ವಾಣಿಜ್ಯ

ಕೇಂದ್ರ ಬಜೆಟ್ 2019: ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್

ತೀವ್ರ ಕುತೂಹಲ ಕೆರಳಿಸಿರುವ ಎನ್ ಡಿಎ 2.0 ಸರ್ಕಾರದ ಮೊದಲ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ರ ಮೇಲೆ ನಿರೀಕ್ಷೆಗಳು ಗರಿಗೆದರಿವೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಎನ್ ಡಿಎ 2.0 ಸರ್ಕಾರದ ಮೊದಲ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ರ ಮೇಲೆ ನಿರೀಕ್ಷೆಗಳು ಗರಿಗೆದರಿವೆ.
ಸತತ ಎರಡನೇ ಅವಧಿಗೂ ಭರ್ಜರಿ ಬಹುಮತದೊಂದಿಗೆ ಸತತ ಎರಡನೇ ಬಾರಿ ಅಧಿಕಾರಕ್ಕೇರಿರುವ ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ 2.0 ಸರ್ಕಾರ ನಾಳೆ ಅಂದರೆ ಜುಲೈ 5ಕ್ಕೆ ತನ್ನ ಮೊದಲ ಬಜೆಟ್ ಮಂಡಿಸಲಿದೆ. ಇದೇ ಮೊದಲ ಬಾರಿಗೆ ವಿತ್ತ ಇಲಾಖೆಯ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ಅವರು, ನಾಳೆ ಸಂಸತ್ ನಲ್ಲಿ ಬಜೆಟ್ ಮಂಡಿಸುತ್ತಿದ್ದು, ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದ, ಬಜೆಟ್​ ಮಂಡಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.
ಈ ಹಿಂದೆ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರೂ ಕೂಡ ಬಜೆಟ್ ಮಂಡಿಸಿದ್ದರಾದರೂ, ಇಂದಿರಾ ಗಾಂಧಿ ಅವರ ಬಳಿಕ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾದ ಗೌರವಕ್ಕೆ ಪಾತ್ರರಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೂ ಇದು ಮೊದಲ ಬಜೆಟ್ ಆಗಿದೆ.
ಇನ್ನು ಚುನಾವಣೆಗೂ ಮುನ್ನ ಕಳೆದ ಫೆಬ್ರವರಿ 1ರಂದು ಅಂದಿನ ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದರು. ಅದರಲ್ಲಿ ಘೋಷಿಸಲಾಗಿದ್ದ ಬಹುತೇಕ ಅಂಶಗಳನ್ನ ಹಾಲಿ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಂದುವರಿಸುವ ನಿರೀಕ್ಷೆ ಇದೆ. 
ಇನ್ನು ಬಜೆಟ್ ಮುನ್ನಾದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಧಾನಿ ರೈತ ಯೋಜನೆಯ ವ್ಯಾಪ್ತಿಯನ್ನು ಎಲ್ಲಾ ರೈತರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಇದನ್ನೂ ಒಳಗೊಂಡಂತೆ ಒಂದಷ್ಟು ಹೊಸ ಯೋಜನೆಗಳನ್ನು ನೂತನ ಹಣಕಾಸು ಸಚಿವರು ಘೋಷಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಮಧ್ಯಸ್ಥಿಕೆ ಯಾರೇ ವಹಿಸಲಿ ಅದರಿಂದ ಭಾರತಕ್ಕೇ ಲಾಭ! US ಜೊತೆ ಅಂಥಹ ಸಂಬಂಧ ಬೆಳಸಲು ಪಾಕ್ ಗೆ ಮಾತ್ರ ಸಾಧ್ಯ, ಬೇರಾರಿಗೂ ಅಲ್ಲ: ತರೂರ್ ವ್ಯಂಗ್ಯ

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

SCROLL FOR NEXT