ನಿರ್ಮಲಾ ಸೀತಾರಾಮನ್ 
ವಾಣಿಜ್ಯ

ಅತಿದೊಡ್ಡ ಖಾಸಗೀಕರಣ: ಬಿಪಿಸಿಎಲ್, ಎಸ್ ಸಿಐ,ಕಾನ್ಕೋರ್ ನಲ್ಲಿನ ಷೇರು ಮಾರಾಟಕ್ಕೆ ಕೇಂದ್ರ ಸಂಪುಟ ಒಪ್ಪಿಗೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್ ) ಮತ್ತು ಶಿಪ್ಪಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಸ್ ಸಿಐ)  ಹಾಗೂ  ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ತಾನು ಹೊಂದಿರುವ ಎಲ್ಲಾ ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು   ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ನವದೆಹಲಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್ ) ಮತ್ತು ಶಿಪ್ಪಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಸ್ ಸಿಐ)  ಹಾಗೂ  ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ತಾನು ಹೊಂದಿರುವ ಎಲ್ಲಾ ಷೇರುಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲು   ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಷೇರು ಮಾರಾಟದ ಮೂಲಕ ಸರ್ಕಾರಿ ಸ್ವಾಮ್ಯದ ಈ ಎರಡು ಕಂಪನಿಗಳಿಂದ ನಿರ್ಗಮಿಸಲು ಸರ್ಕಾರ ಸಿದ್ಧತೆ ನಡೆಸಿದೆ.  ಸ್ಪೇಕ್ಟ್ರಮ್ ಪಾವತಿಗಾಗಿ ಎರಡು ವರ್ಷಗಳ ನಿಷೇಧವನ್ನು ಕ್ಯಾಬಿನೆಟ್ ಅಂಗೀಕರಿಸಿದೆ. 

ಸರ್ಕಾರಿ ಸ್ವಾಮ್ಯದ ಎರಡು ಕಂಪನಿಗಳ ಷೇರುಗಳ ಮಾರಾಟವೂ ಎನ್ ಡಿಎ ಸರ್ಕಾರದ ಮಹತ್ವದ ಕಾರ್ಯತಂತ್ರವಾಗಿದೆ.  ನುಮಲಿಗಡ್ ರೆಫಿನರಿ ತನ್ನ ಬಂಡವಾಳವನ್ನು ಹಿಂತೆಗೆದುಕೊಂಡ ಬಳಿಕ ಸರ್ಕಾರ ಬಿಪಿಸಿಲ್ ನಲ್ಲಿನ  ಒಟ್ಟು ಶೇ. 53. 29 ರಷ್ಟು ಹೊಂದಿರುವ ತನ್ನ ಎಲ್ಲಾ ಷೇರುಗಳನ್ನು ಮಾರಾಟ ಮಾಡಲಿದೆ ಎಂದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 

ತೆಹ್ರಿ ಜಲ ಅಭಿವೃದ್ಧಿ ನಿಗಮ, ನಾರ್ತ್ ಈಸ್ಟನ್ ಎಲೆಕ್ಟ್ರಿಕ್ ಪವರ್ ಕಾರ್ಪೋರೇಷನ್ ಲಿಮೆಟೆಡ್ ನಿಂದ ರಾಜ್ಯ ನಡೆಸುವ ಎನ್ ಟಿಪಿಸಿ ಲಿಮಿಟೆಡ್ ನಿಂದಲೂ ಸರ್ಕಾರ ತನ್ನ ಷೇರುಗಳನ್ನು ಮಾರಾಟ ಮಾಡಲಿದೆ ಎಂದು ಅವರು ಹೇಳಿದ್ದಾರೆ. 

ನಿರ್ವಹಣಾ ನಿಯಂತ್ರಣವನ್ನು ಉಳಿಸಿಕೊಂಡು ಆಯ್ದ ಸಾರ್ವಜನಿಕ ಸ್ವಾಮ್ಯದ ಕಂಪನಿಗಳಲ್ಲಿ ಸರ್ಕಾರದ ಪಾಲನ್ನು ಶೇಕಡಾ 51ಕ್ಕಿಂತಲೂ ಕಡಿಮೆ ಮಾಡಿಕೊಳ್ಳಲು ಕ್ಯಾಬಿನೆಟ್ ಅನುಮೋದಿಸಿದೆ. ಪ್ರಸ್ತುತ ಬಿಪಿಸಿಎಲ್ ನಲ್ಲಿ ಶೇ. 53. 29 ಹಾಗೂ ಎಸ್ ಸಿಐನಲ್ಲಿ ಶೇ. 63. 75 ರಷ್ಟು ಷೇರುಗಳನ್ನು ಸರ್ಕಾರ ಹೊಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT