ಅರುಣ್ ಜೇಟ್ಲಿ 
ವಾಣಿಜ್ಯ

ಫೆಬ್ರವರಿ 1ರಂದು ಅರುಣ್ ಜೇಟ್ಲಿಯವರೇ ಬಜೆಟ್ ಮಂಡಿಸಲಿದ್ದಾರೆ; ಮೂಲಗಳು

ಅನಾರೋಗ್ಯದಿಂದ ಫೆಬ್ರವರಿ 1ರಂದು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಮಧ್ಯಂತರ ಬಜೆಟ್ ಗೆ ...

ನವದೆಹಲಿ: ಅನಾರೋಗ್ಯದಿಂದ ಫೆಬ್ರವರಿ 1ರಂದು ಕೇಂದ್ರ ಸರ್ಕಾರ ಮಂಡಿಸುತ್ತಿರುವ ಮಧ್ಯಂತರ ಬಜೆಟ್ ಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ಲಭ್ಯರಾಗುವುದಿಲ್ಲ ಎಂಬ ವದಂತಿಗಳನ್ನು ಹಣಕಾಸು ಸಚಿವಾಲಯ ತಳ್ಳಿಹಾಕಿದೆ. ಎನ್ ಡಿಎ ಸರ್ಕಾರದ ಕೊನೆಯ ಬಜೆಟ್ ನ್ನು ಜೇಟ್ಲಿಯವರೇ ಫೆಬ್ರವರಿ 1ರಂದು ಮಂಡಿಸಲಿದ್ದಾರೆ ಎಂದು ಮೂಲಗಳು ಹೇಳುತ್ತಿವೆ.

ಕಳೆದ ವರ್ಷ ನಡೆದ ಮೂತ್ರಪಿಂಡ ಕಸಿಯ ವೈದ್ಯಕೀಯ ತಪಾಸಣೆಗೆಂದು ಕಳೆದ ವಾರ ಅರುಣ್ ಜೇಟ್ಲಿಯವರು ಅಮೆರಿಕಾಕ್ಕೆ ಹೋಗಿದ್ದರು. ಅವರು ನಾಡಿದ್ದು ಫೆಬ್ರವರಿ ಬಜೆಟ್ ಮಂಡನೆಗೆ ವಾಪಸ್ಸಾಗಲಿದ್ದಾರೆ ಎಂದು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಇದು ಮಧ್ಯಂತರ ಬಜೆಟ್ ಎಂದು ಹೇಳುತ್ತಿದ್ದರೂ ಕೂಡ ದೀರ್ಘಾವಧಿಯ ಸಂಪೂರ್ಣ ಬಜೆಟ್ ಭಾಷಣವನ್ನೇ ಸಚಿವ ಜೇಟ್ಲಿಯವರು ಮಂಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ ನಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದ್ದು ಅಲ್ಲಿಂದ ಮೂರು ತಿಂಗಳವರೆಗೆ ಜೇಟ್ಲಿಯವರು ನಾಡಿದ್ದು ಮಂಡಿಸಲಿರುವ ಬಜೆಟ್ ಅನ್ವಯವಾಗುತ್ತದೆ. ನಂತರ ನೂತನ ಸರ್ಕಾರ ಮಂಡಿಸುವ ಬಜೆಟ್ ಪರಿಗಣನೆಗೆ ಬರುತ್ತದೆ.

ಮಧ್ಯಂತರ ಬಜೆಟ್ ನಲ್ಲಿ ಏನು ಮಂಡಿಸಬಹುದು, ಏನು ಮಂಡಿಸಬಾರದು ಎಂಬ ಸಂಪ್ರದಾಯಗಳಿರುತ್ತವೆ. ಸಂಪ್ರದಾಯಗಳನ್ನು ಮೀರಿ ಹೋಗಲು ಸಾಧ್ಯವಿಲ್ಲ. ದೇಶದ ಆರ್ಥಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಬಜೆಟ್ ನಲ್ಲಿ ಏನೇನು ಇರಬೇಕೆಂದು ನಿರ್ಧರಿಸಬೇಕಾಗುತ್ತದೆ ಎಂದು ಕಳೆದ ಗುರುವಾರ ಅರುಣ್ ಜೇಟ್ಲಿಯವರು ವಿಡಿಯೊ ಕಾನ್ಫರೆನ್ಸ್ ನಲ್ಲಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT