ಸಂಗ್ರಹ ಚಿತ್ರ 
ವಾಣಿಜ್ಯ

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್: ಎಟಿಎಂ ವಹಿವಾಟಿನಲ್ಲಿ ಮಹತ್ವದ ಬದಲಾವಣೆ, ಬ್ಯಾಂಕ್ ಗಳಿಗೆ ಆರ್‌ಬಿಐ ಸೂಚನೆ

ಬ್ಯಾಂಕ್ ಗ್ರಾಹಕರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಒಳ್ಳೆ ಸುದ್ದಿ ನೀಡಿದ್ದು, ಎಟಿಎಂ ಹಣ ವಹಿವಾಟಿನಲ್ಲಿ ಕೆಲ ಮಹತ್ವದ ಬದಲಾವಣೆ ತಂದಿದೆ. ಅಲ್ಲದೆ ಈ ಕುರಿತಂತೆ ಬ್ಯಾಂಕ್ ಗಳಿಗೂ ಸೂಚನೆ ನೀಡಿದೆ.

ನವದೆಹಲಿ:  ಬ್ಯಾಂಕ್ ಗ್ರಾಹಕರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಒಳ್ಳೆ ಸುದ್ದಿ ನೀಡಿದ್ದು, ಎಟಿಎಂ ಹಣ ವಹಿವಾಟಿನಲ್ಲಿ ಕೆಲ ಮಹತ್ವದ ಬದಲಾವಣೆ ತಂದಿದೆ. ಅಲ್ಲದೆ ಈ ಕುರಿತಂತೆ ಬ್ಯಾಂಕ್ ಗಳಿಗೂ ಸೂಚನೆ ನೀಡಿದೆ.

ಮೂಲಗಳ ಪ್ರಕಾರ, ಎಟಿಎಂ ವಹಿವಾಟಿನ ಕೆಲವು ನಿಯಮಗಳನ್ನು ಬದಲಾವಣೆ ಮಾಡುವಂತೆ ಬ್ಯಾಂಕುಗಳಿಗೆ ಆರ್‌ಬಿಐ ನಿರ್ದೇಶನ ನೀಡಿದೆ. ಆರ್ ಬಿಐ ಮೂಲಗಳ  ಪ್ರಕಾರ ತಾಂತ್ರಿಕ ಮತ್ತು ಇತರೆ ನಿರ್ದಿಷ್ಟ ಕಾರಣಗಳಿಂದಾಗಿ ವಿಫಲವಾದ ಸ್ವಯಂಚಾಲಿತ ಟೆಲ್ಲರ್ ಯಂತ್ರ (ಎಟಿಎಂ) ವಹಿವಾಟುಗಳನ್ನು 'ಐದು ಉಚಿತ ಮಾಸಿಕ ಎಟಿಎಂ ವಹಿವಾಟು'ಗಳಲ್ಲಿ ಸೇರಿಸದಂತೆ ಬ್ಯಾಂಕ್ ಗಳಿಗೆ ಸೂಚಿಸಿದೆ ಎನ್ನಲಾಗಿದೆ.

ಈ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಆರ್ ಬಿಐ, 'ತಾಂತ್ರಿಕ ಕಾರಣಗಳಿಂದಾಗಿ ವಿಫಲವಾದ ವಹಿವಾಟುಗಳು, ಎಟಿಎಂಗಳಲ್ಲಿ ಕರೆನ್ಸಿ(ಹಣ) ಲಭ್ಯವಿಲ್ಲದಿರುವುದು ಇತ್ಯಾದಿಗಳನ್ನು ಉಚಿತ ಎಟಿಎಂ ವಹಿವಾಟಿನ ಸಂಖ್ಯೆಯಲ್ಲಿ ಸೇರಿಸಲಾಗಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಹಾರ್ಡ್‌ವೇರ್, ಸಾಫ್ಟ್‌ವೇರ್, ಸಂವಹನ ಸಮಸ್ಯೆಗಳು, ಎಟಿಎಂನಲ್ಲಿ ಹಣ ಲಭ್ಯವಿಲ್ಲದಿರುವುದು ಮತ್ತು ಬ್ಯಾಂಕ್ ಅಥವಾ ಸೇವಾ ಪೂರೈಕೆದಾರರಿಗೆ ನೇರವಾಗಿ ಅಥವಾ ಸಂಪೂರ್ಣವಾಗಿ ಸೂಚಿಸಬಹುದಾದ ಇತರ ಸಮಸ್ಯೆಗಳು ಮತ್ತು ಅಮಾನ್ಯ ಪಿನ್ ಅಥವಾ ಅನುಮೋದನೆ ಗೊಳಿಸುವಿಕೆಯಂತಹ ತಾಂತ್ರಿಕ ಕಾರಣಗಳನ್ನು ವಿಫಲವಾದ ವಹಿವಾಟುಗಳು ಈ ಉಚಿತ ವಹಿವಾಟು ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂದು ಹೇಳಿದೆ.

ಅಂತೆಯೇ ಇಂತಹ ವಹಿವಾಟುಗಳನ್ನು ಗ್ರಾಹಕರಿಗೆ ಮಾನ್ಯ ಮಾಡಿದ ಎಟಿಎಂ ವಹಿವಾಟು ಎಂದು ಪರಿಗಣಿಸಲಾಗುವುದಿಲ್ಲ. ಈ ವಿಫಲ ವಹಿವಾಟುಗಳಿಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ. ನಗದು ರಹಿತ ವಹಿವಾಟುಗಳು (ಬ್ಯಾಲೆನ್ಸ್ ವಿಚಾರಣೆ, ಚೆಕ್ ಬುಕ್ ವಿನಂತಿ, ತೆರಿಗೆಗಳ ಪಾವತಿ, ಹಣ ವರ್ಗಾವಣೆ), ಇದು ಉಚಿತ ಎಟಿಎಂ ವಹಿವಾಟಿನ ಭಾಗವಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಆರ್ ಬಿಐ ಉಲ್ಲೇಖಿಸಿದೆ.

ಇನ್ನು ನೂತನ ಬದಲಾವಣೆಗಳ ಕುರಿತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು, ನಗರ ಸಹಕಾರಿ ಬ್ಯಾಂಕುಗಳು, ರಾಜ್ಯ ಸಹಕಾರಿ ಬ್ಯಾಂಕುಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಪಾವತಿ ಬ್ಯಾಂಕುಗಳು, ವೈಟ್-ಲೇಬಲ್ ಎಟಿಎಂ ಆಪರೇಟರ್‌ ಗಳು ಸೇರಿದಂತೆ ಎಲ್ಲಾ ನಿಗದಿತ ವಾಣಿಜ್ಯ ಬ್ಯಾಂಕುಗಳಿಗೆ ಈ ಆದೇಶಗಳನ್ನು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT