ಅರುಣ್ ಜೇಟ್ಲಿ 
ವಾಣಿಜ್ಯ

ಕೆಟ್ಟ ಸಾಲ ಕುಸಿತ, ಪಿಎಸ್ ಯು ಬ್ಯಾಂಕ್ ಗಳ ಸಾಲ ಮರುಪಡೆಯುವಿಕೆ ಚೇತರಿಕೆ: ಜೇಟ್ಲಿ

ಬ್ಯಾಂಕಿಂಗ್ ಕ್ಷೇತ್ರದ ಅನುತ್ಪಾದಕ ಆಸ್ತಿ(ಎನ್​ಪಿಎ-ನಾನ್ ಪರ್ಫಾಮಿಂಗ್ ಅಸೆಟ್)ಯ ಪ್ರಮಾಣ ಕಡಿಮೆಯಾಗುತ್ತಿದ್ದು....

ನವದೆಹಲಿ: ಬ್ಯಾಂಕಿಂಗ್ ಕ್ಷೇತ್ರದ ಅನುತ್ಪಾದಕ ಆಸ್ತಿ(ಎನ್​ಪಿಎ-ನಾನ್ ಪರ್ಫಾಮಿಂಗ್ ಅಸೆಟ್)ಯ ಪ್ರಮಾಣ ಕಡಿಮೆಯಾಗುತ್ತಿದ್ದು, ಸಾಲ ಮರುಪಡೆಯುವಿಕೆ ಹೆಚ್ಚಾಗಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಮಂಗಳವಾರ ಹೇಳಿದ್ದಾರೆ.
ಸಾರ್ವಜನಿಕ ವಾಲಯ(ಪಿಎಸ್ ಯು)ದ ಬ್ಯಾಂಕ್ ಗಳ ವಾರ್ಷಿಕ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೇಟ್ಲಿ, ಹಲವು ವರ್ಷಗಳಿಂದ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಿಗೆ ಎನ್ ಪಿಎ ದೊಡ್ಡ ಸವಾಲಾಗಿದೆ. ಆದರೆ ದಿವಾಳಿತನ ಮತ್ತು ದಿವಾಳಿತನ ಸಂಹಿತೆ (ಐಬಿಸಿ)ಜಾರಿಗೊಳಿಸಿದ ನಂತರ, ಸಾಲ ಬಾಕಿ ಉಳಿಸಿಕೊಂಡಿರುವವರ ಆಸ್ತಿಗಳನ್ನು ಹರಾಜು ಹಾಕುವ ಮೂಲಕ ಸಾಲ ಮರುಪಡೆಯುವ ಪ್ರಮಾಣ ಹೆಚ್ಚಾಗಿದೆ ಎಂದರು.
ಸಾಲ ಮರುಪಡೆಯುವಿಕೆ ಪ್ರಕ್ರಿಯೆ ಉತ್ತಮವಾಗಿದ್ದು, ಬ್ಯಾಂಕುಗಳ ಸಾಲ ನೀಡುವ ಸಾಮರ್ಥ್ಯವು ಹೆಚ್ಚು ಉತ್ತಮವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಹಣಕಾಸು ಇಲಾಕೆ ಕಾರ್ಯದರ್ಶಿ ರಾಜೀವ್ ಕುಮಾರ್ ಅವರು, ಈ ಹಣಕಾಸು ವರ್ಷದಲ್ಲಿ ಐಬಿಸಿ ಮೂಲಕ 1.8 ಲಕ್ಷ ಕೋಟಿ ರುಪಾಯಿ ಮರುಪಡೆಯುವ ನಿರೀಕ್ಷೆ ಇದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT