ಸಂಗ್ರಹ ಚಿತ್ರ 
ವಾಣಿಜ್ಯ

18 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲು, ಬಿಎಸ್ಎನ್ಎಲ್ ನೌಕರರಿಗೆ ಸಂಬಳ ವಿಳಂಬ!

ಸರ್ಕಾರಿ ಸ್ವಾಮ್ಯದ ದೂರವಾಣಿ ಸಂಸ್ಥೆ ಬಿಎಸ್ಎನ್ಎಲ್ 18 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತನ್ನ ನೌಕರರಿಗೆ ವೇತನ ವಿಳಂಬ ಮಾಡಿದ್ದರಿಂದ ಸಂಸ್ಥೆಯ 1.68 ಲಕ್ಷ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ನವದೆಹಲಿ: ಸರ್ಕಾರಿ ಸ್ವಾಮ್ಯದ ದೂರವಾಣಿ ಸಂಸ್ಥೆ ಬಿಎಸ್ಎನ್ಎಲ್ 18 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ತನ್ನ ನೌಕರರಿಗೆ ವೇತನ ವಿಳಂಬ ಮಾಡಿದ್ದರಿಂದ ಸಂಸ್ಥೆಯ 1.68 ಲಕ್ಷ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಹೌದು.. 18 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಸ್ವಾಮ್ಯದ ಭಾರತೀಯ ಸಂಚಾರ ನಿಗಮ (ಬಿಎಸ್​ಎನ್​ಎಲ್) ತನ್ನ ಸಿಬ್ಬಂದಿಗೆ ಸಂಬಳ ನೀಡಿಲ್ಲ. ಇದರಿಂದ ಬಿಎಸ್​ಎನ್​ಎಲ್ ನ 1.68 ಲಕ್ಷ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೂಲಗಳ ಪ್ರಕಾರ ಕೇವಲ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರು ಮಾತ್ರವಲ್ಲದೇ ಸಂಸ್ಥೆಯ ಖಾಯಂ ಸಿಬ್ಬಂದಿಗಳೂ ವೇತನವೂ ಆಗಿಲ್ಲ ಎನ್ನಲಾಗಿದೆ.
ಕೆಲ ಸಿಬ್ಬಂದಿಗೆ ಕಳೆದ 3 ತಿಂಗಳಿಂದ ವೇತನ ಸಿಕ್ಕಿಲ್ಲ. ಇನ್ನೂ ಕೆಲವರಿಗೆ ಕಳೆದ ಆರು ತಿಂಗಳಿಂದ ಒಂದೇ ಒಂದು ರೂಪಾಯಿಯೂ ಖಾತೆಗೆ ಜಮಾ ಆಗಿಲ್ಲ. ಈ ಬಗ್ಗೆ ಸಂಸ್ಥೆ ವಿರುದ್ಧ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೇವಲ ಬಿಎಸ್ಎನ್ಎಲ್ ಮಾತ್ರವಲ್ಲದೇ ಅದರ ಸಹೋದರ ಸಂಸ್ಥೆ ಎಂಟಿಎನ್ಎಲ್ ಸಂಸ್ಥೆಯ ಸಿಬ್ಬಂದಿಗೂ ವೇತನ ನೀಡಿಲ್ಲ ಎಂದು ತಿಳಿದುಬಂದಿದೆ.
ಇನ್ನು ಈ ಬಗ್ಗೆ ಸ್ಪಷ್ಟನೆ ನೀಡಿರುವ, 'ಫೆ.28ರಂದೇ ವೇತನ ಪಾವತಿ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಹಾಗಾಗಿ, ಈಗ ಕೆಲವೇ ರಾಜ್ಯಗಳಲ್ಲಿರುವ ಸಿಬ್ಬಂದಿಗೆ ಸಂಬಂಧ ನೀಡಲಾಗುತ್ತಿದೆ. ಆದಾಯ ಬಂದ ನಂತರದಲ್ಲಿ ಉಳಿದ ರಾಜ್ಯಗಳಲ್ಲಿರುವ ಸಿಬ್ಬಂದಿಗೆ ವೇತನ ನೀಡಲಾಗುತ್ತದೆ' ಎಂದು ಸಂಸ್ಥೆ ಹೇಳಿದೆ. ಈಗಿರುವ ನಿಯಮಗಳ ಪ್ರಕಾರ ವೇತನ ನೀಡಲು ಸಂಸ್ಥೆ ಸಾಲ ತೆಗೆದುಕೊಳ್ಳುವಂತಿಲ್ಲ. ಹಾಗಾಗಿ, ವೇತನ ನೀಡಲು ಕೊಂಚ ತಡವಾಗಲಿದೆ ಎನ್ನಲಾಗಿದೆ. ಸಂಸ್ಥೆ ಭಾರೀ ನಷ್ಟದಲ್ಲಿರುವುದರಿಂದ ಉದ್ಯೋಗ ಕಡಿತಗೊಳಿಸಲು ಸಂಸ್ಥೆ ನಿರ್ಧರಿಸಿದೆ ಎನ್ನುವ ವಿಚಾರ ಹರಿದಾಡುತ್ತಿದೆ.
ಎಂಟಿಎನ್ಎಲ್ ನ ಸುಮಾರು 8 ಸಾವಿರಕ್ಕೂ ಅಧಿಕ ಸಿಬ್ಬಂದಿಗೆ ವಿಆರ್ ಎಸ್ ನೀಡಲು ಸಂಸ್ಥೆ ನಿರ್ಧರಿಸಿದೆ ಎನ್ನಲಾಗಿದೆ. ಪ್ರಸ್ತುತ ಬಿಎಸ್ಎನ್ಎಲ್ ಸಂಸ್ಥೆ ಮಾಸಿಕ 750 ಕೋಟಿ ಆದಾಯ ಹೊಂದಿದ್ದು, ಸುಮಾರು 13 ಸಾವಿರ ಕೋಟಿ ರೂ ಸಾಲ ಹೊಂದಿದೆ. ಅಂತೆಯೇ 4ಜಿ ತರಂಗಾಂತರ ಮಾರಾಟದ ಮೂಲಕ ಸಂಸ್ಥೆಗೆ ಸುಮಾರು 6,767 ಆದಾಯ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT