ಸಾಂದರ್ಭಿಕ ಚಿತ್ರ 
ವಾಣಿಜ್ಯ

ಅ.22ರಂದು ಬ್ಯಾಂಕು ಒಕ್ಕೂಟಗಳ ಮುಷ್ಕರ: ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ 

ಬ್ಯಾಂಕು ವಿಲೀನ, ಠೇವಣಿ ದರ ಇಳಿಕೆ ವಿರೋಧಿಸಿ ಮತ್ತು ಉದ್ಯೋಗ ಭದ್ರತೆಗೆ ಕರೆ ನೀಡಿ ಎರಡು ಬ್ಯಾಂಕು ಒಕ್ಕೂಟಗಳು ಇದೇ 22ರಂದು ಮುಷ್ಕರ ನಡೆಸಲು ಸಜ್ಜಾಗಿರುವುದರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಅಂದು ವ್ಯತ್ಯಯವಾಗುವ ಸಾಧ್ಯತೆಯಿದೆ. 

ನವದೆಹಲಿ; ಬ್ಯಾಂಕು ವಿಲೀನ, ಠೇವಣಿ ದರ ಇಳಿಕೆ ವಿರೋಧಿಸಿ ಮತ್ತು ಉದ್ಯೋಗ ಭದ್ರತೆಗೆ ಕರೆ ನೀಡಿ ಎರಡು ಬ್ಯಾಂಕು ಒಕ್ಕೂಟಗಳು ಇದೇ 22ರಂದು ಮುಷ್ಕರ ನಡೆಸಲು ಸಜ್ಜಾಗಿರುವುದರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಅಂದು ವ್ಯತ್ಯಯವಾಗುವ ಸಾಧ್ಯತೆಯಿದೆ. 


ಅಖಿಲ ಭಾರತ ಬ್ಯಾಂಕು ಉದ್ಯೋಗಿಗಳ ಸಂಘ ಮತ್ತು ಭಾರತೀಯ ಬ್ಯಾಂಕು ಉದ್ಯೋಗಿಗಳ ಫೆಡರೇಶನ್ (ಬಿಇಎಫ್ಐ), ಭಾರತೀಯ ಬ್ಯಾಂಕು ಅಸೋಸಿಯೇಷನ್ ಗೆ ಮಾಹಿತಿ ನೀಡಿ ಅಕ್ಟೋಬರ್ 22ರಂದು ಬೆಳಗ್ಗೆ 6 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಮುಷ್ಕರ ನಡೆಸುವುದಾಗಿ ಹೇಳಿದೆ.


ಮುಷ್ಕರದಲ್ಲಿ ನಿರತವಾಗುವ ಸಂಘಟನೆಗಳಿಗೆ ತಮ್ಮ ಬ್ಯಾಂಕಿನ ಬಹುತೇಕ ನೌಕರರು ಸದಸ್ಯರಾಗಿಲ್ಲದಿರುವುದರಿಂದ ಇದರ ಪರಿಣಾಮ ಕಡಿಮೆಯಿರಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಸಿಂಡಿಕೇಟ್ ಬ್ಯಾಂಕುಗಳು ಗ್ರಾಹಕರಿಗೆ ಸೇವೆ ಒದಗಿಸುವಲ್ಲಿ ವ್ಯತ್ಯಯವಾಗಲಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT