ಸಂಗ್ರಹ ಚಿತ್ರ 
ವಾಣಿಜ್ಯ

ವಾಯುಯಾನ ಕ್ಷೇತ್ರಕ್ಕೆ ಹೈ.ಕರ್ನಾಟಕ ಮುಕ್ತ: ಕಲಬುರ್ಗಿ ವಿಮಾನ ನಿಲ್ದಾಣ ಅಭಿವೃದ್ದಿಗಾಗಿ ಎಎಐ ಜೊತೆ ರಾಜ್ಯ ಸರ್ಕಾರ ಒಪ್ಪಂದ

 ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿ, ತ್ತು ನಿರ್ವಹಣೆಗಾಗಿ ಕರ್ನಾಟಕ ಸರ್ಕಾರ ಶನಿವಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಡನೆ  ಬೆಂಗಳೂರು ಮತ್ತು ಇಡೀ ದೇಶಕ್ಕೆ ವಾಯುಯಾನ ಸಂಪರ್ಕದ ದೃಷ್ಟಿಯಿಂದ ಹೈದರಾಬಾದ್-ಕರ್ನಾಟಕ ಪ್ರದೇಶದ ಬಾಗಿಲು ತೆರೆದಂತಾಗಿದೆ.

ಬೆಂಗಳೂರು: ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿ, ತ್ತು ನಿರ್ವಹಣೆಗಾಗಿ ಕರ್ನಾಟಕ ಸರ್ಕಾರ ಶನಿವಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಡನೆ  ಬೆಂಗಳೂರು ಮತ್ತು ಇಡೀ ದೇಶಕ್ಕೆ ವಾಯುಯಾನ ಸಂಪರ್ಕದ ದೃಷ್ಟಿಯಿಂದ ಹೈದರಾಬಾದ್-ಕರ್ನಾಟಕ ಪ್ರದೇಶದ ಬಾಗಿಲು ತೆರೆದಂತಾಗಿದೆ.

ಹಿಂದುಳಿದ  ಹೈದರಾಬಾದ್-ಕರ್ನಾಟಕ ಪ್ರದೇಶದ ಒಟ್ಟಾರೆ ಆರ್ಥಿಕ ಅಭಿವೃದ್ಧಿಗೆ ಇದರಿಂದ ಅನುಕೂಲವಾಗಲಿದೆ. ಹೈದರಾಬಾದ್-ಕರ್ನಾಟಕ ಭಾಗಕ್ಕೆ ಸಂವಿಧಾನದ 371 ಜೆ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ.

ಕರ್ನಾಟಕ ಸರ್ಕಾರದ ಪರವಾಗಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಎಸ್‌ಐಐಡಿಸಿ) ಮತ್ತು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಡುವೆ ಕಲಬುರ್ಗಿ ಸಂಸದ  ಉಮೇಶ್ ಜಾಧವ್, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್ ಉಪಸ್ಥಿತಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಮಾರ್ಚ್ 27, 2007 ರಂದು ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ತನ್ನ ಆಡಳಿತಾತ್ಮಕ ಅನುಮೋದನೆಯನ್ನು ನೀಡಿತ್ತು. ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ನಿರ್ಮಾಣಕ್ಕಾಗಿ ಈವರೆಗೆ ಒಟ್ಟು 230 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 742 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸುಮಾರು 22 ಕೋಟಿ ರೂ. ಮತ್ತು ನಿರ್ಮಾಣ ಕಾರ್ಯಗಳಿಗಾಗಿ 208 ಕೋಟಿ ರೂ. ಇದರಲ್ಲಿ ಸೇರಿದೆ.

ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳನ್ನು ಲೋಕೋಪಯೋಗಿ ಇಲಾಖೆಯು ತಾಂತ್ರಿಕ ಮಾರ್ಗದರ್ಶನದೊಂದಿಗೆM / s RITESIndia Pvt Ltd. ನಡೆದಲಿದೆ.ಈ ಕಾಮಗಾರಿಗಳು  ಪೂರ್ಣಗೊಳ್ಳುವ ಹಂತದಲ್ಲಿದ್ದು, ಆಗಸ್ಟ್ 2018 ರಲ್ಲಿ ವಿಮಾನಗಳ ಮೊದಲ ಟ್ರಯಲ್ ರನ್ ನಡೆಸಲಾಗಿದೆ. ಪ್ರಾದೇಶಿಕ ಸಂಪರ್ಕ ಯೋಜನೆ-ಉಡಾನ್ (ಆರ್‌ಸಿಎಸ್ -300) ಅಡಿಯಲ್ಲಿ ಮೂರನೇ ಸುತ್ತಿನ ಬಿಡ್ಡಿಂಗ್ / ಆಯ್ಕೆಯ ಸಮಯದಲ್ಲಿ ಕಲಬುರ್ಗಿ ವಿಮಾನ ನಿಲ್ದಾಣವು ಕಾರ್ಯಾಚರಣೆಗೆ ಅರ್ಹತೆ ಪಡೆದಿದೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT