ಭಾರತ ತನ್ನದೇ ಆದ ಇಂಧನ ಪರಿವರ್ತನೆ ಹೊಂದಲಿದೆ: ಧರ್ಮೇಂದ್ರ ಪ್ರಧಾನ್ 
ವಾಣಿಜ್ಯ

ಭಾರತ ತನ್ನದೇ ಆದ ಇಂಧನ ಪರಿವರ್ತನೆ ಹೊಂದಲಿದೆ: ಧರ್ಮೇಂದ್ರ ಪ್ರಧಾನ್

ವೈಜ್ಞಾನಿಕ ತಂತ್ರಜ್ಞಾನದ ಅಭಿವೃದ್ಧಿ ಮತ್ತು ನಾವಿನ್ಯತಾ ಮಾದರಿಗಳಿಂದಾಗಿ ಭಾರತ ತನ್ನದೇ ಆದ ಇಂಧನ ಪರಿವರ್ತನೆ ಹೊಂದಲಿದೆ ಎಂದು ಪೆಟ್ರೋಲಿಂ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಹೇಳಿದ್ದಾರೆ. 

ಮುಂಬೈ: ವೈಜ್ಞಾನಿಕ ತಂತ್ರಜ್ಞಾನದ ಅಭಿವೃದ್ಧಿ ಮತ್ತು ನಾವಿನ್ಯತಾ ಮಾದರಿಗಳಿಂದಾಗಿ ಭಾರತ ತನ್ನದೇ ಆದ ಇಂಧನ ಪರಿವರ್ತನೆ ಹೊಂದಲಿದೆ ಎಂದು ಪೆಟ್ರೋಲಿಂ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಹೇಳಿದ್ದಾರೆ. 

ಮುಂಬೈನ ಭಾರತ ಆರ್ಥಿಕ ಸಮಾವೇಶದಲ್ಲಿ ಮಾತನಾಡಿದ ಅವರು, ತೈಲ ಮತ್ತು ಅನಿಲ ವಲಯದ ದೃಷ್ಟಿಕೋನ ಬದಲಾಗಿದೆ. ಆರಂಭದಲ್ಲಿ ಗರಿಷ್ಠ ಆದಾಯ, ಮೂಲ ಮಂತ್ರವಾಗಿತ್ತು. ಇದೀಗ ಗರಿಷ್ಠ ಉತ್ಪಾದನೆಯ ಗುರಿ ಹೊಂದಲಾಗಿದೆ. ತೈಲ ಮತ್ತು ಅನಿಲ ಉತ್ಪಾದನೆ ಹೆಚ್ಚಿಸಿ, ಆಮದು ತಗ್ಗಿಸಲು ಕಳೆದ ಐದು ವರ್ಷಗಳಲ್ಲಿ ಅನೇಕ ಉಪಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ವಿವರಿಸಿದರು.

ಭಾರತದಲ್ಲಿ 600 ಮೆಟ್ರಿಕ್ ಟನ್ ಜೈವಿಕ ಗೊಬ್ಬರ ಲಭ್ಯವಿದೆ. ಜೊತೆಗೆ ತೈಲ, ಅನಿಲ ಹೊರತುಪಡಿಸಿ ಪರ್ಯಾಯ ಇಂಧನ ಮಾರ್ಗಗಳತ್ತ ಭಾರತ ಮನಸ್ಸು ಮಾಡಿದೆ. ಕಲ್ಲಿದ್ದಲು ಮೀಸಲಿನಿಂದ ಹೆಚ್ಚಿನ ಅನಿಲ ಉತ್ಪಾದಿಸಬಹುದಾಗಿದೆ ಎಂದು ಅವರು, ಶುದ್ಧ ಇಂಧನ ಮತ್ತು ಉತ್ತಮ ಭವಿಷ್ಯಕ್ಕಾಗಿನ ಸಮಾವೇಶದಲ್ಲಿ ಪ್ರತಿಪಾದಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT