ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಮುಂದಿನ 5 ವರ್ಷಗಳಲ್ಲಿ 102 ಲಕ್ಷ ಕೋಟಿ ಮೂಲಸೌಕರ್ಯ ಯೋಜನೆ ಜಾರಿ: ನಿರ್ಮಲಾ ಸೀತಾರಾಮನ್

ಮೂಲಸೌಕರ್ಯ ಕ್ಷೇತ್ರದಲ್ಲಿ ಸರಕಾರದ ಖರ್ಚು ಹೆಚ್ಚಳದ ಭಾಗವಾಗಿ ಮುಂದಿನ ಐದು ವರ್ಷಗಳಲ್ಲಿ ಜಾರಿಗೆ ಬರುವಂತೆ  102 ಲಕ್ಷ ಕೋಟಿ ರೂ.ಗಳ ಮೂಲಸೌಕರ್ಯ ಯೋಜನೆಗಳನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಗಳವಾರ ಘೋಷಿಸಿದ್ದಾರೆ.

ನವದೆಹಲಿ: ಮೂಲಸೌಕರ್ಯ ಕ್ಷೇತ್ರದಲ್ಲಿ ಸರಕಾರದ ಖರ್ಚು ಹೆಚ್ಚಳದ ಭಾಗವಾಗಿ ಮುಂದಿನ ಐದು ವರ್ಷಗಳಲ್ಲಿ ಜಾರಿಗೆ ಬರುವಂತೆ  102 ಲಕ್ಷ ಕೋಟಿ ರೂ.ಗಳ ಮೂಲಸೌಕರ್ಯ ಯೋಜನೆಗಳನ್ನು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಮಂಗಳವಾರ ಘೋಷಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯಲ್ಲಿ 100 ಲಕ್ಷ ಕೋಟಿ ರೂ. ಮೂಲಸೌಕರ್ಯಕ್ಕಾಗಿ ಹೂಡಿಕೆ ಮಾಡುವ ಬಗ್ಗೆ ಮಾತನಾಡಿದ್ದಾರೆ.ತರುವಾಯ, ನಾಲ್ಕು ತಿಂಗಳ ಅಲ್ಪಾವಧಿಯಲ್ಲಿ 70 ಮಧ್ಯಸ್ಥಗಾರರ ಸಮಾಲೋಚನೆ ನಡೆದಿದ್ದು 02 ಲಕ್ಷ ಕೋಟಿ ರೂ. ಯೋಜನೆಗಳನ್ನು ಗುರುತಿಸಲಾಗಿದೆ ಎಂದರು.

ಇಷ್ಟೇ ಅಲ್ಲದೆ ಇದಕ್ಕೆ ಇನ್ನೂ  3 ಲಕ್ಷ ಕೋಟಿ ರೂ. ಯೋಜನೆಗಳನ್ನು ಸೇರಿಸುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದರು.

ಈ ಯೋಜನೆಗಳು ಕಳೆದ ಆರು ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯಗಳು ಖರ್ಚು ಮಾಡಿದ 51 ಲಕ್ಷ ಕೋಟಿ ರೂ.ಗಳಿಗಿಂತ ಹೆಚ್ಚಿನದಾಗಿದೆ, ಹೊಸ ಯೋಜನೆಗಳು ಸೇರಿಸುವುದರಿಂದ ಕೇಂದ್ರ ಮತ್ತು ರಾಜ್ಯಗಳು ತಲಾ 39 ಶೇಕಡಾ ಯೋಜನೆಗಳನ್ನು ಒಳಗೊಂಡಿರುತ್ತವೆ ಮತ್ತು ಉಳಿದವು ಶೇಕಡಾ 22 ರಷ್ಟು ಖಾಸಗಿ ವಲಯಕ್ಕೆ ಸೇರಿರಲಿದೆ ಎಂದರು ಸಚಿವೆ ವಿವರಿಸಿದ್ದಾರೆ.

ವಿದ್ಯುತ್, ರೈಲ್ವೆ, ನಗರ ನೀರಾವರಿ, ಮೊಬಿಲಿಟಿ , ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಯೋಜನೆಗಳನ್ನು ಗುರುತಿಸಲಾಗಿದೆ.ಸುಮಾರು 25 ಲಕ್ಷ ಕೋಟಿ ಇಂಧನ ಯೋಜನೆಗಳನ್ನು ಪೂರೈಸಲಾಗುತ್ತಿದೆ. ರಸ್ತೆಗಳಲ್ಲಿ ಇನ್ನೂ 20 ಲಕ್ಷ ಕೋಟಿ ರೂ. ಮತ್ತು ಸುಮಾರು 14 ಲಕ್ಷ ಕೋಟಿ ರೈಲ್ವೆ ಯೋಜನೆಗಳು ಸಾಲಾಗಿ ನಿಂತಿವೆ. ನವೀಕರಿಸಬಹುದಾದ ವಲಯ, ರೈಲ್ವೆ, ನಗರಾಭಿವೃದ್ಧಿ, ನೀರಾವರಿ, ಮೊಬಿಲಿಟಿ, ಶಿಕ್ಷಣ, ಆರೋಗ್ಯ, ನೀರು ಮತ್ತು ಡಿಜಿಟಲ್ ಸೇರಿದಂತೆ ಹಲವು ವಲಯಗಳಲ್ಲಿ ಹೊಸ ಯೋಜನೆಗಳು ಬರಲಿದೆ.ಈ ಕ್ಷೇತ್ರಗಳು ರಾಷ್ಟ್ರೀಯ ಮೂಲಸೌಕರ್ಯ ದ ಕ್ಷೇತ್ರದಡಿ ಬರಲಿದ್ದು ಮಂಗಳವಾರ ಘೋಷಣೆಯಾದ  ಹೂಡಿಕೆಯ ಬಹುಭಾಗವನ್ನು ರೂಪಿಸಲಿವೆ ಎಂದು ಸೀತಾರಾಮನ್ ಹೇಳಿದರು.

2025 ರ ವೇಳೆಗೆ ಭಾರತವನ್ನು 5 ಲಕ್ಷ ಕೋಟಿ ಡಾಲರ್ ಆರ್ಥಿಕತೆಯನ್ನಾಗಿ ಮಾಡಲು 102 ಲಕ್ಷ ಕೋಟಿ ರೂ.ಗಳ ರಾಷ್ಟ್ರೀಯ ಮೂಲಸೌಕರ್ಯ ಯೋಜನೆಗಳು ಸಹಾಯ ಮಾಡುತ್ತವೆ ಎಂದು ಹಣಕಾಸು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT