ವಾಣಿಜ್ಯ

ಕೇಂದ್ರ ಬಜೆಟ್ 2019: ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್

ತೀವ್ರ ಕುತೂಹಲ ಕೆರಳಿಸಿರುವ ಎನ್ ಡಿಎ 2.0 ಸರ್ಕಾರದ ಮೊದಲ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ರ ಮೇಲೆ ನಿರೀಕ್ಷೆಗಳು ಗರಿಗೆದರಿವೆ.

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಎನ್ ಡಿಎ 2.0 ಸರ್ಕಾರದ ಮೊದಲ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಮೊದಲ ಬಜೆಟ್ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್ ರ ಮೇಲೆ ನಿರೀಕ್ಷೆಗಳು ಗರಿಗೆದರಿವೆ.
ಸತತ ಎರಡನೇ ಅವಧಿಗೂ ಭರ್ಜರಿ ಬಹುಮತದೊಂದಿಗೆ ಸತತ ಎರಡನೇ ಬಾರಿ ಅಧಿಕಾರಕ್ಕೇರಿರುವ ಪ್ರಧಾನಿ ಮೋದಿ ನೇತೃತ್ವದ ಎನ್​ಡಿಎ 2.0 ಸರ್ಕಾರ ನಾಳೆ ಅಂದರೆ ಜುಲೈ 5ಕ್ಕೆ ತನ್ನ ಮೊದಲ ಬಜೆಟ್ ಮಂಡಿಸಲಿದೆ. ಇದೇ ಮೊದಲ ಬಾರಿಗೆ ವಿತ್ತ ಇಲಾಖೆಯ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ಅವರು, ನಾಳೆ ಸಂಸತ್ ನಲ್ಲಿ ಬಜೆಟ್ ಮಂಡಿಸುತ್ತಿದ್ದು, ಭಾರತದ ಸಂಸತ್​ ಇತಿಹಾಸದಲ್ಲಿ ಹಣಕಾಸು ಖಾತೆ ಪಡೆದ, ಬಜೆಟ್​ ಮಂಡಿಸಿದ ಮೊದಲ ಮಹಿಳೆ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.
ಈ ಹಿಂದೆ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರೂ ಕೂಡ ಬಜೆಟ್ ಮಂಡಿಸಿದ್ದರಾದರೂ, ಇಂದಿರಾ ಗಾಂಧಿ ಅವರ ಬಳಿಕ ದೇಶದ ಮೊದಲ ಮಹಿಳಾ ಹಣಕಾಸು ಸಚಿವೆಯಾದ ಗೌರವಕ್ಕೆ ಪಾತ್ರರಾಗಿರುವ ನಿರ್ಮಲಾ ಸೀತಾರಾಮನ್ ಅವರಿಗೂ ಇದು ಮೊದಲ ಬಜೆಟ್ ಆಗಿದೆ.
ಇನ್ನು ಚುನಾವಣೆಗೂ ಮುನ್ನ ಕಳೆದ ಫೆಬ್ರವರಿ 1ರಂದು ಅಂದಿನ ವಿತ್ತ ಸಚಿವ ಪಿಯೂಶ್ ಗೋಯೆಲ್ ಅವರು ಮಧ್ಯಂತರ ಬಜೆಟ್ ಮಂಡನೆ ಮಾಡಿದ್ದರು. ಅದರಲ್ಲಿ ಘೋಷಿಸಲಾಗಿದ್ದ ಬಹುತೇಕ ಅಂಶಗಳನ್ನ ಹಾಲಿ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ಮುಂದುವರಿಸುವ ನಿರೀಕ್ಷೆ ಇದೆ. 
ಇನ್ನು ಬಜೆಟ್ ಮುನ್ನಾದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಧಾನಿ ರೈತ ಯೋಜನೆಯ ವ್ಯಾಪ್ತಿಯನ್ನು ಎಲ್ಲಾ ರೈತರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ. ಇದನ್ನೂ ಒಳಗೊಂಡಂತೆ ಒಂದಷ್ಟು ಹೊಸ ಯೋಜನೆಗಳನ್ನು ನೂತನ ಹಣಕಾಸು ಸಚಿವರು ಘೋಷಿಸುವ ಸಾಧ್ಯತೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT