ಅರುಣ್ ಜೇಟ್ಲಿ 
ವಾಣಿಜ್ಯ

ನಾಗರಿಕರು 'ಪ್ರಾಮಾಣಿಕವಾಗಿ' ತೆರಿಗೆ ಪಾವತಿಸಿದರೆ ತೈಲದ ಆದಾಯದ ಮೇಲೆ ಅವಲಂಬನೆ ತಗ್ಗುತ್ತದೆ: ಅರುಣ್ ಜೇಟ್ಲಿ

ತೈಲವನ್ನೇ ಆದಾಯ ಮೂಲವಾಗಿ ಅವಲಂಬಿಸುವುದನ್ನು ತಪ್ಪಿಸಲು ತೆರಿಗೆದಾರರು "ಪಾರಾಮಾಣಿಕವಾಗಿ" ತೆರಿಗೆ ಪಾವತಿ ಮಾಡಬೇಕು ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ತೈಲವನ್ನೇ ಆದಾಯ ಮೂಲವಾಗಿ ಅವಲಂಬಿಸುವುದನ್ನು ತಪ್ಪಿಸಲು ತೆರಿಗೆದಾರರು "ಪಾರಾಮಾಣಿಕವಾಗಿ" ತೆರಿಗೆ ಪಾವತಿ ಮಾಡಬೇಕು ಎಂದು ಕೇಂದ್ರ  ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಇದೇ ವೇಳೆ ಪೆಟ್ರೋಲ್ ಹಾಗೂ ಡೀಸಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿತ ಮಾಡಲಾಗದು ಎಂದು ತಿಳಿಸಿದ ಅವರು ಇದರಿಂದ ಉತ್ಪಾದಕರ ಮೇಲೆ ಹೊಡೆತ ಬೀಳಲಿದೆ ಎಂದಿದ್ದಾರೆ.
"ವೇತನ ಪಡೆಯುವ ವರ್ಗ ತೆರಿಗೆ ಪಾವತಿಯನ್ನು ಮಾಡುವಂತೆ ಇತರೆ ವರ್ಗದ ಜನ ಸಹ  ತೆರಿಗೆ ಪಾವತಿಯನ್ನು ಮಾಡಿದಲ್ಲಿ ಭಾರತ  "ತೆರಿಗೆ ಸಂಬಂಧಿ ದೂರುಗಳಿಂದ" ಮುಕ್ತವಾಗಲಿದೆ" ಜೇಟ್ಲಿ ಹೇಳಿದ್ದಾರೆ.
"ರಾಜಕೀಯ ನಾಯಕರಿಗೆ, ಆರ್ಥಿಕ ಪರಿಣತರಿಗೆ ನಾನು ಮನವಿ ಮಾಡುವುದೆಂದರೆ ತೈಲದ ಮೇಲಿನ ತೆರಿಗೆ ಆದಾಯದ ಅವಲಂಬನೆ ಕಡಿಮೆಯಾಗಬೇಕು, ಅದಕ್ಕಾಗಿ ತೆರಿಗೆ ತಪ್ಪಿಸುವಿಕೆ ನಿಲ್ಲಬೇಕು. ಜನರು ತಮ್ಮ ತೆರಿಗೆಗಳನ್ನು ಪ್ರಾಮಾಣಿಕವಾಗಿ ಪಾವತಿಸಬೇಕಿದೆ. ಹಾಗಾದಲ್ಲಿ ತೈಲದ ಮೇಲಿನ ಅವಲಂಬನೆ ಕಡಿಮೆಯಾಗಲಿದೆ."
'The Economy and the Markets Reward Structural Reforms and Fiscal Prudence' ಎನ್ನುವ ತಲೆಬರಹದಲ್ಲಿ ಜೇಟ್ಲಿ ತಮ್ಮ ಫೇಸ್ ಬುಕ್ ಕಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕಳೆದ ನಾಲ್ಕು ವರ್ಷಗಳಲ್ಲಿ ಕೇಂದ್ರ ಸರ್ಕಾರದ ತೆರಿಗೆ -ಜಿಡಿಪಿ ಅನುಪಾತವು ಶೇಕಡಾ 10 ರಿಂದ 11.5 ಕ್ಕೆ ಏರಿದೆ ಎಂದು ಜೇಟ್ಲಿ ಹೇಳಿದ್ದಾರೆ. ಈ ಪೈಕಿ ಅರ್ಧದಷ್ಟು ಜಿಡಿಪಿ ಯ 0.72 ಶೇಕಡದಷ್ಟು ತೈಲದ ಮೇಲಿನ ತೆರಿಗೆ ಹೊರತಾದ ಅನುಪಾತದಲ್ಲಿ  ಹೆಚ್ಚಳಕ್ಕೆ ಕಾರಣವಾಗಿದೆ. 2017-18ರಲ್ಲಿ ಜಿಡಿಪಿ ಪ್ರಮಾಣ 9.8 ಶೇಕಡಾ ಗೆ ತಲುಪಿದ್ದು ಇದು  2007-08ರ ನಂತರದ ಅತ್ಯಧಿಕ ಪ್ರಮಾಣವಾಗಿತ್ತು. ಅಂತರಾಷ್ಟ್ರೀಯ ಮಟ್ಟದ ಕೆಲ ಬದಲಾವಣೆಗಳಿಂದಾಗಿ ಈ ವರ್ಷ ನಮ್ಮ ಆದಾಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT