ನಂದನ್ ನೀಲೇಕಣಿ 
ವಾಣಿಜ್ಯ

ಅನಾಮಿಕ ಪತ್ರ; ಸ್ವತಂತ್ರ ತನಿಖೆಗೆ ನಂದನ್ ನಿಲೇಕಣಿ ತೀರ್ಮಾನ

ಭಾರತದ ಪ್ರಮುಖ ಐಟಿ ಸಂಸ್ಥೆ ಇನ್ಫೋಸಿಸ್ ಲಿ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಮುಖ್ಯ ಹಣಕಾಸು ಅಧಿಕಾರಿ (ಸಿಇಒ) ಕುರಿತು ಅನಾಮಿಕ ವ್ಯಕ್ತಿಯೋರ್ವರು ಮಾಡಿರುವ ಆರೋಪಗಳನ್ನು ಲೆಕ್ಕಪತ್ರ ಸಮಿತಿಗೆ ವರ್ಗಾಯಿಸಲಾಗಿದೆ. 

ಬೆಂಗಳೂರು: ಭಾರತದ ಪ್ರಮುಖ ಐಟಿ ಸಂಸ್ಥೆ ಇನ್ಫೋಸಿಸ್ ಲಿ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಮುಖ್ಯ ಹಣಕಾಸು ಅಧಿಕಾರಿ (ಸಿಇಒ) ಕುರಿತು ಅನಾಮಿಕ ವ್ಯಕ್ತಿಯೋರ್ವರು ಮಾಡಿರುವ ಆರೋಪಗಳನ್ನು ಲೆಕ್ಕಪತ್ರ ಸಮಿತಿಗೆ ವರ್ಗಾಯಿಸಲಾಗಿದೆ. 
  
ರಾಷ್ಟ್ರೀಯ ವಿನಿಮಯ ಮತ್ತು ನ್ಯೂಯಾರ್ಕ್ ಷೇರು ಕಂಪನಿ, ಬಿಎಸ್ ಇ ಲಿ.ಗೆ ಬರೆದಿರುವ ಪತ್ರದಲ್ಲಿ ಇನ್ಫೋಸಿಸ್, ಆಡಳಿತ ಮಂಡಳಿ ಸದಸ್ಯರೊಬ್ಬರಿಗೆ ಕಳೆದ ಸಪ್ಟೆಂಬರ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬರು ಪತ್ರ ಬರೆದಿದ್ದು, ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಅದನ್ನು ವಸ್ತುನಿಷ್ಠವಾಗಿ ಪರಿಹರಿಸಲಾಗುವುದು ಎಂದು ತಿಳಿಸಿದೆ. 
  
ಅನಾಮಿಕ ಪತ್ರದಲ್ಲಿ ಕಂಪನಿಯ ಸಿಇಒ ಅಮೆರಿಕ ಮತ್ತು ಮುಂಬೈಗೆ ಕೈಗೊಂಡ ಅಂತಾರಾಷ್ಟ್ರೀಯ ಪ್ರಯಾಣದಲ್ಲಿ ಅವ್ಯವಹಾರ ನಡೆದಿರುವ ಕುರಿತು ದೂರುಗಳಿಗೆ. ಈ ಸಂಬಂಧ ಸಿಇಒ ಹಾಗೂ ಸಿಎಫ್ ಒ ವಿರುದ್ಧ ಸ್ವತಂತ್ರ ತನಿಖೆಗೆ ಆದೇಶಿಸಲಾಗುವುದು ಎಂದು ಕಂಪನಿ ಭರವಸೆ ನೀಡಿದೆ. 
 

ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಫಲಿತಾಂಶವನ್ನು ಆಧರಿಸಿ ಲೆಕ್ಕಪತ್ರ ಸಮಿತಿಯೊಂದಿಗೆ ಸಮಾಲೋಚನೆ ನಡೆಸಿ, ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಕಂಪನಿ ತಿಳಿಸಿದೆ. 
 
ಬಿಎಸ್ ಇ, ರಾಷ್ಟ್ರೀಯ ವಿನಿಮಯ ಮತ್ತು ನ್ಯೂಯಾರ್ಕ್ ಷೇರು ವಿನಿಮಯ ಮಾರುಕಟ್ಟೆಗಳಿಗೆ ಕಂಪನಿಯ ಅಧ್ಯಕ್ಷ ನಂದನ್ ನೀಲೇಕಣಿ ಹೆಸರಿನಲ್ಲಿ ಪತ್ರ ಬರೆಯಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT