ಜೆಟ್ ಏರ್ ವೇಸ್ ಸ್ಥಾಪಕ ನರೇಶ್ ಗೋಯಲ್ 
ವಾಣಿಜ್ಯ

ಸಾಲ ವಂಚಕರನ್ನು ಹದ್ದುಬಸ್ತಿನಲ್ಲಿಡಲು ಪ್ರಧಾನ ಮಂತ್ರಿ ಕಚೇರಿ ಸೂಚನೆ; ಲುಕ್ ಔಟ್ ನೊಟೀಸ್ ಜಾರಿ

ಸಾಲ ಮರುಪಾವತಿ ಮಾಡದೆ ವಂಚಿಸಿ ದೇಶ ಬಿಟ್ಟು ಹೋಗುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ...

ನವದೆಹಲಿ:ಸಾಲ ಮರುಪಾವತಿ ಮಾಡದೆ ವಂಚಿಸಿ ದೇಶ ಬಿಟ್ಟು ಹೋಗುವವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಮನವಿ ಮೇರೆಗೆ ಡಿಎಚ್ಎಫ್ಎಲ್ ಪ್ರವರ್ತಕರು ಮತ್ತು ಇತರ 19 ವಂಚಕರ ವಿರುದ್ಧ ಗೃಹ ವ್ಯವಹಾರಗಳ ಇಲಾಖೆ ಲುಕ್ ಔಟ್ ನೊಟೀಸ್ ಜಾರಿ ಮಾಡಿದೆ.
ಡಿಎಚ್ಎಫ್ಎಲ್ ನ ಮೂಲ ಪ್ರವರ್ತಕರಾದ ಕಪಿಲ್ ವಧವನ್, ಅರುಣಾ ವಧವನ್ ಮತ್ತು ಧೀರಜ್ ವಧವನ್ ವಿರುದ್ಧ ಲುಕ್ ಔಟ್ ನೊಟೀಸ್ ಜಾರಿ ಮಾಡಲಾಗಿದೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ.
ಸಾಲ ಹಿಂತಿರುಗಿಸದೆ ವಂಚಿಸಿದವರು ಈ ಬಾರಿ ವಿದೇಶಕ್ಕೆ ಪರಾರಿಯಾಗದಂತೆ ನೋಡಿಕೊಳ್ಳಲು ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಕಳೆದ ವಾರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ 20 ಬ್ಯಾಂಕು ಸಾಲ ವಂಚಕರ ಪಟ್ಟಿಯನ್ನು ನೀಡಿತ್ತು. ಅದರಲ್ಲಿ ಜೆಟ್, ಡಿಎಚ್ ಎಫ್ಎಲ್, ರಿಯಾಲ್ಟಿ ಕಂಪೆನಿಯ ಪ್ರೊಮೊಟರ್ ಗಳ ಹೆಸರುಗಳು ಕೂಡ ಇದ್ದವು. ಈ ವಾರ ಹೊಸ ಪಟ್ಟಿಯನ್ನು ಗೃಹ ಇಲಾಖೆಯ ಸಚಿವಾಲಯಕ್ಕೆ ನೀಡಲಾಗುವುದು ಎಂದು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ, ಮೆಹುಲ್ ಚೊಕ್ಸಿ ಮತ್ತು ಇನ್ನೂ ಹಲವು ಖ್ಯಾತ ಉದ್ಯಮಿಗಳು ಬ್ಯಾಂಕುಗಳಿಗೆ ಸಾವಿರಾರು ಕೋಟಿ ರೂಪಾಯಿ ವಂಚಿಸಿ ದೇಶ ಬಿಟ್ಟು ಹೋದ ನಂತರ ಸರ್ಕಾರ ತೀವ್ರ ಮುಜುಗರ ಅನುಭವಿಸಿತ್ತು. ಈ ರೀತಿ ಬ್ಯಾಂಕುಗಳ ವ್ಯವಹಾರಗಳಲ್ಲಿ ಅಕ್ರಮ ವಹಿವಾಟು ನಡೆಸುತ್ತಿರುವ ವಂಚನೆಯಲ್ಲಿ ಭಾಗಿಯಾಗಿರುವ ಕಂಪೆನಿಗಳು, ಪ್ರವರ್ತಕರು ಮತ್ತು ನಿರ್ದೇಶಕರನ್ನು ಕಟ್ಟಿಹಾಕುವಂತೆ ಪ್ರಧಾನ ಮಂತ್ರಿ ಕಚೇರಿಯಿಂದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯಕ್ಕೆ ಹಸಿರು ನಿಶಾನೆ ಸಿಕ್ಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?