ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಚಿನ್ನದ ಮೇಲಿನ ಆಮದು ಸುಂಕ ಇಳಿಕೆ ಅಸಾಧ್ಯ: ನಿರ್ಮಲಾ ಸೀತಾರಾಮನ್

ಚಿನ್ನದ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿರುವ ಸಮಯದಲ್ಲಿ, ಆಮದು ಸುಂಕವನ್ನು ಕಡಿಮೆ ಮಾಡುವ ಎಲ್ಲ ಸಾಧ್ಯತೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ. 

ಅಹಮದಾಬಾದ್: ಚಿನ್ನದ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿರುವ ಸಮಯದಲ್ಲಿ, ಆಮದು ಸುಂಕವನ್ನು ಕಡಿಮೆ ಮಾಡುವ ಎಲ್ಲ ಸಾಧ್ಯತೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ತಳ್ಳಿಹಾಕಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸೀತಾರಾಮನ್, ಮೌಲ್ಯವರ್ಧನೆಗಾಗಿ ಚಿನ್ನ ಆಮದು ಮಾಡಿಕೊಳ್ಳಲಾಗುತ್ತಿದೆ. ರಫ್ತು ಆಭರಣ ತಯಾರಿಕೆಗೆ ಸೀಮಾ ಸುಂಕವಿಲ್ಲ. ಚಿನ್ನವು ಕಚ್ಚಾ ತೈಲ ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳಂತಹ ಉತ್ಪನ್ನವಲ್ಲ ಎಂದರು.

ನಾವು ಖರೀದಿಸುವ ಪ್ರತಿಯೊಂದು ಚಿನ್ನವನ್ನು ಆಮದು ಮಾಡಿಕೊಳ್ಳಲಾಗುತ್ತದೆ. ಏಕೆಂದರೆ ಅದು ಈ ದೇಶದಲ್ಲಿ ಲಭ್ಯವಿಲ್ಲ. ಅದಕ್ಕಾಗಿ ಖರ್ಚು ಮಾಡಿದ ವಿದೇಶಿ ವಿನಿಮಯದ ಪ್ರಮಾಣವನ್ನು ನೋಡಿ. ನಾವು ಅದಕ್ಕೆ ಸಹಾಯಧನ ನೀಡುವುದಲ್ಲ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT