ಸಾಂದರ್ಭಿಕ ಚಿತ್ರ 
ವಾಣಿಜ್ಯ

ವ್ಯಾಪಾರಕ್ಕೆ ಸಾಲ ನೀಡುವ ಒಪ್ಪಂದ ಪತ್ರ ನೀಡಿಕೆಗೆ ಆರ್ ಬಿಐ ಬ್ರೇಕ್

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸುಮಾರು 13,000 ಕೋಟಿ ರೂಪಾಯಿ ವಂಚನೆ ಎಸಗಿದ ಉದ್ಯಮಿ ...

ಮುಂಬೈ: ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ಸುಮಾರು 13,000 ಕೋಟಿ ರೂಪಾಯಿ ವಂಚನೆ ಎಸಗಿದ ಉದ್ಯಮಿ ನೀರವ್ ಮೋದಿ ಮತ್ತು ಮೆಹುಲ್ ಚೊಕ್ಸಿ ಹಗರಣ ಪ್ರಕರಣ ಹಿನ್ನೆಲೆಯಲ್ಲಿ ಸಾಲ ಒಪ್ಪಂದ ಪತ್ರ(ಎಲ್ಒಯು)ವನ್ನು ಬ್ಯಾಂಕುಗಳು ನೀಡುವುದನ್ನು ನಿಲ್ಲಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿರ್ಧರಿಸಿದೆ.

 ತಕ್ಷಣದಿಂದಲೇ ಜಾರಿಗೆ ಬರುವಂತೆ ಬ್ಯಾಂಕುಗಳು ಸಾಲ ಒಪ್ಪಂದ ಪತ್ರ ಮತ್ತು ಸಾಲ ಭರವಸೆ ಪತ್ರ(ಎಲ್ ಒಸಿ) ನೀಡುವ ಪದ್ಧತಿ ರದ್ದುಪಡಿಸಿ ಆರ್ ಬಿಐ ಆದೇಶ ಹೊರಡಿಸಿದೆ.

ವಿಸ್ತೃತ ಮಾರ್ಗಸೂಚಿಗಳ ವಿಮರ್ಶೆಯ ಆಧಾರದ ಮೇಲೆ, ಭಾರತಕ್ಕೆ ಆಮದು ಮಾಡಿಕೊಳ್ಳುವ  ವಹಿವಾಟುಗಳಿಗೆ ಬ್ಯಾಂಕುಗಳು ಎಲ್ಒಯು ಮತ್ತು ಎಲ್ಒಸಿ ಗಳನ್ನು ನೀಡುವುದನ್ನು ತಡೆ ನೀಡಿ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ತರಲಾಗಿದೆ ಎಂದು ಆರ್ ಬಿಐ ಅಧಿಸೂಚನೆಯಲ್ಲಿ ತಿಳಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಕ್ರಮವಾಗಿ ಎಲ್ಒಯು ಮತ್ತು ಆಮದು ಬಿಲ್ ಗಳ ಹಣ ಪಾವತಿಗೆ ವಿದೇಶಿ ಪತ್ರಗಳ ಅಕ್ರಮ ವರ್ಗಾವಣೆ ಮಾಡಿ 12,967 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿತ್ತು. ಈ ಹಿನ್ನೆಲೆಯಲ್ಲಿ  ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಕ್ರಮ ವಿರುದ್ಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿವೆ.

ನಿಬಂಧನೆಗಳ ಅನುಸರಣೆ ಆಧಾರದ ಮೇಲೆ ಭಾರತಕ್ಕೆ ಆಮದು ಮಾಡಿಕೊಳ್ಳುವುದಕ್ಕೆ  ವಹಿವಾಟುಗಳಿಗೆ  ಬ್ಯಾಂಕ್ ಖಾತ್ರಿ ಮತ್ತು ಲೆಟರ್ಸ್ ಆಫ್ ಕ್ರೆಡಿಟ್ ನೀಡಬಹುದು ಎಂದು ಆರ್ ಬಿಐ ಅಧಿಸೂಚನೆಯಲ್ಲಿ ವಿವರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT