ಸಂಗ್ರಹ ಚಿತ್ರ 
ವಾಣಿಜ್ಯ

ರೂ.150 ದಾಟಿದ ಈರುಳ್ಳಿ ದರ: ಬೆಂಗಳೂರು ಸೇರಿ ರಾಜ್ಯದಾದ್ಯಂತ ದರ ಏರಿಕೆ

ರಾಜ್ಯದ ವಿವಿಧೆಡೆ ಈರುಳ್ಳಿ ಬೆಲೆಯು ದಿನಕ್ಕೊಂದು ದಾಖಲೆ ಬರೆಯುತ್ತಾ ಸಾಗಿದೆ. ಬುಧವಾರ ಬೆಳಗಾವಿಯ ಎಪಿಎಂಸಿಯಲ್ಲಿ ಉತೃಷ್ಟ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್'ಗೆ ರೂ.13 ಸಾವಿರದಿಂದ ರೂ.15 ಸಾವಿರದವರೆಗೆ ಏರಿಕೆ ಯಾಗಿದೆ. 

ಬೆಂಗಳೂರು: ರಾಜ್ಯದ ವಿವಿಧೆಡೆ ಈರುಳ್ಳಿ ಬೆಲೆಯು ದಿನಕ್ಕೊಂದು ದಾಖಲೆ ಬರೆಯುತ್ತಾ ಸಾಗಿದೆ. ಬುಧವಾರ ಬೆಳಗಾವಿಯ ಎಪಿಎಂಸಿಯಲ್ಲಿ ಉತೃಷ್ಟ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕ್ವಿಂಟಲ್'ಗೆ ರೂ.13 ಸಾವಿರದಿಂದ ರೂ.15 ಸಾವಿರದವರೆಗೆ ಏರಿಕೆ ಯಾಗಿದೆ. 

ಪರಿಣಾಮ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಈರುಳ್ಳಿಯನ್ನು ರೂ.170 ರಿಂದ 180 ವರೆಗೆ ಮಾರಾಟ ಮಾಡಲಾಗುತ್ತಿದೆ. ಇನ್ನು ಬೆಂಗಳೂರು ಸಗಟು ಮಾರುಕಟ್ಟೆಯಲ್ಲಿ ಉತೃಷ್ಟ ಗುಣಮಟ್ಟದ ಈರುಳ್ಳಿ ದರ ಕೆಜಿಗೆ ರೂ.140 ತಲುಪಿದೆ. ಈರುಳ್ಳಿ ದರ ಏರಿಕೆಯಿಂದಾಗಿ ಜನಸಾಮಾನ್ಯರ ಜೊತೆಗೆ ಹೋಟೆಲ್ ಉದ್ಯಮವೂ ನಲುಗಿದೆ. 

ಈ ನಡುವೆ ಕೇಂದ್ರ ಸರ್ಕಾರದ ಭರವಸೆಯಂತೆ ವಿದೇಶದಿಂದ ಆಮದಾದರೆ, ದರ ಇಳಿಯಬಹುದು. ಇಲ್ಲವಾದರೆ ಏರುತ್ತಲೇ ಹೋಗುವ ಸಾಧ್ಯತೆ ಇದೆ. ಹೀಗೇ ಮುಂದುವರಿದಲ್ಲಿ ಡಿಸೆಂಬರ್ ಅಂತ್ಯದ ವೇಳೆಗೆ ತಿಂಡಿ-ತಿನಿಸಿನ ದರ ಹೆಚ್ಚಳ ಅನಿವಾರ್ಯವಾಗಲಿದೆ ಎಂದು ರಾಜ್ಯ ಪ್ರಾದೇಶಿಕ ಹೋಟೆಲ್, ಉಪಾಹಾರ ಮಂದಿರಗಳ ಸಂಘದ ಅಧ್ಯಕ್ಷ ಬಿ.ಚಂದ್ರಶೇಖರ್ ಹೆಬ್ಬಾರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT