ರವಿಕುಮಾರ್ 
ವಾಣಿಜ್ಯ

10 ಸಾರ್ವಜನಿಕ ಬ್ಯಾಂಕುಗಳ ವಿಲೀನದಿಂದ ಹೆಚ್ಚಿನ ಉದ್ಯೋಗವಕಾಶಗಳು ಸೃಷ್ಟಿ- ಹಣಕಾಸು ಕಾರ್ಯದರ್ಶಿ

10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು  ವಿಲೀನಗೊಳಿಸುವುದರಿಂದ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತವೆ ಮತ್ತು ಕೆಲವು ಕಾರ್ಮಿಕ ಸಂಘಗಳು ಪ್ರತಿಪಾದಿಸುವಂತೆ ಯಾವುದೇ ಆರ್ಥಿಕ ಹಿಂಜರಿತ ಆಗುವುದಿಲ್ಲ ಎಂದು ಹಣಕಾಸು ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ನವ ದೆಹಲಿ: 10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು  ವಿಲೀನಗೊಳಿಸುವುದರಿಂದ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುತ್ತವೆ ಮತ್ತು ಕೆಲವು ಕಾರ್ಮಿಕ ಸಂಘಗಳು ಪ್ರತಿಪಾದಿಸುವಂತೆ ಯಾವುದೇ ಆರ್ಥಿಕ ಹಿಂಜರಿತ ಆಗುವುದಿಲ್ಲ ಎಂದು ಹಣಕಾಸು ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.

ಬ್ಯಾಂಕುಗಳ ಗಾತ್ರ ಹಿಗ್ಗಿದ್ದಾಗ ವ್ಯವಹಾರ ಕೂಡಾ ಬೆಳವಣಿಯಾಗುತ್ತದೆ. ಪರಿಣಾಮವಾಗಿ ಹೆಚ್ಚಿನ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ. ಆದ್ದರಿಂದ ಆರ್ಥಿಕ ಹಿಂಜರಿತದ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಅವರು ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜೊತೆಗೆ ಹಲವು ಬ್ಯಾಂಕುಗಳ ವಿಲೀನ ಹಾಗೂ ಬ್ಯಾಂಕ್ ಆಫ್ ಬರೋಡಾ ಜೊತೆಗೆ ಮೂರು ಬ್ಯಾಂಕುಗಳ ವಿಲೀನದಿಂದಾಗಿ ಯಾವುದೇ ಹಿಂಜರಿತವಾಗಿಲ್ಲ. ಇದು ಬ್ಯಾಂಕುಗಳ ನೌಕರಿಗೆ ಉತ್ತಮ ಸೌಕರ್ಯ ಕಲ್ಪಿಸುವುದಕ್ಕೆ ಸಂಬಂಧಿತ ವಿಚಾರವಾಗಿದೆ ಎಂದಿದ್ದಾರೆ.

ಮುಂದಿನ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆ ಐದು ಟ್ರಿಲಿಯನ್ ನಷ್ಟಾಗಲು ಬ್ಯಾಂಕ್ ಗಳ ವಿಲೀನ ಸೂಕ್ತವಾಗಿದೆ. 2017ರಲ್ಲಿ 27 ಸಾರ್ವಜನಿಕ ಬ್ಯಾಂಕುಗಳಿದ್ದವು ಈಗ ಕೇವಲ 12 ಬ್ಯಾಂಕುಗಳಾಗಿವೆ ಎಂದರು.

ಭವಿಷ್ಯದಲ್ಲಿ ಮೂರು ವಿಧದ  ಸಾರ್ವಜಿಕ ಬ್ಯಾಂಕುಗಳು ಇರಲಿದ್ದು, ಬ್ಯಾಂಕುಗಳ ವಿಲೀನದಿಂದ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿನ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT