ಮುಂದುವರಿಕೆ, ಹೊಸ ನೋಟುಗಳ ಬಿಡುಗಡೆ ಹಾಗೂ ಅವುಗಳ ಲಭ್ಯತೆಯು ಎಟಿಎಂ ತಂತ್ರಜ್ಞಾನದ ಮರುಜೋಡಣೆಯ ಅಗತ್ಯವಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತದೆ. ನೂರರ ಹಳೆಯ ನೋಟುಗಳ ವಿತ್‌ ಡ್ರಾದಿಂದ ಉಂಟಾಗುವ ಅಂತರವನ್ನು ಹೊಸ ನೋಟುಗಳು ತುಂಬಲು ವಿಫಲವಾದರೆ, ಈ ಅಸಮತೋಲನ ನಿವಾರಣೆಯಾಗುವವರೆಗೂ ಎಟಿಎಂಗಳಲ್ಲಿ ನೂರರ ನೋಟುಗಳ ಹಂಚಿಕೆಗೆ ಹೊಡೆತ ಬೀಳುತ್ತದೆ. 200 ಮುಖಬೆಲೆಯ ನೋಟುಗಳನ್ನು ಎಟಿಎಂಗಳಿಗೆ ಅಳವಡಿಸುವ ಕಾರ್ಯವೇ ಇನ್ನೂ ಮುಗಿದಿಲ್ಲ. ವ್ಯವಸ್ಥಿತ ಯೋಜನೆ ಮಾಡಿಕೊಳ್ಳದೆ ಇದ್ದರೆ 100ರ ಮುಖಬೆಲೆಯ ನೋಟುಗಳನ್ನು ಅಳವಡಿಸುವ ಕೆಲಸವೂ ವಿಳಂಬವಾಗುತ್ತದೆ ಎಂದು ಸಂಸ್ಥೆಗಳು ಕಳವಳ ವ್ಯಕ್ತಪಡಿಸಿವೆ ಎಂದು ಬಾಲಸುಬ್ರಮಣಿಯನ್‌ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT