ಸಾಂದರ್ಭಿಕ ಚಿತ್ರ 
ವಾಣಿಜ್ಯ

ಹತ್ತು ದಿನಗಳಲ್ಲಿ ರಾಷ್ಟ್ರೀಯ ಚಿಲ್ಲರೆ ನೀತಿ ಕರಡು ಬಿಡುಗಡೆ: ಕೇಂದ್ರ ಸರ್ಕಾರ

ಮುಂದಿನ ಹತ್ತು ದಿನಗಳಲ್ಲಿ ರಾಷ್ಟ್ರೀಯ ಚಿಲ್ಲರೆ ನೀತಿಯ ಕರಡನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ಹೇಳಿದೆ.

ನವದೆಹಲಿ: ಮುಂದಿನ ಹತ್ತು ದಿನಗಳಲ್ಲಿ ರಾಷ್ಟ್ರೀಯ  ಚಿಲ್ಲರೆ ನೀತಿಯ ಕರಡನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ಹೇಳಿದೆ.
ವ್ಯಾಪಾರಿ ಕ್ಷೇತ್ರಗಳಿಂದ ಅಭಿಪ್ರಾಯಗಳನ್ನು ಕೋರಲು ಮುಂದಿನ ಹತ್ತು ದಿನಗಳಲ್ಲಿ ರಾಷ್ಟ್ರೀಯ ರೀಟೇಲ್ ನೀತಿಯ ಕರಡನ್ನು ಬಿಡುಗಡೆ ಮಾಡಲಾಗುವುದು ಎಂದು ಡಿಫಿಐಐಟಿ ಕಾರ್ಯದರ್ಶಿ ರಮೇಶ್ ಅಭಿಷೇಕ್ ಹೇಳಿದ್ದಾರೆ.
ವಾಣಿಜ್ಯ ಸಚಿವಾಲಯವು ರಾಷ್ಟ್ರೀಯ ಚಿಲ್ಲರೆ ನೀತಿ ಕುರಿತು ವ್ಯಾಪಾರ ಸಂಘಗಳೊಂದಿಗೆ ಚರ್ಚಿಸಲು ನಡೆಸಿದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ಚಿಲ್ಲರೆ ವ್ಯಾಪಾರದ ಮೂಲ ವಾಸ್ತವತೆಗಳನ್ನು ಅರ್ಥ ಮಾಡಿಕೊಳ್ಳಲು ಸರ್ಕಾರವು ಎಲ್ಲ ಹಂತದಲ್ಲೂ ಪ್ರಯತ್ನಿಸಿದೆ ಮತ್ತು ಅದಕ್ಕನುಗುಣವಾಗಿ ವ್ಯಾಪಾರಿಗಳನ್ನು ಸಂಕಷ್ಟಗಳಿಂದ ಮುಕ್ತಗೊಳಿಸಲು ಮತ್ತು ಆಯಾ ವ್ಯವಹಾರವನ್ನು ರಚನಾತ್ಮಕ ರೀತಿಯಲ್ಲಿ ಬೆಳೆಸಲು ಅನುಕೂಲವಾಗುವಂತೆ ಈ ನೀತಿಯನ್ನು ವಿನ್ಯಾಸಗೊಳಿಸಲಾಗಿದೆ ಎಂದು ಅಭಿಷೇಕ್ ಹೇಳಿದರು.
ಈ ನೀತಿ ಭಾರತದಲ್ಲಿ ಚಿಲ್ಲರೆ ವ್ಯಾಪಾರವನ್ನು ಸುವ್ಯವಸ್ಥಿತಗೊಳಿಸುತ್ತದೆ ಮತ್ತು ವ್ಯಾಪಾರ ಮಾಡಲು ಸುಲಭವಾಗಿಸಲಿದೆ .ಭಾರತದಲ್ಲಿ ಚಿಲ್ಲರೆ ವ್ಯಾಪಾರವು ಸುಮಾರು 650 ಶತಕೋಟಿ ಡಾಲರ್, ದೇಶದಲ್ಲಿ ಸುಗಮ ವ್ಯಾಪಾರ ಚಟುವಟಿಕೆಗಳಿಗೆ ರಾಷ್ಟ್ರೀಯ ಚಿಲ್ಲರೆ ನೀತಿಯು ಹೆಚ್ಚು ಅಗತ್ಯವಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT