ಕೇವಲ ಒಂದು ವಾಟ್ಸ್ ಆಪ್ ಮೆಸೇಜ್ ನಿಂದ ಪಾತಾಳಕ್ಕಿಳಿಯಿತು ಆ ಕಂಪನಿಯ ಷೇರು! 
ವಾಣಿಜ್ಯ

ಕೇವಲ ಒಂದು ವಾಟ್ಸ್ ಆಪ್ ಮೆಸೇಜ್ ನಿಂದ ಪಾತಾಳಕ್ಕಿಳಿಯಿತು ಆ ಕಂಪನಿಯ ಷೇರು!

ವಾಟ್ಸ್ ಆಪ್ ನಲ್ಲಿ ವೈರಲ್ ಆಗುವ ಸಂದೇಶಗಳಿಂದ ಗುಂಪು ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಈಗ ವಾಟ್ಸ್ ಆಪ್ ನಲ್ಲಿ ವೈರಲ್ ಆಗುವ ಸಂದೇಶಗಳಿಂದ ಉದ್ಯಮ ವಲಯಕ್ಕೂ ತಲೆ

ವಾಟ್ಸ್ ಆಪ್ ನಲ್ಲಿ ವೈರಲ್ ಆಗುವ ಸಂದೇಶಗಳಿಂದ ಗುಂಪು ಹಲ್ಲೆ ನಡೆಯುತ್ತಿರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ಈಗ ವಾಟ್ಸ್ ಆಪ್ ನಲ್ಲಿ ವೈರಲ್ ಆಗುವ ಸಂದೇಶಗಳಿಂದ ಉದ್ಯಮ ವಲಯಕ್ಕೂ ತಲೆ ಬಿಸಿ ಶುರುವಾಗಿದೆ. 
ಇನ್ಫಿಬೀಮ್ ಅವೆನ್ಯೂಸ್ ಸಂಸ್ಥೆಯ ಷೇರುಗಳು ಕೇವಲ ಒಂದೇ ಒಂದು ವಾಟ್ಸ್ ಆಪ್ ಮೆಸೇಜ್ ನಿಂದ ಬರೊಬ್ಬರಿ ಶೇ. 70 ರಷ್ಟು ಇಳಿಕೆಯಾಗದೆ. ವಾರ್ಷಿಕ ಸಮಾನ್ಯ ಸಭೆಗೂ ಮುನ್ನ ಈ ಘಟನೆ ನಡೆದಿದ್ದು 2016 ರ ನವೆಂಬರ್ ನಿಂದ ಇದೇ ಮೊದಲ ಬಾರಿಗೆ ಸಂಸ್ಥೆಯ ಷೇರುಗಳು ಈ ಪ್ರಮಾಣದಲ್ಲಿ ಕುಸಿದಿದೆ. ಸಂಸ್ಥೆಯ ಅಕೌಂಟಿಂಗ್ ಪದ್ಧತಿಗಳಲ್ಲಿ ಮೋಸ ನಡೆಯುತ್ತಿದೆ ಎಂಬ ವಾಟ್ಸ್ ಆಪ್ ಮೆಸೇಜ್ ಟ್ರೇಡರ್ ಗಳಲ್ಲಿ ಆತಂಕ ಮೂಡಿಸಿದ್ದ ಹಿನ್ನೆಲೆಯಲ್ಲಿ ಸಂಸ್ಥೆಯ ಷೇರುಗಳು ಬೃಹತ್ ಪ್ರಮಾಣದಲ್ಲಿ ಕುಸಿದಿದೆ ಎಂದು ತಿಳಿದುಬಂದಿದೆ. 
ವರದಿಗಳ ಪ್ರಕಾರ ಹೂಡಿಕೆದಾರರಿಗೆ ಬಂಡವಾಳ ಮಾರುಕಟ್ಟೆಯಲ್ಲಿ ಬರೊಬ್ಬರಿ 9,200 ಕೋಟಿ ರೂಪಾಯಿ ನಷ್ಟವಾಗಿದ್ದು,  2009 ರ ಜನವರಿಯಲ್ಲಿ ಸತ್ಯಂ ಕಂಪ್ಯೂಟರ್ಸ್ ಹಗರಣ ಬೆಳಕಿಗೆ ಬಂದ ನಂತರ ಸತ್ಯಂ ಕಂಪ್ಯೂಟರ್ಸ್ ಸರ್ವೀಸ್ ನ ಷೇರುಗಳು ಒಂದೇ ದಿನದಲ್ಲಿ ಶೇ.83 ರಷ್ಟು ಕುಸಿದಿದ್ದನ್ನು ಬಿಟ್ಟರೆ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ ಕಂಪನಿಯೊಂದರ ಷೇರುಗಳು ಭಾರಿ ಪ್ರಮಾಣದಲ್ಲಿ ಕುಸಿದಿರುವುದು ದಾಖಲಾಗಿದೆ. 
ಇನ್ಫಿಬೀಮ್ ಅವೆನ್ಯೂಸ್ ಕುರಿತು ಆತಂಕ ಮೂಡಿಸುವ ವಾಟ್ಸ್ ಆಪ್ ಮೆಸೇಜ್ ಗಳು ಹಲವು ತಿಂಗಳುಗಳಿಂದ ಹರಿದಾಡುತ್ತಿತ್ತು. ಬಡ್ಡಿ ರಹಿತ ಹಾಗೂ ಯಾವುದೇ ಆಧಾರ ಇಲ್ಲದೇ,  ಇನ್ಫಿಬೀಮ್ ಅವೆನ್ಯೂಸ್ ಸಂಸ್ಥೆಯ ಋಣಾತ್ಮಕ ಆಸ್ತಿ ಹೊಂದಿರುವ ಸಂಸ್ಥೆಯ ಒಂದು ಯುನಿಟ್ ಗೆ ಸಾಲ ನೀಡಲಾಗಿದೆ.  ಅಷ್ಟೇ ಅಲ್ಲದೇ ಸಂಸ್ಥೆಯ ಸಹ ಸಂಸ್ಥಾಪಕ ಈಗ  ನಾನ್ ಪ್ರೊಮೋಟರ್ ಆಗಿದ್ದಾರೆ ಆದರೆ ಹೆಚ್ಚು ಷೇರುಗಳನ್ನು ಹೊಂದಿದ್ದಾರೆ ಎಂದು ಮೆಸೇಜ್ ನಲ್ಲಿ ಆರೋಪಿಸಲಾಗಿತ್ತು, ಆದರೆ ಇನ್ವೆಸ್ಟರ್ ಬ್ಯಾಂಕ್ ಈಕ್ವಿರಸ್ ಕ್ಯಾಪಿಟಲ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT