ರಘುರಾಮ್ ರಾಜನ್ 
ವಾಣಿಜ್ಯ

ಸಾಗರೋತ್ತರ ಸಾಲ ಯೋಜನೆ ದೇಶಕ್ಕೆ ಅಪಾಯ: ರಘುರಾಮ್ ರಾಜನ್

ವಿದೇಶೀ ಕರೆನ್ಸಿ ರೂಪದಲ್ಲಿ ಸಾಲ ನೀಡುವ ಭಾರತದ ಯೋಜನೆಯ`ಿಂದ ಯಾವುದೇ ನೈಜ ಪ್ರಯೋಜನವಿಲ್ಲ. ಬದಲಿಗೆ ಇದು ಸಾಕಷ್ಟು ಅಪಾಯದಿಂದ ಕೂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.

ವಿದೇಶೀ ಕರೆನ್ಸಿ ರೂಪದಲ್ಲಿ ಸಾಲ ನೀಡುವ ಭಾರತದ ಯೋಜನೆಯ`ಿಂದ ಯಾವುದೇ ನೈಜ ಪ್ರಯೋಜನವಿಲ್ಲ. ಬದಲಿಗೆ ಇದು ಸಾಕಷ್ಟು ಅಪಾಯದಿಂದ ಕೂಡಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದ್ದಾರೆ.
ಜಾಗತಿಕ ಬಾಂಡ್ ಮಾರಾಟವು ಸ್ಥಳೀಯ ಮಾರುಕಟ್ಟೆಯಲ್ಲಿನ ದೇಶೀಯ ಸರ್ಕಾರಿ ಬಾಂಡ್‌ಗಳ ಪ್ರಮಾಣವನ್ನು ಕಡಿಮೆ ಮಾಡುವುದಿಲ್ಲ ಎಂದು ಅವರು ನುಡಿದರು.. "ಭಾರತ ಆರ್ಥಿಕತೆ ಬಿಸಿ ಏರಿದ್ದಾಗ ಖರೀದಿಸುವ ಹುಡಿಕೆದಾರರು ಆ ಬಿಸಿ ತಣ್ಣಗಾಗುತ್ತಿದ್ದಂತೆ ಹಿಂದೆ ಸರಿಯುತ್ತಾರೆ" ಇದನ್ನು ನಾವು ಚಿಂತಿಸಬೇಕಿದೆ ಎಂದು ಶನಿವಾರ ಟೈಮ್ಸ್ ಆಫ್ ಇಂಡಿಯಾದ ಗೆ ಬರೆದ ಲೇಖನವೊಂದರಲ್ಲಿ ರಾಜನ್ ಹೇಳಿದ್ದಾರೆ.
ಹಣಕಾಸು ಸಚಿವೆ ರ್ಮಲಾ ಸೀತಾರಾಮನ್ ಈ ತಿಂಗಳ ಆರಂಭದಲ್ಲಿ ಘೋಷಿಸಿದ ಯೋಜನೆಗೆ ವಿರೋಧ ಹೆಚ್ಚುತ್ತಿದ್ದು ಇದಕ್ಕೀಗ ರಾಜನ್ ಸಹ ಸೇರ್ಪಡೆಯಾಗಿದ್ದಾರೆ. ನಿಧಾನಗತಿಯ ಆರ್ಥಿಕತೆಯು ತೆರಿಗೆ ಆದಾಯವನ್ನು ಕುಂಠಿತಗೊಳಿಸುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ಹಣವನ್ನು ಸಂಗ್ರಹಿಸಲು ದೇಶದಲ್ಲಿ ಬಾಂಡ್ ಮಾರಾಟಕ್ಕೆ ಸಿದ್ದವಾಗುತ್ತಿದ್ದಾರೆ. ಇದಕ್ಕಾಗಿ ವಿಶೇಷ ಯೋಜನೆ ಬಗೆಗೆ ಚರ್ಚೆ ನಡೆದಿದೆ. ಈ ಹಣಕಾಸು ವರ್ಷದಲ್ಲಿ ದಾಖಲೆಯ 7.1 ಟ್ರಿಲಿಯನ್ ರೂಪಾಯಿಗಳನ್ನು (3 103 ಬಿಲಿಯನ್) ಎರವಲು ಪಡೆಯುವ ಅವರ ಯೋಜನೆಗಳ ಬಗ್ಗೆ ಹೂಡಿಕೆದಾರರು ಕಳವಳ ವ್ಯಕ್ತಪಡಿಸಿದ್ದಾರೆ."ವಿದೇಶಿ ವಿನಿಮಯ ಕೇಂದ್ರಗಳಲ್ಲಿ ವಹಿವಾಟು ನಡೆಸುವ ಭಾರತದ ಸಾಲದಲ್ಲಿನ ಚಂಚಲತೆಯು ನಮ್ಮ ದೇಶೀಯಮಾರುಕಟ್ಟೆಗೆ ಹರಡಬಹುದೇ? ವಿದೇಶಿ ಬಾಲವು ಸಾಕು ನಾಯಿಯನ್ನು ನಡೆಸುವುದೇ? ರಾಜನ್ ಹೇಳಿದರು. 
ಸರ್ಕಾರ ಪ್ರಸ್ಯುತ ನಗದು ಬಾಂಡ್ ಗಳ  ಹೂಡಿಕೆಯ ಮೇಲಿನ ಸುಧಾರಣಾ ಕ್ರಮಗಳನ್ನು ಹೆಚ್ಚಿಸಬೇಕು ಎಂದು ಅವರು ಹೇಳಿದರು.ಮೂರು ಮಾಜಿ ಕೇಂದ್ರ ಬ್ಯಾಂಕ್ ಅಧಿಕಾರಿಗಳು ಸಹ ಈ ಯೋಜನೆಯನ್ನು ವಿರೋಧಿಸಿದ್ದಾರೆ, ಭಾರತವು ಸಾಕಷ್ಟು ದೊಡ್ಡ ಬಜೆಟ್ ಕೊರತೆಯನ್ನು ಎದುರಿಸುತ್ತಿರುವುದರಿಂದ ಈ ಯೋಜನೆಗೆ ಇದು ಸೂಕ್ತ ಸಮಯವಲ್ಲ ಎಂದು ಹೇಳಿದ್ದಾರೆ. ಭಾರತವು ಹಣಕಾಸಿನ ವರ್ಷದ ಬಜೆಟ್ ಕೊರತೆಯ ಗುರಿಯನ್ನು ಒಟ್ಟು ದೇಶೀಯ ಉತ್ಪನ್ನದ 3.3% ಎಂದು ನಿಗದಿಪಡಿಸಿದೆ, ಇದು ಫೆಬ್ರವರಿ ಮಧ್ಯಂತರ ಯೋಜನೆಯಲ್ಲಿ ಅಂದಾಜು ಮಾಡಿದ 3.4% ಗಿಂತ ಕಡಿಮೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT