'ಓಲಾ'ದಲ್ಲಿ ಸಚಿನ್ ಬನ್ಸಾಲ್ 650 ಕೋಟಿ ರೂ. ಹೂಡಿಕೆ 
ವಾಣಿಜ್ಯ

'ಓಲಾ'ದಲ್ಲಿ ಸಚಿನ್ ಬನ್ಸಾಲ್ 650 ಕೋಟಿ ರೂ. ಹೂಡಿಕೆ

ಇಂಟರ್ ನೆಟ್‍ ವಲಯದ ಮುಂಚೂಣಿ ಉದ್ಯಮಿ ಹಾಗೂ ಫ್ಲಿಪ್‍ಕಾರ್ಟ್ ನ ಸಹ ಸ್ಥಾಪಕ ಸಚಿನ್ ಬನ್ಸಾಲ್ ಅವರು 650 ಕೋಟಿ ರೂ. ಹೂಡಿಕೆ ಮಾಡುತ್ತಿರುವುದಾಗಿ ವಿಶ್ವದ ಅತಿದೊಡ್ಡ ಬಾಡಿಗೆ ಕಾರು ಕಂಪೆನಿಗಳಲ್ಲಿ ಒಂದಾದ

ಕೊಲ್ಕತ್ತ: ಇಂಟರ್ ನೆಟ್‍ ವಲಯದ ಮುಂಚೂಣಿ ಉದ್ಯಮಿ ಹಾಗೂ ಫ್ಲಿಪ್‍ಕಾರ್ಟ್ ನ ಸಹ ಸ್ಥಾಪಕ ಸಚಿನ್ ಬನ್ಸಾಲ್ ಅವರು 650 ಕೋಟಿ ರೂ. ಹೂಡಿಕೆ ಮಾಡುತ್ತಿರುವುದಾಗಿ ವಿಶ್ವದ ಅತಿದೊಡ್ಡ ಬಾಡಿಗೆ ಕಾರು ಕಂಪೆನಿಗಳಲ್ಲಿ ಒಂದಾದ 'ಓಲಾ' ದೃಢಪಡಿಸಿದೆ.
ಈ ಹೂಡಿಕೆಯು ಓಲಾದ ಜಾಗತಿಕ ನಿಧಿ ಸಂಗ್ರಹದ ಭಾಗವಾಗಿದ್ದು, ಇದು ಹೂಡಿಕೆದಾರರಾಗಿ ಸಚಿನ್ ಅವರ ವೈಯಕ್ತಿಕ ಸಾಮರ್ಥ್ಯವನ್ನು ತೋರಿದೆ ಎಂದು ಓಲಾ ತಿಳಿಸಿದೆ. 
ಹೂಡಿಕೆಯ ಕುರಿತು ಮಾತನಾಡಿದ ಬನ್ಸಾಲ್ ಅವರು,  "ಓಲಾ, ಭಾರತದ ಅತ್ಯಂತ ಭರವಸೆಯ ಗ್ರಾಹಕರ ಉದ್ಯಮಗಳಲ್ಲಿ ಒಂದಾಗಿದೆ. ಪ್ರಯಾಣಿಕ ಸಾರಿಗೆ ವ್ಯವಸ್ಥೆಯಲ್ಲಿ ಆಳವಾದ ಪ್ರಭಾವವನ್ನು ಮತ್ತು ಶಾಶ್ವತ ಮೌಲ್ಯವನ್ನು ಸೃಷ್ಟಿಸುತ್ತಿದೆ. ಇದಲ್ಲದೆ, ಪ್ರಯಾಣಿಕ ಸಾರಿಗೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿರುವ ಓಲಾ, ತನ್ನ ವೇದಿಕೆ ಮೂಲಕ ಮೂಲಕ ಶತಕೋಟಿ ಭಾರತೀಯರ ವಿವಿಧ ಅಗತ್ಯಗಳನ್ನು ಪೂರೈಸುತ್ತಿದ್ದು, ವಿಶ್ವಾಸಾರ್ಹ ಕಂಪೆನಿಯಾಗಿ ಮನೆಮಾತಾಗಿದೆ' ಎಂದು ಹೇಳಿದ್ದಾರೆ. 
ಕೇವಲ 8 ವರ್ಷಗಳಲ್ಲಿ ಕಂಪೆನಿಯನ್ನು ದೊಡ್ಡ ಮಟ್ಟಕ್ಕೆ ಕೊಂಡೊಯ್ದ ಆಡಳಿತ ಮಂಡಳಿಯ ಶ್ರಮ ಶ್ಲಾಘನೀಯ. ಓಲಾ ಪ್ರಗತಿಯ ಪಯಣದಲ್ಲಿ ಭಾಗವಾಗಿರುವುದಕ್ಕೆ ವೈಯಕ್ತಿಕವಾಗಿ ಖುಷಿಯಾಗುತ್ತಿದೆ. ಕಂಪೆನಿಯ ಯಶಸ್ಸಿಗೆ ಸಾಧ್ಯವಾದ ಕೊಡುಗೆ ನೀಡಲು ಉತ್ಸುಕನಾಗಿದ್ದೇನೆ ಎಂದು ಬನ್ಸಾಲ್‍ ಹೇಳಿದ್ದಾರೆ. 
ಓಲಾ ಸಹ-ಸಂಸ್ಥಾಪಕ ಮತ್ತು ಸಿಇಒ ಭಾವಿಶ್ ಅಗರ್ ವಾಲ್‍ ಮಾತನಾಡಿ, ಓಲಾದಲ್ಲಿ ಸಚಿನ್‍ ಅವರು ಹೂಡಿಕೆದಾರರಾಗಿರುವುದಕ್ಕೆ ಕಂಪೆನಿ ಹೆಮ್ಮೆ ಪಡುತ್ತಿದೆ. ಸಚಿನ್ ಅವರ ಉದ್ಯಮಶೀಲತೆ ಭಾರತದ ಅತ್ಯಂತ ಗೌರವಾನ್ವಿತ ವ್ಯವಹಾರಗಳನ್ನು ನಿರ್ಮಿಸುವಲ್ಲಿ ಅವರ ಅನುಭವಕ್ಕೆ ಸರಿಸಾಟಿಯಿಲ್ಲ. ಒಂದು ಶತಕೋಟಿ ಜನರಿಗೆ ಸೇವೆ ಸಲ್ಲಿಸಲು ಅವರ ಹೂಡಿಕೆಯು ಕಂಪೆನಿಗೆ ದೊಡ್ಡ ಪ್ರೋತ್ಸಾಹವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT