ಅಂಬಾನಿ-ಅದಾನಿ-ಫೋರ್ಬ್ಸ್ ಶ್ರೀಮಂತರ ಪಟ್ಟಿ 
ವಾಣಿಜ್ಯ

ಫೋರ್ಬ್ಸ್ ಇಂಡಿಯಾ ಶ್ರೀಮಂತರ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡ ಮುಖೇಶ್ ಅಂಬಾನಿ

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು  ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಈ ವರ್ಷವೂ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಈ ವರ್ಷ ಅವರ ಒಟ್ಟು ಆಸ್ತಿ ಮೌಲ್ಯ 51.4 ಶತಕೋಟಿ ಡಾಲರ್‌ಗೆ ಏರಿದೆ.

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರು  ಫೋರ್ಬ್ಸ್‌ನ ಶ್ರೀಮಂತ ಭಾರತೀಯರ ಪಟ್ಟಿಯಲ್ಲಿ ಈ ವರ್ಷವೂ ಸತತ 12 ನೇ ಬಾರಿಗೆ  ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಈ ವರ್ಷ ಅವರ ಒಟ್ಟು ಆಸ್ತಿ ಮೌಲ್ಯ 51.4 ಶತಕೋಟಿ ಡಾಲರ್‌ಗೆ ಏರಿದೆ.

'ಅಂಬಾನಿ ಅವರು ತಮ್ಮ ಆಸ್ತಿಗೆ 4.1 ಬಿಲಿಯನ್ ಡಾಲರ್‌ ಹೆಚ್ಚುವರಿ ಸೇರಿಸಿದ್ದಾರೆ. ತಮ್ಮ ರಿಲಯನ್ಸ್  ಇಂಡಸ್ಟ್ರೀಸ್‌ನ ಮೂರು ವರ್ಷದ ಹಳೆಯ ಟೆಲಿಕಾಂ ಘಟಕವಾದ ಜಿಯೋ, 340 ದಶಲಕ್ಷ ಚಂದಾದಾರರನ್ನು  ಹೊಂದಿರುವ ಭಾರತದ ಅತಿದೊಡ್ಡ ಮೊಬೈಲ್ ಸೇವಾ ಕಂಪೆನಿಗಳಲ್ಲಿ ಒಂದಾಗಿದೆ.' ಎಂದು ಫೋರ್ಬ್ಸ್  ಹೇಳಿದೆ. 

ಆರ್ಥಿಕ ಕುಸಿತದಿಂದಾಗಿ ದೇಶದ ಶ್ರೀಮಂತರಿಗೆ ಈ ವರ್ಷ ದೊಡ್ಡ ಸವಾಲಿನ ವರ್ಷವಾಗಿದೆ.  2019 ರ  ಪಟ್ಟಿಯಲ್ಲಿ ಉದ್ಯಮಿಗಳ ಒಟ್ಟು ಸಂಪತ್ತಿನಲ್ಲಿ ಶೇ8 ರಷ್ಟು ಕುಸಿತ ಕಂಡಿದೆ. ಇದು  452 ಶತಕೋಟಿ ಡಾಲರ್‌ ಆಗಿದೆ ಎಂದು ಫೋರ್ಬ್ಸ್‌ ಹೇಳಿದೆ. 

ಈ  ಪಟ್ಟಿಯಲ್ಲಿ ಅಂಬಾನಿ  ಮತ್ತು ಅದಾನಿ ನಂತರ ಅಶೋಕ್ ಲೇಲ್ಯಾಂಡ್ ಮಾಲೀಕರಾದ  ಹಿಂದೂಜಾ ಸಹೋದರರು,  ಶಪೂರ್ಜಿ ಪಲ್ಲೊಂಜಿ ಗ್ರೂಪ್‌ನ ಪಲ್ಲೊಂಜಿ ಮಿಸ್ತ್ರಿ, ಕೊಟಕ್ ಮಹೀಂದ್ರಾ ಬ್ಯಾಂಕಿನ  ಉದಯ್ ಕೊಟಕ್ ಹಾಗೂ ಎಚ್‌ಸಿಎಲ್ ಟೆಕ್ನಾಲಜೀಸ್‌ನ ಶಿವ ನಾಡರ್ ನಂತರದ  ಸ್ಥಾನಗಳಲ್ಲಿದ್ದಾರೆ.  4 ಶತಕೋಟಿ ಡಾಲರ್‌ ಮೊತ್ತದ ಆಸ್ತಿ ಏರಿಕೆಯಿಂದ ಉದಯ್ ಕೊಟಕ್  ಮೊದಲ ಬಾರಿಗೆ ಮೊದಲ ಐದು ಸ್ಥಾನಕ್ಕೆ ಏರಿದ್ದಾರೆ.

ಮೂಲಸೌಕರ್ಯ ವಲಯದ ಉದ್ಯಮಿ ಗೌತಮ್ ಅದಾನಿ ಅವರ ಸಂಪತ್ತಿನಲ್ಲೂ ಗಣನೀಯ ಹೆಚ್ಚಳವಾಗಿದೆ. 15.7  ಶತಕೋಟಿ ಡಾಲರ್ ಮೌಲ್ಯದ ಆಸ್ತಿ ಏರಿಕೆಯೊಂದಿಗೆ ಹಿಂದಿನ ವರ್ಷ ಎಂಟನೇ ಸ್ಥಾನದಲ್ಲಿದ್ದ ಅದಾನಿ, ಪಟ್ಟಿಯಲ್ಲಿ  ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT