ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 
ವಾಣಿಜ್ಯ

ಆಗಸ್ಟ್ 1ರಿಂದ ಎಸ್ ಬಿಐ ಸ್ಥಿರ ಠೇವಣಿ ಮೇಲಿನ ಬಡ್ಡಿದರ ಇಳಿಕೆ

ದೇಶದ ಮುಂಚೂಣಿಯ ಸಾರ್ವಜನಿಕ ವಲಯ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ 1ರಿಂದ ...

ಮುಂಬೈ: ದೇಶದ ಮುಂಚೂಣಿಯ ಸಾರ್ವಜನಿಕ ವಲಯ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಆಗಸ್ಟ್ 1ರಿಂದ ಎಲ್ಲಾ ಚಿಲ್ಲರೆ ದೀರ್ಘಾವಧಿಯ ಠೇವಣಿಗಳು, ಅಲ್ಪಾವಧಿ ಮತ್ತು ಬೃಹತ್ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಇಳಿಕೆ ಮಾಡಲಿದೆ. 
ಬಡ್ಡಿದರ ಇಳಿಕೆ ಮತ್ತು ಬ್ಯಾಂಕಿಗೆ ಬರುವ ಹಣದ ಪ್ರಮಾಣದಲ್ಲಿ ಕಡಿಮೆಯಾಗಿರುವುದರಿಂದ ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡಲಾಗುವುದು ಎಂದು ಬ್ಯಾಂಕ್ ಹೇಳಿದ್ದು, ಇತರ ಸಾರ್ವಜನಿಕ ವಲಯ ಬ್ಯಾಂಕ್ ಗಳು ಕೂಡ ಇದನ್ನು ಅನುಸರಿಸುವ ಸಾಧ್ಯತೆಯಿದೆ.
7 ದಿನಗಳಿಂದ 179 ದಿನಗಳ ಅವಧಿಗೆ ಠೇವಣಿಯಿಡುವ ಹಣದ ಮೇಲೆ 50ರಿಂದ 75 ಬೇಸಿಕ್ ಪಾಯಿಂಟ್ ಗಳ(ಬಿಪಿಎಸ್) ಬಡ್ಡಿದರ ಕಡಿತವಾಗಲಿದೆ. ಚಿಲ್ಲರೆ ದೀರ್ಘಾವಧಿ ಮೇಲಿನ ಠೇವಣಿ ದರ 20 ಬಿಪಿಎಸ್ ಕಡಿಮೆಯಾಗಲಿದೆ.  ಇನ್ನು 2 ಕೋಟಿ ರೂಪಾಯಿ ಸ್ಥಿರ ಠೇವಣಿ ಮೇಲಿನ ಬಡ್ಡಿದರ 35 ಬಿಪಿಎಸ್ ನಷ್ಟು ಕಡಿತವಾಗಲಿದೆ. ಹೊಸ ಬಡ್ಡಿದರ ಆಗಸ್ಟ್ 1ರಿಂದ ಜಾರಿಗೆ ಬರಲಿದೆ. 
5ರಿಂದ 10 ವರ್ಷಗಳಲ್ಲಿ ಮೆಚ್ಯೂರಿಟಿಯಾಗುವ ಸ್ಥಿರ ಠೇವಣಿ ಮೇಲಿನ ಬಡ್ಡಿದರ 10 ಬಿಪಿಎಸ್ ನಷ್ಟು ಇಳಿಕೆಯಾಗಿ ಗ್ರಾಹಕರಿಗೆ ಶೇಕಡಾ 6.5ರಷ್ಟು ಬಡ್ಡಿ ಸಿಗಲಿದೆ.
ಎಸ್ ಬಿಐಯ ದರಕ್ಕೆ ಹೋಲಿಕೆ ಮಾಡಿದರೆ ಉಳಿತಾಯ ಯೋಜನೆಗಳಾದ ಪಿಪಿಎಫ್, ಎನ್ಎಸ್ ಸಿ 113 ತಿಂಗಳ ಠೇವಣಿ ಮೇಲೆ ಶೇಕಡಾ 7.9ರಷ್ಟು, ಕಿಸಾನ್ ವಿಕಾಸ್ ಪತ್ರ ಶೇಕಡಾ 7.6 ಬಡ್ಡಿ ನೀಡುತ್ತವೆ. ಇಲ್ಲಿ ಹೆಚ್ಚು ಬಡ್ಡಿ ಸಿಗುವುದರಿಂದ ಗ್ರಾಹಕರು ಇಲ್ಲಿ ಹೂಡಿಕೆ ಮಾಡುವುದು ಮುಂದಿನ ದಿನಗಳಲ್ಲಿ ಹೆಚ್ಚಾಗಬಹುದು. ಎಸ್ ಬಿಐ ಬಡ್ಡಿದರ ಕಡಿತ ಘೋಷಣೆ ಮಾಡುವ ಮುನ್ನ ಬ್ಯಾಂಕ್ ಆಫ್ ಬರೋಡಾ ಠೇವಣಿ ದರವನ್ನು 25 ಬಿಪಿಎಸ್ ನಷ್ಟು ಕಡಿತಗೊಳಿಸಿದೆ. ಅದರ ಒಂದು ವರ್ಷದ ಮತ್ತು 5ರಿಂದ 10 ವರ್ಷಗಳ ಮೇಲಿನ ಮೊತ್ತದ ಬಡ್ಡಿದರ ಶೇಕಡಾ 6.45ರಷ್ಟಿದೆ.
ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರ ಕಡಿತ ಮಾಡಿದರೆ ಹೆಚ್ಚು ಪರಿಣಾಮ ಬೀರುವುದು ಹಿರಿಯ ನಾಗರಿಕರ ಮೇಲೆ. ಇಂತಹ ಸಂದರ್ಭದಲ್ಲಿ ಹಿರಿಯ ನಾಗರಿಕರ ಉಳಿತಾಯ ಯೋಜನೆಗಳು, ಎಲ್ ಐಸಿಯ ಪ್ರಧಾನ ಮಂತ್ರಿ ವಯ ವಂದನ ಯೋಜನೆಯಲ್ಲಿ ಹೂಡಿಕೆ ಮಾಡಬಹುದಾಗಿದ್ದು ಅವುಗಳಿಂದ ಶೇಕಡಾ 8ರಷ್ಟು ಬಡ್ಡಿ ದೊರಕಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT