ಸಂಗ್ರಹ ಚಿತ್ರ 
ವಾಣಿಜ್ಯ

ಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ: ಒವೈಸಿ ಪಕ್ಷಪಾತಿ ಆರೋಪಕ್ಕೆ ರವಿ ಶಂಕರ್ ಗುರೂಜಿ ತಿರುಗೇಟು

ಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ ಎಂದು ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಿಂದ ನೇಮಕವಾಗಿರುವ ಸಂಧಾನ ಸಮಿತಿ ಸದಸ್ಯ ರವಿಶಂಕರ್ ಗುರೂಜಿ ಹೇಳಿದ್ದಾರೆ.

ನವದೆಹಲಿ: ಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ ಎಂದು ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ನಿಂದ ನೇಮಕವಾಗಿರುವ ಸಂಧಾನ ಸಮಿತಿ ಸದಸ್ಯ ರವಿಶಂಕರ್ ಗುರೂಜಿ ಹೇಳಿದ್ದಾರೆ.
ಅಯೋಧ್ಯೆ ಭೂ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಸಂಧಾನ ಸಮಿತಿಗೆ ಪರ-ವಿರೋಧ ಚರ್ಚೆಗಳು ಆರಂಭವಾಗಿರುವಂತೆಯೇ  ಸಮಿತಿಗೆ ಆರ್ಟ್ ಆಫ್ ಲಿವಿಂಗ್ ನ ಮುಖ್ಯಸ್ಥರಾದ ರವಿಶಂಕರ್ ಗುರೂಜಿ ಅವರ ನೇಮಕ ವಿಚಾರ ಸಂಬಂಧ ಎಐಎಂಎಂ ಪಕ್ಷದ ಮುಖಂಡ ಅಸಾದುದ್ದೀನ್ ಒವೈಸಿ ಮಾಡಿರುವ ಆರೋಪಕ್ಕೆ ರವಿಶಂಕರ್ ಗುರೂಜಿ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ರವಿ ಶಂಕರ್ ಗುರೂಜಿ, ಜನ ತಮಗೇನು ಬೇಕೋ ಅದನ್ನು ಹೇಳುತ್ತಾರೆ. ಅದರ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಅಯೋಧ್ಯೆ ವಿಚಾರ ಬಗೆಹರಿಯಲಿದೆ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಸುಪ್ರೀಂ ಕೋರ್ಟ್ ಸಂಧಾನ ಸಮಿತಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಒವೈಸಿ, ರವಿಶಂಕರ್ ಗುರೂಜಿ ಪಕ್ಷಪಾತಿಯಾಗಿದ್ದು, ಅವರಿಂದ ಸೌಹಾರ್ಧ ಮತ್ತು ನ್ಯಾಯಯುತ ಸಂಧಾನ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಅಲ್ಲದೆ 2018 ನವೆಂಬರ್ 4ರಂದು ರವಿಶಂಕರ್ ಗುರೂಜಿ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ್ದ ಒವೈಸಿ, ಆಯೋಧ್ಯೆ ವಿವಾದ ಬಗೆಹರಿಯದಿದ್ದರೆ ಭಾರತ ಕೂಡ ಸಿರಿಯಾ ಆಗುತ್ತದೆ. ಮುಸ್ಲಿಮರು ತಮ್ಮ ವಾದ ಕೈಬಿಡದಿದ್ದರೆ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂದು  ಹೇಳಿದ್ದರು ಎಂದು ಒವೈಸಿ ಕಿಡಿಕಾರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT