ಸಂಗ್ರಹ ಚಿತ್ರ 
ವಾಣಿಜ್ಯ

ಕೇಂದ್ರದ ನಡೆಗೆ ಹೆದರಿ ಬ್ಯಾಂಕುಗಳಿಗೆ 83,000 ಕೋಟಿ ರು. ಬಾಕಿ ಪಾವತಿಸಿದ 2,100 ಕಂಪನಿಗಳು!

ಕೇಂದ್ರ ಸರ್ಕಾರ ನೂತನವಾಗಿ ಜಾರಿ ಮಾಡಿರುವ ಹಣಕಾಸು ನಷ್ಟ ಮತ್ತು ದಿವಾಳಿ ಮಸೂದೆಯ ಪರಿಣಾಮಕ್ಕೆ ಹೆದರಿದ ವಿವಿಧ ಕಂಪನಿಗಳ ಪ್ರವರ್ತಕರು ತಾವು ಬಾಕಿ...

ನವದೆಹಲಿ: ಕೇಂದ್ರ ಸರ್ಕಾರ ನೂತನವಾಗಿ ಜಾರಿ ಮಾಡಿರುವ ಹಣಕಾಸು ನಷ್ಟ ಮತ್ತು ದಿವಾಳಿ ಮಸೂದೆಯ ಪರಿಣಾಮಕ್ಕೆ ಹೆದರಿದ ವಿವಿಧ ಕಂಪನಿಗಳ ಪ್ರವರ್ತಕರು ತಾವು ಬಾಕಿ ಉಳಿಸಿಕೊಂಡಿದ್ದ 83,000 ಕೋಟಿ ರುಪಾಯಿಯನ್ನು ಬ್ಯಾಂಕುಗಳಿಗೆ ಮರುಪಾವತಿ ಮಾಡಿದ್ದಾರೆ. 
ಕೇಂದ್ರ ಸರ್ಕಾರ ನಡೆಗೆ ಹೆದರಿದ ಸುಮಾರು 2100ಕ್ಕೂ ಹೆಚ್ಚು ಕಂಪನಿಗಳು 83 ಸಾವಿರ ಕೋಟಿ ರುಪಾಯಿ ಮೊತ್ತವನ್ನು ಬ್ಯಾಂಕುಗಳಿಗೆ ಮರುಪಾವತಿ ಮಾಡಿವೆ. ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದ ಮಾಹಿತಿ ಪ್ರಕಾರ, 2100ಕ್ಕೂ ಹೆಚ್ಚು ಕಂಪನಿಗಳು ಹಳೆಯ ಬ್ಯಾಂಕ್ ಬಾಕಿಯನ್ನು ಪಾವತಿಸಿವೆ. 
ಹಣಕಾಸು ನಷ್ಟ ಮತ್ತು ದಿವಾಳಿ ಮಸೂದೆಯ ಪ್ರಕಾರ 90 ದಿನಗಳ ಕಾಲ ಪಾವತಿಯಾಗದೆ ಉಳಿದ ಸಾಲವನ್ನು ಅನುತ್ಪಾದಕ ಸ್ವತ್ತು ಎಂದು ವರ್ಗಿಕರಿಸಲಾಗುತ್ತದೆ. ನಂತರ ಮಾಲೀಕರು ಅಥವಾ ಹೂಡಿಕೆದಾರರು ಕಂಪನಿಗಳ ಮೇಲಿನ ನಿಯಂತ್ರಣ ಕಳೆದುಕೊಳ್ಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT