ಸಂಗ್ರಹ ಚಿತ್ರ 
ವಾಣಿಜ್ಯ

ಕೇಂದ್ರದ ನಡೆಗೆ ಹೆದರಿ ಬ್ಯಾಂಕುಗಳಿಗೆ 83,000 ಕೋಟಿ ರು. ಬಾಕಿ ಪಾವತಿಸಿದ 2,100 ಕಂಪನಿಗಳು!

ಕೇಂದ್ರ ಸರ್ಕಾರ ನೂತನವಾಗಿ ಜಾರಿ ಮಾಡಿರುವ ಹಣಕಾಸು ನಷ್ಟ ಮತ್ತು ದಿವಾಳಿ ಮಸೂದೆಯ ಪರಿಣಾಮಕ್ಕೆ ಹೆದರಿದ ವಿವಿಧ ಕಂಪನಿಗಳ ಪ್ರವರ್ತಕರು ತಾವು ಬಾಕಿ...

ನವದೆಹಲಿ: ಕೇಂದ್ರ ಸರ್ಕಾರ ನೂತನವಾಗಿ ಜಾರಿ ಮಾಡಿರುವ ಹಣಕಾಸು ನಷ್ಟ ಮತ್ತು ದಿವಾಳಿ ಮಸೂದೆಯ ಪರಿಣಾಮಕ್ಕೆ ಹೆದರಿದ ವಿವಿಧ ಕಂಪನಿಗಳ ಪ್ರವರ್ತಕರು ತಾವು ಬಾಕಿ ಉಳಿಸಿಕೊಂಡಿದ್ದ 83,000 ಕೋಟಿ ರುಪಾಯಿಯನ್ನು ಬ್ಯಾಂಕುಗಳಿಗೆ ಮರುಪಾವತಿ ಮಾಡಿದ್ದಾರೆ. 
ಕೇಂದ್ರ ಸರ್ಕಾರ ನಡೆಗೆ ಹೆದರಿದ ಸುಮಾರು 2100ಕ್ಕೂ ಹೆಚ್ಚು ಕಂಪನಿಗಳು 83 ಸಾವಿರ ಕೋಟಿ ರುಪಾಯಿ ಮೊತ್ತವನ್ನು ಬ್ಯಾಂಕುಗಳಿಗೆ ಮರುಪಾವತಿ ಮಾಡಿವೆ. ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದ ಮಾಹಿತಿ ಪ್ರಕಾರ, 2100ಕ್ಕೂ ಹೆಚ್ಚು ಕಂಪನಿಗಳು ಹಳೆಯ ಬ್ಯಾಂಕ್ ಬಾಕಿಯನ್ನು ಪಾವತಿಸಿವೆ. 
ಹಣಕಾಸು ನಷ್ಟ ಮತ್ತು ದಿವಾಳಿ ಮಸೂದೆಯ ಪ್ರಕಾರ 90 ದಿನಗಳ ಕಾಲ ಪಾವತಿಯಾಗದೆ ಉಳಿದ ಸಾಲವನ್ನು ಅನುತ್ಪಾದಕ ಸ್ವತ್ತು ಎಂದು ವರ್ಗಿಕರಿಸಲಾಗುತ್ತದೆ. ನಂತರ ಮಾಲೀಕರು ಅಥವಾ ಹೂಡಿಕೆದಾರರು ಕಂಪನಿಗಳ ಮೇಲಿನ ನಿಯಂತ್ರಣ ಕಳೆದುಕೊಳ್ಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT