ಸಂಗ್ರಹ ಚಿತ್ರ 
ವಾಣಿಜ್ಯ

ಇಂದಿನಿಂದ ಬ್ಯಾಂಕ್ ನೌಕರರಿಂದ ರಾಷ್ಟ್ರವ್ಯಾಪಿ ಮುಷ್ಕರ: ಬ್ಯಾಂಕ್ ಸೇವೆಗಳಿಗೆ ಅಡಚಣೆ!

ಇಂದಿನಿಂದ ಎರಡು ದಿನಗಳ ಕಾಲ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಮುಂದಾಗಿದ್ದು, ಬ್ಯಾಂಕಿಂಗ್ ವ್ಯವಹಾರಗಳಿಗೆ ಅಡಚಣೆ ಉಂಟಾಗಲಿದೆ...

ನವದೆಹಲಿ: ಇಂದಿನಿಂದ ಎರಡು ದಿನಗಳ ಕಾಲ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಮುಂದಾಗಿದ್ದು, ಬ್ಯಾಂಕಿಂಗ್ ವ್ಯವಹಾರಗಳಿಗೆ ಅಡಚಣೆ ಉಂಟಾಗಲಿದೆ. 
ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರು ಮೇ.30 ಹಾಗೂ 31ರಂದು ರಾಷ್ಟ್ರವ್ಯಾಪ್ತಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. 
ಎಟಿಎಂ ಹಾಗೂ ವೇತನ ವಿತ್ ಡ್ರಾ ಮಾಡುವುದರ ಮೇಲೆಯೂ ಬ್ಯಾಂಕ್ ನೌಕರರ ಪ್ರತಿಭಟನೆ ಪರಿಣಾಮ ಬೀರಲಿದ್ದು, ಆನ್ ಲೈನ್ ವಹಿವಾಟನ್ನೇ ಗ್ರಾಹಕರು 2 ದಿನಗಳ ಕಾಲ ನೆಚ್ಚಿಕೊಂಡಿರಬೇಕಾಗುತ್ತದೆ. ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ)  ಅತ್ಯಲ್ಪ ಶೇ.2 ರಷ್ಟು ವೇತನ ಏರಿಕೆ ಮಾಡುವುದನ್ನು ವಿರೋಧಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಮೇ.5 ರಂದು ಬ್ಯಾಂಕ್ ನೌಕರರೊಂದಿಗೆ ಐಬಿಎ ಮಾತುಕತೆ ನಡೆಸಿತ್ತು. ಈ ಸಭೆಯಲ್ಲಿ ಶೇ.2 ರಷ್ಟು ವೇತನ ಹೆಚ್ಚು ಮಾಡುವುದಾಗಿ ತಿಳಿಸಿತ್ತು. ಮತ್ತೊಂದು ಮೂಲಗಳ ಪ್ರಕಾರ ಎಟಿಎಂ ಗಾರ್ಡ್ ಗಳೂ ಸಹ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಎಟಿಎಂ ಗಳಲ್ಲಿ ಕ್ಯಾಶ್ ವಿತ್ ಡ್ರಾ ಮಾಡುವುದಕ್ಕೆ ಸಮಸ್ಯೆಯಾಗಲಿದೆ ಎಂದು ಹೇಳಲಾಗುತ್ತಿದೆ. 
ಬ್ಯಾಂಕ್ ನೌಕರರು, ಸಿಬ್ಬಂದಿಗಳು ಪ್ರತಿಭಟನೆ ನಡೆಸುವುದಕ್ಕೂ ಮುನ್ನ ಎಟಿಎಂ ಗಳಲ್ಲಿ ನಗದನ್ನು ತುಂಬಲಾಗುವುದು ಈ ಮೂಲಕ ಗ್ರಾಹಕರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಬ್ಯಾಂಕ್ ಗಳು ಭರವಸೆ ನೀಡಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?